Homeಮುಖಪುಟಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

ಬುಲ್ಡೋಜರ್‌‌, ಹಿಜಾಬ್‌, ಬಾಬ್ರಿ ಮಸೀದಿ ಪ್ರಕರಣ: ಲಂಡನ್‌ನಲ್ಲಿ ಜಸ್ಟೀಸ್ ಚಂದ್ರಚೂಡ್‌ ಹೇಳಿದ್ದೇನು?

- Advertisement -
- Advertisement -

ಸೋಮವಾರ ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ನಡೆದ ‘ಮಾನವ ಹಕ್ಕುಗಳ ರಕ್ಷಣೆ, ನಾಗರಿಕ ಸ್ವಾತಂತ್ರ್ಯದ ರಕ್ಷಣೆ: ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳ ಪಾತ್ರ’ ಕುರಿತ ವಿಚಾರಸಂಕಿರಣದಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರು ಕೆಲವು ಕಠಿಣ ಪ್ರಶ್ನೆಗಳನ್ನು ಎದುರಿಸಿದ್ದಾರೆ.

ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆಗಳ ಧ್ವಂಸ, ಹಿಜಾಬ್ ವಿವಾದ, ಬಾಬರಿ ಮಸೀದಿ ತೀರ್ಪುಗಳಿಗೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್‌ ಮುಸ್ಲಿಂ ಅಲ್ಪಸಂಖ್ಯಾತರಿಗೆ ನೀಡಿರುವ ನ್ಯಾಯದ ಕುರಿತು ಪ್ರಶ್ನಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿ, “ಬಹುತೇಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿವೆ. ಅವುಗಳ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ನ್ಯಾಯಾಧೀಶರಾದ ಬಳಿಕ ಕೆಲವು ನಿರ್ಬಂಧಗಳಿವೆ” ಎಂದಿದ್ದಾರೆ.

ಬಾಬರಿ ಮಸೀದಿ ಪ್ರಕರಣದಲ್ಲಿ ರಾಮ ಜನ್ಮಭೂಮಿ ಪರವಾಗಿ ತೀರ್ಪು ಹೊರಬಿದ್ದಿತು. “ತೀರ್ಪು ನೀಡಿದ ಪೀಠದ ಭಾಗವಾಗಿರುವುದರಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ.

ಮುಸ್ಲಿಮರು ಅಥವಾ ಇತರ ಅಲ್ಪಸಂಖ್ಯಾತರ ವಿರುದ್ಧದ ತಾರತಮ್ಯದ ಪ್ರಕರಣಗಳನ್ನು ನ್ಯಾಯಾಲಯಗಳು ವ್ಯವಹರಿಸುವುದಿಲ್ಲ ಎಂಬ ಅನಿಸಿಕೆಗಳಿವೆ ಎಂದ ಅವರು, “ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು, ಈ ವಿಷಯದ ಬಗ್ಗೆ ನೋಟಿಸ್ ನೀಡಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ರಕ್ಷಣೆಯ ಮೊದಲ ಅಸ್ತ್ರವಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ವಿಷಯಗಳಲ್ಲಿ ನ್ಯಾಯಾಲಯವು ಧಾರ್ಮಿಕ ಪಂಥಗಳು ಮತ್ತು ನ್ಯಾಯಶಾಸ್ತ್ರದ ಪ್ರತಿಪಾದನೆಗಳನ್ನು ಎತ್ತಿಹಿಡಿದಿದೆ. ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಅಲ್ಪಸಂಖ್ಯಾತರ ಹಕ್ಕನ್ನು ನಾವು ಎತ್ತಿ ಹಿಡಿದಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿರಿ: ಪಠ್ಯಪುಸ್ತಕ ರಚನೆಯಲ್ಲಿ ಸಮಿತಿ ಸದಸ್ಯರ ಅಭಿಪ್ರಾಯ ತಿರಸ್ಕರಿಸಿ ಏಕಪಕ್ಷೀಯ ಪಠ್ಯ ರಚಿಸಿದ ಚಕ್ರತೀರ್ಥ!

ವೆಬ್‌ನಲ್ಲಿಯೂ ನ್ಯಾಯಮೂರ್ತಿ ಚಂದ್ರಚೂಡ್ ಅವರ ಭಾಷಣ ಪ್ರಸಾರವಾಗಿದ್ದು, ಸುಪ್ರೀಂ ಕೋರ್ಟ್‌ನಿಂದ ನಿರ್ಣಯಿಸಲಾದ ಹಲವಾರು ಪ್ರಮುಖ ಮಾನವ ಹಕ್ಕುಗಳ ಪ್ರಕರಣಗಳ ಕುರಿತು ಅವರು ಮಾತನಾಡಿರುವುದನ್ನು ಕಾಣಬಹುದು.

ಮಹಿಳೆಯರಿಂದ ಹಿಡಿದು LGBTQ+ ಸಮುದಾಯದವರೆಗೆ ಭಾರತದ ವಿವಿಧ ವಿಭಾಗದ ಜನರ ಮಾನವ ಹಕ್ಕುಗಳ ರಕ್ಷಣೆಯಲ್ಲಿ ಸುಪ್ರೀಂ ಕೋರ್ಟ್ ವಹಿಸಿರುವ ಮಹತ್ವದ ಪಾತ್ರದ ಕುರಿತು ವಿವರಿಸಿದ್ದಾರೆ.

ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ “ಸಂಪೂರ್ಣ ನ್ಯಾಯ” ನೀಡಲು ಸುಪ್ರೀಂ ಕೋರ್ಟ್‌ ಮುಂದಿರುವ ಸವಾಲುಗಳ ಕುರಿತು ಅವರು ಪ್ರಸ್ತಾಪಿಸಿದ್ದರೆ. “ನ್ಯಾಯಾಧೀಶರೂ ತಪ್ಪು ಮಾಡಬಹುದು. ಒಮ್ಮೆ ಅಂತಿಮ ಎಂದು ಭಾವಿಸಿದ ನಿರ್ಧಾರಗಳನ್ನು ನಂತರದ ಪೀಳಿಗೆಯಿಂದ ಪರಿಶೀಲಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

(ಭಾಷಣದ ಪೂರ್ಣ ಪಠ್ಯವನ್ನು ‘ಇಲ್ಲಿ’ ಓದಬಹುದು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...