Homeಮುಖಪುಟಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ ವಿರೋಧಿ ಹೋರಾಟದ ಕೇಂದ್ರತಾಣವಾಗಿದ್ದ ಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಬಿಜೆಪಿ ಆಡಳಿತದ ದೆಹಲಿ ಮುನಿಸಿಪಲ್ ಕಾರ್ಪೊರೇಷನ್ ಮುಂದಾಗಿದೆ. ಇಂದು ಬೆಳಿಗ್ಗೆ ಬುಲ್ಡೋಜರ್‌ಗಳನ್ನು ನುಗ್ಗಿಸಲಾಗಿದ್ದು ಅದನ್ನು ವಿರೋಧಿಸಿ ಪ್ರತಿಭಟನಾಕಾರರು ಜೆಸಿಬಿಗಳ ಎದುರು ಮಲಗಿ ಪ್ರತಿಭಟಿಸಿದ್ದಾರೆ.

ಕಳೆದ ತಿಂಗಳು ದೆಹಲಿಯ ಜಹಾಂಗೀರ್ ಪುರಿಯಲ್ಲಿಯೂ ಇದೇ ರೀತಿ ಬಿಜೆಪಿ ಆಡಳಿತದ ಎಂಸಿಡಿ ಬುಲ್ಡೋಜರ್‌ಗಳನ್ನು ನುಗ್ಗಿಸಿತ್ತು. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ತೆರವು ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಈಗ ಮತ್ತೆ ಮುಸ್ಲಿಮರು ಹೆಚ್ಚಾಗಿ ವಾಸಿಸುವ ಶಾಹೀನ್ ಬಾಗ್‌ ಅನ್ನು ಗುರಿ ಮಾಡಿ ಬುಲ್ಡೋಜರ್‌ಗಳನ್ನು ನುಗ್ಗಿಸಲಾಗುತ್ತಿದೆ.

ಕಳೆದ ಶುಕ್ರವಾರವೇ ಬುಲ್ಡೋಜರ್‌ ನುಗ್ಗಿಸಿ ನಿರ್ನಾಮ ಮಾಡಲು ಬಿಜೆಪಿ ಯೋಜಿಸಿತ್ತು. ಅದರೆ ಪೊಲೀಸ್ ಬಲ ಸಾಲದೇ ಇದ್ದುದರಿಂದ ಅದನ್ನು ಮಾಡಿರಲಿಲ್ಲ. ಇಂದು ತಮ್ಮದೇ ಕೈಯಲ್ಲಿರುವ ದೆಹಲಿ ಪೊಲೀಸರನ್ನು ಬಳಸಿ ಬುಲ್ಡೋಜರ್ ನುಗ್ಗಿಸಲಾಗುತ್ತಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ತೆರವು ಕಾರ್ಯಾಚರಣೆ ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು, ಕಾಂಗ್ರೆಸ್ ಮತ್ತು ಆಪ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ಒಕ್ಲಾ ಕ್ಷೇತ್ರದ ಆಪ್ ಶಾಸಕ ಅಮಾನತುಲ್ಲಾಖಾನ್ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಇಲ್ಲಿ ಯಾವುದೇ ಅಕ್ರಮ ಕಟ್ಟಡಗಳಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ ನಂತರ ಪೊಲೀಸರು ಮತ್ತು ವರ್ತಕರ ನಡುವೆ ಮಾತುಕತೆ ಆರಂಭವಾಗಿದ್ದು, ಸದ್ಯಕ್ಕೆ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಆದರೂ ದಕ್ಷಿಣ ದೆಹಲಿಯ ಮೇಯರ್ ಮುಖೇಶ್ ಸೂರ್ಯನ್, ನಮ್ಮ ಈ ತೆರವು ಕಾರ್ಯಾಚರಣೆಗೆ ದೆಹಲಿ ಜನರ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ.

ಕಳೆದ ತಿಂಗಳು ದೆಹಲಿಯ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಎಂಸಿಡಿಗೆ ಪತ್ರ ಬರೆದು ಶಾಹೀನ್ ಬಾಗ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸುವಂತೆ ಮನವಿ ಮಾಡಿದ್ದರು. ಇಲ್ಲಿ ಅಕ್ರಮ ಬಾಂಗ್ಲಾ ನುಸುಳುಕೋರರು, ರೋಹಿಂಗ್ಯಾ ಮುಸ್ಲಿಮರು ಮತ್ತು ಸಮಾಜವಿರೋಧಿ ಶಕ್ತಿಗಳು ನೆಲಿಸಿದ್ದಾರೆ ಎಂದು ದೂರಿದ್ದರು. ಅದರ ಆಧಾರದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ದಕ್ಷಿಣ ದೆಹಲಿಯ ಕಾರ್ಪೊರೇಷನ್ 10 ದಿನಗಳ ತೆರವು ಕಾರ್ಯಾಚರಣೆಯ ಯೋಜನೆ ಸಿದ್ದಪಡಿಸಿಕೊಂಡಿದೆ. ಮೇ 13ರವರೆಗೂ ಅದು ನಡೆಯಲಿದೆ ಎಂದು ಮೇಯರ್ ತಿಳಿಸಿದ್ದಾರೆ. ಇದು ಬಿಜೆಪಿಯ ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಜಹಾಂಗೀರ್‌ಪುರಿಯಲ್ಲಿ ಎಂಸಿಡಿ ತೆರವು ಕಾರ್ಯಾಚರಣೆ ನಡೆಸಿದಾಗ ಸುಪ್ರೀಂ ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿತ್ತು. ಅದನ್ನು ಧಿಕ್ಕರಿಸಿ ಕಾರ್ಯಾಚರನೆ ಮುಂದುವರೆಸಿದಾಗ ಚೀಮಾರಿ ಹಾಕಿತ್ತು. ಇಂದು ಆ ವಿಷಯದ ಕುರಿತು ವಿಚಾರಣೆ ನಡೆಯುತ್ತಿರುವಾಗಲೇ ಶಾಹೀನ್‌ಬಾನ್‌ನಲ್ಲಿ ತೆರವು ಕಾರ್ಯಾಚರಣೆ ಆರಂಭವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...