Homeಚಳವಳಿಯುಪಿಯಲ್ಲಿ ಬುಲ್ಡೋಜರ್ ದಾಳಿ: ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದ ಮಾಜಿ IAS, IPS ಅಧಿಕಾರಿಗಳು

ಯುಪಿಯಲ್ಲಿ ಬುಲ್ಡೋಜರ್ ದಾಳಿ: ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದ ಮಾಜಿ IAS, IPS ಅಧಿಕಾರಿಗಳು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಪ್ರತಿಭಟನಾಕಾರರ ಮೇಲೆ ಯೋಗಿ ಆದಿತ್ಯನಾಥ್ ಸರ್ಕಾರ ನಡೆಸುತ್ತಿರುವ ಬುಲ್ಡೋಜರ್ ಪ್ರಹಾರಗಳ ಬಗ್ಗೆ ಗಮನ ಹರಿಸುವಂತೆ ಮಾಜಿ ನಾಗರಿಕ ಸೇವಾ ಅಧಿಕಾರಿಗಳ ಗುಂಪೊಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣರಿಗೆ ಪತ್ರ ಬರೆದಿದ್ದಾರೆ.

ಅಮಾನತುಗೊಂಡಿಎಉವ ಬಿಜೆಪಿ ವಕ್ತಾರರು ಪ್ರವಾದಿ ಮುಹಮ್ಮದ್ ಅವರ ವಿರುದ್ಧ ನೀಡಿದ್ದ ಅವಹೇಳನಾಕಾರಿ ಹೇಳಿಕೆಗಳನ್ನು ವಿರೋಧಿಸಿ ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿ ಹಿಂಸಾತ್ಮ ರೂಪ ಪಡೆದಿತ್ತು. ಇದಾದ ಮೇಲೆ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಪ್ರತಿಭಟನೆ ನಡೆಸಿದವರ ಆಸ್ತಿಗಳ ಮೇಲೆ ಬುಲ್ಡೋಜರ್‌ ಪ್ರಹಾರ ನಡೆಸಿತ್ತು.

ಈ ಪ್ರತಿಭಟನಾಕಾರರ ಆತಿಗಳು ಅಕ್ರಮ ಎಂದು ಆರೋಪಿಸಿ ಧ್ವಂಸಗೊಳಿಸಲಾಗಿತ್ತು. ಈ ಬಗ್ಗೆ ಭಾರಿ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಆಸ್ತಿಯನ್ನು ಧ್ವಂಸಗೊಳಿಸಿರುವ ಬಗ್ಗೆ ಗಮನ ಹರಿಸುವಂತೆ ಮಾಜಿ ನಾಗರಿಕ ಸೇವಾ ಅಧಿಕಾರಿಗಳ ಗುಂಪು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರಿಗೆ ಪತ್ರ ಬರೆದಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ.

ಇದನ್ನೂ ಓದಿ: ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ: ಬುಲ್ಡೋಜರ್‌ಗಳಿಂದ ಮನೆಗಳ ನಾಶಕ್ಕೆ ತೀವ್ರ ವಿರೋಧ

ಜೂನ್ 20 ರಂದು ಬರೆದಿರುವ ಬಹಿರಂಗ ಪತ್ರದಲ್ಲಿ,”ಬುಲ್ಡೋಜರ್ ನ್ಯಾಯ”ವು ದೇಶದಲ್ಲಿ ಕಾನೂನುಬದ್ಧವಾಗಿ ಪ್ರತಿಭಟಿಸಲು ಅಥವಾ ಸರ್ಕಾರವನ್ನು ಟೀಕಿಸಲು ಧೈರ್ಯವಿರುವ ನಾಗರಿಕರಿಗೆ ಕ್ರೂರ ಶಿಕ್ಷೆಯನ್ನು ವಿಧಿಸುವ ಕಲ್ಪನೆಯಾಗಿ ದೇಶದಲ್ಲಿ ರೂಢಿಯಾಗುತ್ತಿದೆ ಎಂದು ಟೀಕಿಸಿದೆ.

“ಕಾನೂನಿನ ನಿಯಮ, ಸರಿಯಾದ ಪ್ರಕ್ರಿಯೆಯ ಕಲ್ಪನೆಯಾದ ’ತಪ್ಪಿತಸ್ಥ ಎಂದು ಸಾಬೀತುಪಡಿಸುವವರೆಗೂ ನಿರಪರಾಧಿ’ ಎಂದು ಪರಿಗಣಿಸುವ ಕಲ್ಪನೆಯನ್ನು ಇಲ್ಲಿ ತಲೆಕೆಳಗಾಗಿ ಮಾಡಲಾಗುತ್ತಿದೆ” ಎಂದು ಪತ್ರದಲ್ಲಿ ಆರೋಪಿಸಲಾಗಿದೆ.

ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೈ, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಭಾರತೀಯ ಪೊಲೀಸ್ ಸೇವೆಯ ಮಾಜಿ ಅಧಿಕಾರಿಗಳಾದ ಜೂಲಿಯೊ ರಿಬೇರೊ, ಅವಿನಾಶ್ ಮೋಹನಾನೆ, ಮ್ಯಾಕ್ಸ್‌ವೆಲ್ ಪೆರೇರಾ ಮತ್ತು ಎ.ಕೆ ಸಮಂತಾ ಮತ್ತು ಮಾಜಿ ಸಾಮಾಜಿಕ ನ್ಯಾಯ ಕಾರ್ಯದರ್ಶಿ ಅನಿತಾ ಅಗ್ನಿಹೋತ್ರಿ ಸೇರಿದಂತೆ 90 ನಿವೃತ್ತ ಅಧಿಕಾರಿಗಳು ಪತ್ರಕ್ಕೆ ಸಹಿ ಹಾಕಿದ್ದಾರೆ.

ಮೇ 26 ರಂದು ಟೈಮ್ಸ್ ನೌ ಟೆಲಿವಿಷನ್ ಚಾನೆಲ್‌ನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇದು ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾಯಿತು. ಉತ್ತರ ಪ್ರದೇಶವೊಂದರಲ್ಲೇ 10 ಜಿಲ್ಲೆಗಳಿಂದ 415 ಮಂದಿಯನ್ನು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲಾಗಿದೆ.

ಬಿಜೆಪಿಯ ದೆಹಲಿ ಘಟಕದ ಮಾಧ್ಯಮ ಮುಖ್ಯಸ್ಥರಾಗಿದ್ದ ನವೀನ್ ಜಿಂದಾಲ್ ಅವರು ಜೂನ್ 1 ರಂದು ಪ್ರವಾದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಟ್ವೀಟ್ ಮಾಡಿದ್ದರು. ಬಿಜೆಪಿ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದ್ದು, ನವೀನ್ ಜಿಂದಾಲ್ ಅವರನ್ನು ಉಚ್ಚಾಟಿಸಲಾಗಿದೆ.


ಇದನ್ನೂ ಓದಿ: ’ಕೆಡವುವಿಕೆ ಪ್ರತಿಕಾರವಾಗಿರಬಾರದು’: ಬುಲ್ಡೋಜರ್‌ ದಾಳಿ ನಡೆಸಿದ್ದ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭ್ರಷ್ಟಾಚಾರದ ಕಾರಣದಿಂದ ಹಲವಾರು ಐಎಎಸ್, ಐಪಿಎಸ್ ಅಧಿಕಾರಿಗಳು ರಾಜೀನಾಮೆ ನೀಡಿದ್ದರು. ಎರಡನೆಯದಾಗಿ ಸುಪ್ರೀಂ ಕೋರ್ಟ್ ಯೋಗಿ ಆದಿತ್ಯನಾಥ್ ಅವರಿಗೆ ಅಕ್ರಮವಾಗಿ ನಿರ್ಮಿಸಿದ ಕಟ್ಟಡ ಮತ್ತು ಅತಿಕ್ರಮಣಕ್ಕೆ ನೀಡಲಾದ ನೋಟಿಸ್‌ಗಳ ಪುರಾವೆಗಳನ್ನು ತೋರಿಸಲು ಆದೇಶಿಸಿತ್ತು. ನಿಮ್ಮ ಮಾಧ್ಯಮಗಳು ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಬಗ್ಗೆಯೇ?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...