Homeಮುಖಪುಟಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ'ನ್ಯಾಯ' : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

- Advertisement -
- Advertisement -

ಉತ್ತರ ಪ್ರದೇಶದ ಸರ್ಕಾರದ “ಬುಲ್ಡೋಝರ್ ಅನ್ಯಾಯ” ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಯಾವುದೇ ವ್ಯಕ್ತಿಯ ಮೇಲೆ ಅಪರಾಧದ ಆರೋಪ ಕೇಳಿಬಂದ ತಕ್ಷಣ, ಕಾನೂನು ಪ್ರಕ್ರಿಯೆಯನ್ನು ಪಾಲಿಸದೆ ಅವರ ಮನೆ ಅಥವಾ ಆಸ್ತಿಯನ್ನು ಧ್ವಂಸಗೊಳಿಸುವುದು ಸಂವಿಧಾನ ಬಾಹಿರ ಎಂದು ನ್ಯಾಯಾಲಯ ಹೇಳಿದೆ. ಈ ಕ್ರಮವು ಕಾರ್ಯಾಂಗವು ನ್ಯಾಯಾಂಗದ ಅಧಿಕಾರವನ್ನು ಕೈಗೆತ್ತಿಕೊಂಡಂತೆ ಮತ್ತು ಅಧಿಕಾರದ ದುರುಪಯೋಗದಂತೆ ಕಾಣುತ್ತಿದೆ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ಒಂದು ಅಪರಾಧ ನಡೆದ ತಕ್ಷಣವೇ ಆಸ್ತಿಯನ್ನು ಧ್ವಂಸಗೊಳಿಸುವುದು, ಆಡಳಿತಾತ್ಮಕ ವಿವೇಚನಾಧಿಕಾರವನ್ನು “ಬಣ್ಣಬಣ್ಣದ” ರೀತಿಯಲ್ಲಿ, ಅಂದರೆ ಕಾನೂನಿನ ಮುಖವಾಡ ತೊಟ್ಟು ಪರೋಕ್ಷವಾಗಿ ಶಿಕ್ಷಿಸಲು ಬಳಸಿಕೊಳ್ಳುವ ಕ್ರಮವೇ? ಎಂದು ನ್ಯಾಯಾಲಯ ಪ್ರಶ್ನಿಸಿದೆ. ಇದು ಕಾನೂನಿನ ಪಾಲನೆಗಿಂತ ಹೆಚ್ಚಾಗಿ ಪೂರ್ವಾಗ್ರಹ ಪೀಡಿತ ದಂಡನಾತ್ಮಕ ಕ್ರಮದಂತೆ ಕಾಣುತ್ತಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಶಿಕ್ಷೆ ವಿಧಿಸುವ ಅಧಿಕಾರ ಕೇವಲ ನ್ಯಾಯಾಂಗಕ್ಕೆ ಮಾತ್ರ ಇದೆ. ಆದರೆ ಅಪರಾಧದ ಆರೋಪ ಕೇಳಿಬಂದ ತಕ್ಷಣ ಮನೆಗಳನ್ನು ಉರುಳಿಸುವುದು, ಕಾರ್ಯಾಂಗವು ತಾನೇ ನ್ಯಾಯಾಧೀಶನಂತೆ ವರ್ತಿಸಿ ಶಿಕ್ಷೆ ನೀಡಿದಂತಾಗುತ್ತದೆ, ಇದು ಸಂವಿಧಾನದ ‘ಅಧಿಕಾರ ವಿಭಜನೆ’ ತತ್ವಕ್ಕೆ ವಿರುದ್ಧವಾಗಿದೆ. ಸಂವಿಧಾನದ 14ನೇ ವಿಧಿ (ಸಮಾನತೆ) ಮತ್ತು 21ನೇ ವಿಧಿ (ಜೀವಿಸುವ ಹಕ್ಕು ಮತ್ತು ಆಶ್ರಯದ ಹಕ್ಕು) ಅಡಿಯಲ್ಲಿ ಪ್ರಜೆಗಳಿಗೆ ರಕ್ಷಣೆ ಇದೆ. ಆಡಳಿತವು ಕೇವಲ ತಾಂತ್ರಿಕ ಕಾರಣಗಳನ್ನು ಒಡ್ಡಿ (ಉದಾಹರಣೆಗೆ ಅಕ್ರಮ ನಿರ್ಮಾಣ) ಆಶ್ರಯವನ್ನು ಕಸಿದುಕೊಳ್ಳುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ಹೇಳಿದೆ.

ಅಪರಾಧ ನಡೆದ ತಕ್ಷಣವೇ ಆರೋಪಿಗಳ ವಾಸಸ್ಥಳ ತೆರವುಗೊಳಿಸುವುದಾಗಿ ನೋಟಿಸ್‌ ನೀಡಿ ಕೂಡಲೇ ಕಟ್ಟಡ ಧ್ವಂಸಗೊಳಿಸುತ್ತಿರುವ ಹಲವು ಪ್ರಕರಣಗಳು ತಮ್ಮ ಗಮನಕ್ಕೆ ಬಂದಿರುವುದಾಗಿ ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು ಸಿದ್ಧಾರ್ಥ್‌ ನಂದನ್‌ ಅವರಿದ್ದ ವಿಭಾಗೀಯ ಪೀಠ ತಿಳಿಸಿದೆ.

ಅಧಿಕಾರಿಗಳು ಕಾನೂನಿನ ನಿಯಮಗಳನ್ನು ಪಾಲಿಸುತ್ತಿದ್ದೇವೆ ಎಂದು ತೋರಿಸಿಕೊಳ್ಳಲು ಕೇವಲ ದಾಖಲೆಗಳನ್ನು ಸೃಷ್ಟಿಸುತ್ತಿದ್ದಾರೆ. ಆದರೆ ಇದರ ಹಿಂದಿನ ಅಸಲಿ ಉದ್ದೇಶ ಕಾನೂನು ಪಾಲನೆಯಲ್ಲ, ಬದಲಿಗೆ ಆರೋಪಿಯನ್ನು ಶಿಕ್ಷಿಸುವುದೇ ಆಗಿದೆ. ಅಪರಾಧ ನಡೆದ ತಕ್ಷಣವೇ ಆಸ್ತಿಯು ‘ಅಕ್ರಮ’ ಎಂದು ಅಧಿಕಾರಿಗಳಿಗೆ ನೆನಪಾಗುವುದು ಮತ್ತು ತಕ್ಷಣವೇ ನೋಟಿಸ್ ನೀಡಿ ಧ್ವಂಸಗೊಳಿಸುವುದು ಕೇವಲ ಕಾಕತಾಳೀಯವಲ್ಲ, ಇದು ಪೂರ್ವಯೋಜಿತ ದಂಡನಾತ್ಮಕ ಕ್ರಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ನಿಯಮಗಳ ಪಾಲನೆಯು ಕೇವಲ ಒಂದು ನೆಪವಾಗಿದ್ದು, ನ್ಯಾಯಾಂಗ ಪ್ರಕ್ರಿಯೆಯನ್ನು ಬದಿಗೊತ್ತಿ ಕಾರ್ಯಾಂಗವೇ ತೀರ್ಪುಗಾರನಂತೆ ವರ್ತಿಸುತ್ತಿರುವುದನ್ನು ಹೈಕೋರ್ಟ್ ಖಂಡಿಸಿದೆ.

ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳ ಉಲ್ಲಂಘನೆಯಾಗಿರುವುದರಿಂದ ಕೆಲವು ಕಾನೂನು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಅಗತ್ಯವಿದೆಯೆಂದು ಹೈಕೋರ್ಟ್‌ ತಿಳಿಸಿದ್ದು, ಆ ಐದು ಪ್ರಶ್ನೆಗಳು ಹೀಗಿವೆ..

1.ಸರ್ವೋಚ್ಚ ನ್ಯಾಯಾಲಯ ನೀಡಿದ್ದ ತೀರ್ಪಿಗೆ, ಅದರಲ್ಲಿಯೂ 85 ಮತ್ತು 86ನೇ ಪ್ಯಾರಾಗ್ರಾಫ್‌ಗಳನ್ನು ಪಾಲನೆ ಮಾಡದೆ ಇರಲು ಸಾಧ್ಯವೇ?

2.ಧ್ವಂಸಗೊಳಿಸುವ ಅಧಿಕಾರವಿದೆ ಎಂಬುವುದೇ ಕಟ್ಟಡ ಧ್ವಂಸಗೊಳಿಸುವ ಕ್ರಿಯೆಗೆ ನ್ಯಾಯಸಮ್ಮತತೆಯನ್ನು ನೀಡುತ್ತದೆಯೇ? ಅಥವಾ ಸಾರ್ವಜನಿಕ ಅವಶ್ಯಕತೆ/ಉದ್ದೇಶ ಇಲ್ಲದ ಸಂದರ್ಭದಲ್ಲಿ ವಾಸಸ್ಥಳವನ್ನು ಧ್ವಂಸಗೊಳಿಸಬಾರದೆಂಬ “ಪ್ರಭುತ್ವವೇ ಪೋಷಕ” ಎಂಬ ತತ್ವದ ಅಡಿಯಲ್ಲಿ ಪ್ರಭುತ್ವದ ಮೇಲೆ ಕರ್ತವ್ಯವಿದೆಯೇ?

    3. ಅಪರಾಧ ಸಂಭವಿಸಿದ ತಕ್ಷಣವೇ ಕಟ್ಟಡ ಧ್ವಂಸಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳು, ಕಾರ್ಯಾಂಗ ವಿವೇಚನೆಯ ಭೇದ ಸೃಷ್ಟಿಸುತ್ತವೆಯೇ?

    4.ಪ್ರಭುತ್ವಕ್ಕೆ ಕಟ್ಟಡ ಧ್ವಂಸಗೊಳಿಸುವ ಅಧಿಕಾರ ಮತ್ತು ಸಂವಿಧಾನದ ಕಲಂ 14 ಹಾಗೂ 21ರ ಅಡಿಯಲ್ಲಿ ನಾಗರಿಕರಿಗೆ ನೀಡಲಾಗಿರುವ ಮೂಲಭೂತ ಹಕ್ಕುಗಳ ನಡುವಿನ ಸಂಘರ್ಷವನ್ನು ತಪ್ಪಿಸುವುದು ಹೇಗೆ?

    5.ಸಮಂಜಸವಾದ ಭಯ” ಇದ್ದ ಮಾತ್ರಕ್ಕೆ ನಾಗರಿಕ ಈ ನ್ಯಾಯಾಲಯ ಸಂಪರ್ಕಿಸಲು ಕಾರಣವಾಗಬಹುದೇ? ಹೌದಾದರೆ, ಇಂತಹ “ಸಮಂಜಸವಾದ ಭಯ” ಇರುವುದನ್ನು ನ್ಯಾಯಾಲಯ ನಿರ್ಧರಿಸಲು ಕನಿಷ್ಠ ಯಾವ ಅಂಶಗಳು ಅಗತ್ಯ?

      ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಫೆಬ್ರವರಿ 9ರಂದು ಮುಂದುವರಿಸಲಿದೆ.

      ಪ್ರಕರಣದ ಹಿನ್ನೆಲೆ : ಫೈಮುದ್ದೀನ್ ಮತ್ತು ಇತರರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪೀಠವು ವಿಚಾರಣೆ ನಡೆಸಿದೆ. ಅವರ ಸಂಬಂಧಿ (ಆಫಾನ್ ಖಾನ್) ವಿರುದ್ಧ ಬಿಎನ್‌ಎಸ್, ಪೋಕ್ಸೊ ಕಾಯ್ದೆ, ಐಟಿ ಕಾಯ್ದೆ ಮತ್ತು ಯುಪಿ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿಯ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

      ಅರ್ಜಿದಾರರು ಹೇಳಿರುವ ಎಫ್‌ಐಆರ್‌ನಲ್ಲಿ ತಮ್ಮನ್ನು ಸಹ-ಆರೋಪಿಗಳೆಂದು ಹೆಸರಿಸಲಾಗಿಲ್ಲವಾದರೂ, ಪೊಲೀಸರೊಂದಿಗೆ ಶಾಮೀಲಾಗಿ ಗುಂಪೊಂದು ತಮ್ಮನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ವಸತಿ ಮನೆ, ವಾಣಿಜ್ಯ ವಸತಿಗೃಹ ಮತ್ತು ಗರಗಸದ ಗಿರಣಿ ಸೇರಿದಂತೆ ಹಮೀರ್‌ಪುರದಲ್ಲಿರುವ ತಮ್ಮ ಆಸ್ತಿಗಳನ್ನು ಅಧಿಕಾರಿಗಳು ಯಾಂತ್ರಿಕ ವಿಧಾನಗಳಿಂದ ನಾಶಮಾಡಲು ಗುರುತಿಸಿದ್ದಾರೆ ಎಂಬ ಸಮಂಜಸವಾದ ಆತಂಕವನ್ನು ಅವರು ಪೀಠದ ಮುಂದೆ ಎತ್ತಿದ್ದಾರೆ.

      ವಾಣಿಜ್ಯ ಲಾಡ್ಜ್ ಮತ್ತು ಗರಗಸದ ಗಿರಣಿಯನ್ನು ಪ್ರತಿವಾದಿ ಅಧಿಕಾರಿಗಳು ಈಗಾಗಲೇ ಸೀಲ್ ಮಾಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ. ಆದ್ದರಿಂದ, ಆಸ್ತಿಗಳ ನಿರೀಕ್ಷಿತ ನಾಶವನ್ನು ತಡೆಯಲು ಹೈಕೋರ್ಟ್‌ನ ಹಸ್ತಕ್ಷೇಪವನ್ನು ಅವರು ಕೋರಿದ್ದಾರೆ. ಆದಾಗ್ಯೂ, ರಾಜ್ಯ ಸರ್ಕಾರವು ಅರ್ಜಿಯು ಅಕಾಲಿಕವಾಗಿದ್ದು, ಅರ್ಜಿದಾರರು ತಮಗೆ ನೀಡಲಾದ ನೋಟಿಸ್‌ಗಳಿಗೆ ಪ್ರತಿಕ್ರಿಯಿಸಬೇಕು ಎಂದು ಪ್ರಾಥಮಿಕ ಆಕ್ಷೇಪಣೆಯನ್ನು ಎತ್ತಿತ್ತು.

      ವಾಸ್ತವವಾಗಿ, ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನವನ್ನು ಪಾಲಿಸದೆ ಮತ್ತು ಅರ್ಜಿದಾರರಿಗೆ ಸಂಬಂಧಪಟ್ಟ ಅಧಿಕಾರಿಗಳ ಮುಂದೆ ತಮ್ಮ ಪ್ರಕರಣವನ್ನು ಮಂಡಿಸಲು ಸೂಕ್ತ ಅವಕಾಶವನ್ನು ನೀಡದೆ ಯಾವುದೇ ಧ್ವಂಸ ನಡೆಯುವುದಿಲ್ಲ ಎಂದು ಹೈಕೋರ್ಟ್‌ಗೆ ಮೌಖಿಕ ಭರವಸೆ ನೀಡಲಾಗಿದೆ.

      ಆದಾಗ್ಯೂ, ಸುಪ್ರೀಂ ಕೋರ್ಟ್‌ನ ಆದೇಶದ ಹೊರತಾಗಿಯೂ ರಾಜ್ಯದಲ್ಲಿ ಇಂತಹ ಧ್ವಂಸಗಳು ಮುಂದುವರೆದಿವೆ ಎಂದು ಗಮನಿಸಿದ ಪೀಠವು, ಜನವರಿ 21 ರಂದು ನೀಡಿದ ಆದೇಶದಲ್ಲಿ ರೂಪಿಸಲಾದ ಪ್ರಶ್ನೆಗಳನ್ನು ಪರಿಹರಿಸುವುದು ಸೂಕ್ತವೆಂದು ಹೇಳಿದೆ.

      ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

      LEAVE A REPLY

      Please enter your comment!
      Please enter your name here

      - Advertisment -

      ‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

      ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

      ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

      ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

      ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

      ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

      ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

      ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

      ‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

      ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

      ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

      ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

      ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

      ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

      ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

      ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

      ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

      ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

      ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

      ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...