Homeಮುಖಪುಟಆದೇಶ ಉಲ್ಲಂಘಿಸಿ 'ಬುಲ್ಡೋಝರ್ ಕಾರ್ಯಾಚರಣೆ' : ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ಆದೇಶ ಉಲ್ಲಂಘಿಸಿ ‘ಬುಲ್ಡೋಝರ್ ಕಾರ್ಯಾಚರಣೆ’ : ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ನೋಟಿಸ್

- Advertisement -
- Advertisement -

ತನ್ನ ಆದೇಶ ಉಲ್ಲಂಘಿಸಿ ಬುಲ್ಡೋಝರ್ ಕಾರ್ಯಾಚರಣೆ ನಡೆಸಿದ ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇಂದು (ಸೆ.30) ನೋಟಿಸ್ ಜಾರಿ ಮಾಡಿದೆ.

ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶದಲ್ಲಿ ಎಲ್ಲೂ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು 2024 ರ ಸೆಪ್ಟೆಂಬರ್ 17 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದನ್ನು ಉಲ್ಲಂಘಿಸಿ ಕಟ್ಟಡಗಳನ್ನು ಕೆಡವಿದ ಅಸ್ಸಾಂ ಸರ್ಕಾರದ ವಿರುದ್ದ, ಅಲ್ಲಿನ 47 ನಾಗರಿಕರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ಅಸ್ಸಾಂ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದ್ದು, ಮೂರು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಈ ಮಧ್ಯೆ ಕಕ್ಷಿದಾರರು ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆದೇಶಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ, “ನ್ಯಾಯಾಲಯದ ಆದೇಶದ ಘೋರ ಉಲ್ಲಂಘನೆಯಾಗಿದೆ” ಎಂದಿದ್ದಾರೆ.

ಸೆಪ್ಟೆಂಬರ್ 17ರಂದು ಆದೇಶ ಹೊರಡಿಸಿದ್ದ ಸುಪ್ರೀಂ ಕೋರ್ಟ್, ಸಾರ್ವಜನಿಕ ರಸ್ತೆ, ಫುಟ್‌ಪಾತ್‌, ರೈಲು ಮಾರ್ಗಗಳ ನಿರ್ಮಾಣಕ್ಕಾಗಿ ಮತ್ತು ಜಲಮೂಲಗಳ ಅತಿಕ್ರಮಣಗಳ ತೆರವು ಹೊರತು, ದೇಶದಲ್ಲಿ ಎಲ್ಲೂ ಬುಲ್ಡೋಝರ್ ಕಾರ್ಯಾಚರಣೆ ನಡೆಸಬಾರದು ಎಂದು ಸೂಚಿಸಿತ್ತು.

ಈ ಆದೇಶ ಹೊರ ಬಿದ್ದ ಸ್ವಲ್ಪ ದಿನಗಳ ನಂತರ ಅಸ್ಸಾಂ ಸರ್ಕಾರದ ವಿರುದ್ದ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. ಅತಿಕ್ರಮಣ ಮಾಡಲಾಗಿದೆ ಎಂದು ಅಸ್ಸಾಂ ಸರ್ಕಾರದ ಅಧಿಕಾರಿಗಳು ನಮ್ಮ ಮನೆಗಳನ್ನು ನೆಲಸಮಗೊಳಿಸಲು ಗುರುತು ಮಾಡುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ಕಾರ ಮನೆಗಳನ್ನು ಕೆಡವಿದೆ ಎಂದು ಇಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ ವಕೀಲ ಹುಝೆಫಾ ಅಹ್ಮದಿ, ಬುಲ್ಡೋಝರ್ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಆದ್ದರಿಂದ
ಸರ್ಕಾರ ಯಥಾಸ್ಥಿತಿ ಕಾಪಾಡಿಕೊಳ್ಳಲು ನ್ಯಾಯಾಲಯ ಆದೇಶಿಸಬೇಕು ಎಂದು ಕೋರಿದ್ದಾರೆ.

ಅಸ್ಸಾಂನ ಕಮ್ರೂಪ್ ಮೆಟ್ರೋ ಜಿಲ್ಲೆಯ ಸೋನಪುರ್ ಮೌಜಾದ ಕಚುಟೋಲಿ ಪಥರ್ ಮತ್ತು ಇತರ ಅಕ್ಕಪಕ್ಕದ ಪ್ರದೇಶಗಳ ನಿವಾಸಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ನಾವು ನಮ್ಮ ಮನೆಗಳ ಜಮೀನಿನ ಮೂಲ ಪಟ್ಟದಾರರ (ಭೂಮಾಲೀಕರು) ಜೊತೆ ಒಪ್ಪಂದ ಮಾಡಿಕೊಂಡು ಹಲವಾರು ದಶಕಗಳಿಂದ ಮನೆ ಕಟ್ಟಿ ವಾಸಿಸುತ್ತಿದ್ದೇವೆ. ನಾವು ಭೂಮಿಯ ಮಾಲೀಕರಲ್ಲದಿದ್ದರೂ, ನಮ್ಮ ಮನೆಗಳು ಕಾನೂನುಬದ್ಧವಾಗಿ ಮಾನ್ಯವಾಗಿದೆ ಮತ್ತು ಒಪ್ಪಂದಗಳಿಂದ ಗುರುತಿಸಲ್ಪಟ್ಟಿದೆ ಎಂದು ಹೇಳಿದ್ದರು.

ಸರ್ಕಾರಿ ಅಧಿಕಾರಿಗಳು ಯಾವುದೇ ಪೂರ್ವ ಸೂಚನೆ ನೀಡದೆ ನಮ್ಮ ಮನೆಗಳನ್ನು ಕೆಡವಲು ಕೆಂಪು ಸ್ಟಿಕ್ಕರ್‌ಗಳನ್ನು ಹಾಕಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಕ್ರಮವು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ, ನಿರ್ದಿಷ್ಟವಾಗಿ ಅಸ್ಸಾಂ ಭೂ ಮತ್ತು ಕಂದಾಯ ನಿಯಂತ್ರಣದ ಅಧ್ಯಾಯ Xನ ಸೆಕ್ಷನ್ 165(3) ಕ್ಕೆ ವಿರುದ್ದವಾಗಿದೆ. ಕಾನೂನಿನ ಪ್ರಕಾರ, ಅಧಿಕಾರಿಗಳು ಮನೆಗಳನ್ನು ತೆರವುಗೊಳಿಸುವ ಮುನ್ನ ಸೂಚನೆಯನ್ನು ನೀಡಬೇಕು ಮತ್ತು ನಿವಾಸಿಗಳಿಗೆ ಒಂದು ತಿಂಗಳ ಅವಧಿಯ ಸಮಯ ಒದಗಿಸಬೇಕು. ಆದರೆ, ಇವೆಲ್ಲವನ್ನೂ ಸರ್ಕಾರ ಉಲ್ಲಂಘಿಸಿ ಎಂದಿದ್ದಾರೆ.

ಇದನ್ನೂ ಓದಿ : ಜಮ್ಮು-ಕಾಶ್ಮೀರ: ಚುನಾವಣಾ ಪ್ರಚಾರದ ವೇಳೆ ಲೋಕಸಭಾ ಸಂಸದ ಇಂಜಿನಿಯರ್ ರಶೀದ್ ಕಾರಿನ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...