Homeಮುಖಪುಟಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

- Advertisement -
- Advertisement -

ಸೋಮವಾರ ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ನಡೆದ ‘ಮಾನವ ಹಕ್ಕುಗಳ ರಕ್ಷಣೆ, ನಾಗರಿಕ ಸ್ವಾತಂತ್ರ್ಯದ ರಕ್ಷಣೆ: ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳ ಪಾತ್ರ’ ಕುರಿತ ವಿಚಾರಸಂಕಿರಣದಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಕೆಲವು ಕಠಿಣ ಪ್ರಶ್ನೆಗಳನ್ನು ಎದುರಿಸಿದ್ದಾರೆ.

ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆಗಳ ಧ್ವಂಸ, ಹಿಜಾಬ್ ವಿವಾದ, ಬಾಬರಿ ಮಸೀದಿ ತೀರ್ಪುಗಳಿಗೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್‌ ಮುಸ್ಲಿಂ ಅಲ್ಪಸಂಖ್ಯಾತರಿಗೆ ನೀಡಿರುವ ನ್ಯಾಯದ ಕುರಿತು ಪ್ರಶ್ನಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿ, “ಬಹುತೇಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿವೆ. ಅವುಗಳ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ನ್ಯಾಯಾಧೀಶರಾದ ಬಳಿಕ ಕೆಲವು ನಿರ್ಬಂಧಗಳಿವೆ” ಎಂದಿದ್ದಾರೆ.

ಬಾಬರಿ ಮಸೀದಿ ಪ್ರಕರಣದಲ್ಲಿ ರಾಮ ಜನ್ಮಭೂಮಿ ಪರವಾಗಿ ತೀರ್ಪು ಹೊರಬಿದ್ದಿತು. “ತೀರ್ಪು ನೀಡಿದ ಪೀಠದ ಭಾಗವಾಗಿರುವುದರಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ.

ಮುಸ್ಲಿಮರು ಅಥವಾ ಇತರ ಅಲ್ಪಸಂಖ್ಯಾತರ ವಿರುದ್ಧದ ತಾರತಮ್ಯದ ಪ್ರಕರಣಗಳನ್ನು ನ್ಯಾಯಾಲಯಗಳು ವ್ಯವಹರಿಸುವುದಿಲ್ಲ ಎಂಬ ಅನಿಸಿಕೆಗಳಿವೆ ಎಂದ ಅವರು, “ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು, ಈ ವಿಷಯದ ಬಗ್ಗೆ ನೋಟಿಸ್ ನೀಡಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ರಕ್ಷಣೆಯ ಮೊದಲ ಅಸ್ತ್ರವಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ವಿಷಯಗಳಲ್ಲಿ ನ್ಯಾಯಾಲಯವು ಧಾರ್ಮಿಕ ಪಂಥಗಳು ಮತ್ತು ನ್ಯಾಯಶಾಸ್ತ್ರದ ಪ್ರತಿಪಾದನೆಗಳನ್ನು ಎತ್ತಿಹಿಡಿದಿದೆ. ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಅಲ್ಪಸಂಖ್ಯಾತರ ಹಕ್ಕನ್ನು ನಾವು ಎತ್ತಿ ಹಿಡಿದಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ವೆಬ್‌ನಲ್ಲಿಯೂ ನ್ಯಾಯಮೂರ್ತಿ ಚಂದ್ರಚೂಡ್ ಅವರ ಭಾಷಣ ಪ್ರಸಾರವಾಗಿದ್ದು, ಸುಪ್ರೀಂ ಕೋರ್ಟ್‌ನಿಂದ ನಿರ್ಣಯಿಸಲಾದ ಹಲವಾರು ಪ್ರಮುಖ ಮಾನವ ಹಕ್ಕುಗಳ ಪ್ರಕರಣಗಳ ಕುರಿತು ಅವರು ಮಾತನಾಡಿರುವುದನ್ನು ಕಾಣಬಹುದು.

ಮಹಿಳೆಯರಿಂದ ಹಿಡಿದು LGBTQ+ ಸಮುದಾಯದವರೆಗೆ ಭಾರತದ ವಿವಿಧ ವಿಭಾಗದ ಜನರ ಮಾನವ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ವಹಿಸಿರುವ ಮಹತ್ವದ ಪಾತ್ರದ ಕುರಿತು ವಿವರಿಸಿದ್ದಾರೆ.

ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ “ಸಂಪೂರ್ಣ ನ್ಯಾಯ” ನೀಡಲು ಸುಪ್ರೀಂ ಕೋರ್ಟ್‌ ಮುಂದಿರುವ ಸವಾಲುಗಳ ಕುರಿತು ಅವರು ಪ್ರಸ್ತಾಪಿಸಿದ್ದರೆ. “ನ್ಯಾಯಾಧೀಶರೂ ತಪ್ಪು ಮಾಡಬಹುದು. ಒಮ್ಮೆ ಅಂತಿಮ ಎಂದು ಭಾವಿಸಿದ ನಿರ್ಧಾರಗಳನ್ನು ನಂತರದ ಪೀಳಿಗೆಯಿಂದ ಪರಿಶೀಲಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

(ಭಾಷಣದ ಪೂರ್ಣ ಪಠ್ಯವನ್ನು ‘ಇಲ್ಲಿ’ ಓದಬಹುದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...