Homeಮುಖಪುಟಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ'ನ್ಯಾಯ' : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

- Advertisement -
- Advertisement -

ಉತ್ತರ ಪ್ರದೇಶದ ಸರ್ಕಾರದ “ಬುಲ್ಡೋಝರ್ ಅನ್ಯಾಯ” ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಯಾವುದೇ ವ್ಯಕ್ತಿಯ ಮೇಲೆ ಅಪರಾಧದ ಆರೋಪ ಕೇಳಿಬಂದ ತಕ್ಷಣ, ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರ ಮನೆ ಅಥವಾ ಆಸ್ತಿಯನ್ನು ಧ್ವಂಸಗೊಳಿಸುವುದು ಸಂವಿಧಾನ ಬಾಹಿರ ಎಂದು ನ್ಯಾಯಾಲಯ ಹೇಳಿದೆ. ಈ ಕ್ರಮವು ಕಾರ್ಯಾಂಗವು ನ್ಯಾಯಾಂಗದ ಅಧಿಕಾರವನ್ನು ಕೈಗೆತ್ತಿಕೊಂಡಂತೆ ಮತ್ತು ಅಧಿಕಾರದ ದುರುಪಯೋಗದಂತೆ ಕಾಣುತ್ತಿದೆ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ಒಂದು ಅಪರಾಧ ನಡೆದ ತಕ್ಷಣವೇ ಆಸ್ತಿಯನ್ನು ಧ್ವಂಸಗೊಳಿಸುವುದು, ಆಡಳಿತಾತ್ಮಕ ವಿವೇಚನಾಧಿಕಾರವನ್ನು “ಬಣ್ಣಬಣ್ಣದ” ರೀತಿಯಲ್ಲಿ, ಅಂದರೆ ಕಾನೂನಿನ ಮುಖವಾಡ ತೊಟ್ಟು ಪರೋಕ್ಷವಾಗಿ ಶಿಕ್ಷಿಸಲು ಬಳಸಿಕೊಳ್ಳುವ ಕ್ರಮವೇ? ಎಂದು ನ್ಯಾಯಾಲಯ ಪ್ರಶ್ನಿಸಿದೆ. ಇದು ಕಾನೂನಿನ ಪಾಲನೆಗಿಂತ ಹೆಚ್ಚಾಗಿ ಪೂರ್ವಾಗ್ರಹ ಪೀಡಿತ ದಂಡನಾತ್ಮಕ ಕ್ರಮದಂತೆ ಕಾಣುತ್ತಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಶಿಕ್ಷೆ ವಿಧಿಸುವ ಅಧಿಕಾರ ಕೇವಲ ನ್ಯಾಯಾಂಗಕ್ಕೆ ಮಾತ್ರ ಇದೆ. ಆದರೆ ಅಪರಾಧದ ಆರೋಪ ಕೇಳಿಬಂದ ತಕ್ಷಣ ಮನೆಗಳನ್ನು ಉರುಳಿಸುವುದು, ಕಾರ್ಯಾಂಗವು ತಾನೇ ನ್ಯಾಯಾಧೀಶನಂತೆ ವರ್ತಿಸಿ ಶಿಕ್ಷೆ ನೀಡಿದಂತಾಗುತ್ತದೆ, ಇದು ಸಂವಿಧಾನದ ‘ಅಧಿಕಾರ ವಿಭಜನೆ’ ತತ್ವಕ್ಕೆ ವಿರುದ್ಧವಾಗಿದೆ. ಸಂವಿಧಾನದ 14ನೇ ವಿಧಿ (ಸಮಾನತೆ) ಮತ್ತು 21ನೇ ವಿಧಿ (ಜೀವಿಸುವ ಹಕ್ಕು ಮತ್ತು ಆಶ್ರಯದ ಹಕ್ಕು) ಅಡಿಯಲ್ಲಿ ಪ್ರಜೆಗಳಿಗೆ ರಕ್ಷಣೆ ಇದೆ. ಆಡಳಿತವು ಕೇವಲ ತಾಂತ್ರಿಕ ಕಾರಣಗಳನ್ನು ಒಡ್ಡಿ (ಉದಾಹರಣೆಗೆ ಅಕ್ರಮ ನಿರ್ಮಾಣ) ಆಶ್ರಯವನ್ನು ಕಸಿದುಕೊಳ್ಳುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ಹೇಳಿದೆ.

ಅಪರಾಧ ನಡೆದ ತಕ್ಷಣವೇ ಆರೋಪಿಗಳ ವಾಸಸ್ಥಳ ತೆರವುಗೊಳಿಸುವುದಾಗಿ ನೋಟಿಸ್‌ ನೀಡಿ ಕೂಡಲೇ ಕಟ್ಟಡ ಧ್ವಂಸಗೊಳಿಸುತ್ತಿರುವ ಹಲವು ಪ್ರಕರಣಗಳು ತಮ್ಮ ಗಮನಕ್ಕೆ ಬಂದಿರುವುದಾಗಿ ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್‌ ನಂದನ್‌ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.

ಅಧಿಕಾರಿಗಳು ಕಾನೂನಿನ ನಿಯಮಗಳನ್ನು ಪಾಲಿಸುತ್ತಿದ್ದೇವೆ ಎಂದು ತೋರಿಸಿಕೊಳ್ಳಲು ಕೇವಲ ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. ಆದರೆ ಇದರ ಹಿಂದಿನ ಅಸಲಿ ಉದ್ದೇಶ ಕಾನೂನು ಪಾಲನೆಯಲ್ಲ, ಬದಲಿಗೆ ಆರೋಪಿಯನ್ನು ಶಿಕ್ಷಿಸುವುದೇ ಆಗಿದೆ. ಅಪರಾಧ ನಡೆದ ತಕ್ಷಣವೇ ಆಸ್ತಿಯು ‘ಅಕ್ರಮ’ ಎಂದು ಅಧಿಕಾರಿಗಳಿಗೆ ನೆನಪಾಗುವುದು ಮತ್ತು ತಕ್ಷಣವೇ ನೋಟಿಸ್ ನೀಡಿ ಧ್ವಂಸಗೊಳಿಸುವುದು ಕೇವಲ ಕಾಕತಾಳೀಯವಲ್ಲ, ಇದು ಪೂರ್ವಯೋಜಿತ ದಂಡನಾತ್ಮಕ ಕ್ರಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನಿಯಮಗಳ ಪಾಲನೆಯು ಕೇವಲ ಒಂದು ನೆಪವಾಗಿದ್ದು, ನ್ಯಾಯಾಂಗ ಪ್ರಕ್ರಿಯೆಯನ್ನು ಬದಿಗೊತ್ತಿ ಕಾರ್ಯಾಂಗವೇ ತೀರ್ಪುಗಾರನಂತೆ ವರ್ತಿಸುತ್ತಿರುವುದನ್ನು ಹೈಕೋರ್ಟ್ ಖಂಡಿಸಿದೆ.

ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳ ಉಲ್ಲಂಘನೆಯಾಗಿರುವುದರಿಂದ ಕೆಲವು ಕಾನೂನು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆಯೆಂದು ಹೈಕೋರ್ಟ್‌ ತಿಳಿಸಿದ್ದು, ಆ ಐದು ಪ್ರಶ್ನೆಗಳು ಹೀಗಿವೆ..

1.ಸರ್ವೋಚ್ಚ ನ್ಯಾಯಾಲಯ ನೀಡಿದ್ದ ತೀರ್ಪಿಗೆ, ಅದರಲ್ಲಿಯೂ 85 ಮತ್ತು 86ನೇ ಪ್ಯಾರಾಗ್ರಾಫ್‌ಗಳನ್ನು ಪಾಲನೆ ಮಾಡದೆ ಇರಲು ಸಾಧ್ಯವೇ?

2.ಧ್ವಂಸಗೊಳಿಸುವ ಅಧಿಕಾರವಿದೆ ಎಂಬುವುದೇ ಕಟ್ಟಡ ಧ್ವಂಸಗೊಳಿಸುವ ಕ್ರಿಯೆಗೆ ನ್ಯಾಯಸಮ್ಮತತೆಯನ್ನು ನೀಡುತ್ತದೆಯೇ? ಅಥವಾ ಸಾರ್ವಜನಿಕ ಅವಶ್ಯಕತೆ/ಉದ್ದೇಶ ಇಲ್ಲದ ಸಂದರ್ಭದಲ್ಲಿ ವಾಸಸ್ಥಳವನ್ನು ಧ್ವಂಸಗೊಳಿಸಬಾರದೆಂಬ “ಪ್ರಭುತ್ವವೇ ಪೋಷಕ” ಎಂಬ ತತ್ವದ ಅಡಿಯಲ್ಲಿ ಪ್ರಭುತ್ವದ ಮೇಲೆ ಕರ್ತವ್ಯವಿದೆಯೇ?

    3. ಅಪರಾಧ ಸಂಭವಿಸಿದ ತಕ್ಷಣವೇ ಕಟ್ಟಡ ಧ್ವಂಸಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳು, ಕಾರ್ಯಾಂಗ ವಿವೇಚನೆಯ ಭೇದ ಸೃಷ್ಟಿಸುತ್ತವೆಯೇ?

    4.ಪ್ರಭುತ್ವಕ್ಕೆ ಕಟ್ಟಡ ಧ್ವಂಸಗೊಳಿಸುವ ಅಧಿಕಾರ ಮತ್ತು ಸಂವಿಧಾನದ ಕಲಂ 14 ಹಾಗೂ 21ರ ಅಡಿಯಲ್ಲಿ ನಾಗರಿಕರಿಗೆ ನೀಡಲಾಗಿರುವ ಮೂಲಭೂತ ಹಕ್ಕುಗಳ ನಡುವಿನ ಸಂಘರ್ಷವನ್ನು ತಪ್ಪಿಸುವುದು ಹೇಗೆ?

    5.ಸಮಂಜಸವಾದ ಭಯ” ಇದ್ದ ಮಾತ್ರಕ್ಕೆ ನಾಗರಿಕ ಈ ನ್ಯಾಯಾಲಯ ಸಂಪರ್ಕಿಸಲು ಕಾರಣವಾಗಬಹುದೇ? ಹೌದಾದರೆ, ಇಂತಹ “ಸಮಂಜಸವಾದ ಭಯ” ಇರುವುದನ್ನು ನ್ಯಾಯಾಲಯ ನಿರ್ಧರಿಸಲು ಕನಿಷ್ಠ ಯಾವ ಅಂಶಗಳು ಅಗತ್ಯ?

      ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 9ರಂದು ಮುಂದುವರಿಸಲಿದೆ.

      ಪ್ರಕರಣದ ಹಿನ್ನೆಲೆ : ಫೈಮುದ್ದೀನ್ ಮತ್ತು ಇತರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪೀಠವು ವಿಚಾರಣೆ ನಡೆಸಿದೆ. ಅವರ ಸಂಬಂಧಿ (ಆಫಾನ್ ಖಾನ್) ವಿರುದ್ಧ ಬಿಎನ್‌ಎಸ್, ಪೋಕ್ಸೊ ಕಾಯ್ದೆ, ಐಟಿ ಕಾಯ್ದೆ ಮತ್ತು ಯುಪಿ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿಯ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

      ಅರ್ಜಿದಾರರು ಹೇಳಿರುವ ಎಫ್‌ಐಆರ್‌ನಲ್ಲಿ ತಮ್ಮನ್ನು ಸಹ-ಆರೋಪಿಗಳೆಂದು ಹೆಸರಿಸಲಾಗಿಲ್ಲವಾದರೂ, ಪೊಲೀಸರೊಂದಿಗೆ ಶಾಮೀಲಾಗಿ ಗುಂಪೊಂದು ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ವಸತಿ ಮನೆ, ವಾಣಿಜ್ಯ ವಸತಿಗೃಹ ಮತ್ತು ಗರಗಸದ ಗಿರಣಿ ಸೇರಿದಂತೆ ಹಮೀರ್‌ಪುರದಲ್ಲಿರುವ ತಮ್ಮ ಆಸ್ತಿಗಳನ್ನು ಅಧಿಕಾರಿಗಳು ಯಾಂತ್ರಿಕ ವಿಧಾನಗಳಿಂದ ನಾಶಮಾಡಲು ಗುರುತಿಸಿದ್ದಾರೆ ಎಂಬ ಸಮಂಜಸವಾದ ಆತಂಕವನ್ನು ಅವರು ಪೀಠದ ಮುಂದೆ ಎತ್ತಿದ್ದಾರೆ.

      ವಾಣಿಜ್ಯ ಲಾಡ್ಜ್ ಮತ್ತು ಗರಗಸದ ಗಿರಣಿಯನ್ನು ಪ್ರತಿವಾದಿ ಅಧಿಕಾರಿಗಳು ಈಗಾಗಲೇ ಸೀಲ್ ಮಾಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಆದ್ದರಿಂದ, ಆಸ್ತಿಗಳ ನಿರೀಕ್ಷಿತ ನಾಶವನ್ನು ತಡೆಯಲು ಹೈಕೋರ್ಟ್‌ನ ಹಸ್ತಕ್ಷೇಪವನ್ನು ಅವರು ಕೋರಿದ್ದಾರೆ. ಆದಾಗ್ಯೂ, ರಾಜ್ಯ ಸರ್ಕಾರವು ಅರ್ಜಿಯು ಅಕಾಲಿಕವಾಗಿದ್ದು, ಅರ್ಜಿದಾರರು ತಮಗೆ ನೀಡಲಾದ ನೋಟಿಸ್‌ಗಳಿಗೆ ಪ್ರತಿಕ್ರಿಯಿಸಬೇಕು ಎಂದು ಪ್ರಾಥಮಿಕ ಆಕ್ಷೇಪಣೆಯನ್ನು ಎತ್ತಿತ್ತು.

      ವಾಸ್ತವವಾಗಿ, ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನವನ್ನು ಪಾಲಿಸದೆ ಮತ್ತು ಅರ್ಜಿದಾರರಿಗೆ ಸಂಬಂಧಪಟ್ಟ ಅಧಿಕಾರಿಗಳ ಮುಂದೆ ತಮ್ಮ ಪ್ರಕರಣವನ್ನು ಮಂಡಿಸಲು ಸೂಕ್ತ ಅವಕಾಶವನ್ನು ನೀಡದೆ ಯಾವುದೇ ಧ್ವಂಸ ನಡೆಯುವುದಿಲ್ಲ ಎಂದು ಹೈಕೋರ್ಟ್‌ಗೆ ಮೌಖಿಕ ಭರವಸೆ ನೀಡಲಾಗಿದೆ.

      ಆದಾಗ್ಯೂ, ಸುಪ್ರೀಂ ಕೋರ್ಟ್‌ನ ಆದೇಶದ ಹೊರತಾಗಿಯೂ ರಾಜ್ಯದಲ್ಲಿ ಇಂತಹ ಧ್ವಂಸಗಳು ಮುಂದುವರೆದಿವೆ ಎಂದು ಗಮನಿಸಿದ ಪೀಠವು, ಜನವರಿ 21 ರಂದು ನೀಡಿದ ಆದೇಶದಲ್ಲಿ ರೂಪಿಸಲಾದ ಪ್ರಶ್ನೆಗಳನ್ನು ಪರಿಹರಿಸುವುದು ಸೂಕ್ತವೆಂದು ಹೇಳಿದೆ.

      ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

      LEAVE A REPLY

      Please enter your comment!
      Please enter your name here

      - Advertisment -

      ‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

      ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

      ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

      ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

      ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

      2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

      ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

      ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

      ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

      ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

      ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

      ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

      ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

      ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

      ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

      ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

      ‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

      ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

      ‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

      ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...