Homeಮುಖಪುಟಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

ಸಿಎಎ ವಿರೋಧಿ ಹೋರಾಟದ ಕೇಂದ್ರ ಶಾಹೀನ್‌ಬಾಗ್‌ನಲ್ಲಿ ಬುಲ್ಡೋಜರ್‌ಗಳು: ದ್ವೇಷ ರಾಜಕಾರಣಕ್ಕೆ ಮುಂದಾದ ಬಿಜೆಪಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ ವಿರೋಧಿ ಹೋರಾಟದ ಕೇಂದ್ರತಾಣವಾಗಿದ್ದ ಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಬಿಜೆಪಿ ಆಡಳಿತದ ದೆಹಲಿ ಮುನಿಸಿಪಲ್ ಕಾರ್ಪೊರೇಷನ್ ಮುಂದಾಗಿದೆ. ಇಂದು ಬೆಳಿಗ್ಗೆ ಬುಲ್ಡೋಜರ್‌ಗಳನ್ನು ನುಗ್ಗಿಸಲಾಗಿದ್ದು ಅದನ್ನು ವಿರೋಧಿಸಿ ಪ್ರತಿಭಟನಾಕಾರರು ಜೆಸಿಬಿಗಳ ಎದುರು ಮಲಗಿ ಪ್ರತಿಭಟಿಸಿದ್ದಾರೆ.

ಕಳೆದ ತಿಂಗಳು ದೆಹಲಿಯ ಜಹಾಂಗೀರ್ ಪುರಿಯಲ್ಲಿಯೂ ಇದೇ ರೀತಿ ಬಿಜೆಪಿ ಆಡಳಿತದ ಎಂಸಿಡಿ ಬುಲ್ಡೋಜರ್‌ಗಳನ್ನು ನುಗ್ಗಿಸಿತ್ತು. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ತೆರವು ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಈಗ ಮತ್ತೆ ಮುಸ್ಲಿಮರು ಹೆಚ್ಚಾಗಿ ವಾಸಿಸುವ ಶಾಹೀನ್ ಬಾಗ್‌ ಅನ್ನು ಗುರಿ ಮಾಡಿ ಬುಲ್ಡೋಜರ್‌ಗಳನ್ನು ನುಗ್ಗಿಸಲಾಗುತ್ತಿದೆ.

ಕಳೆದ ಶುಕ್ರವಾರವೇ ಬುಲ್ಡೋಜರ್‌ ನುಗ್ಗಿಸಿ ನಿರ್ನಾಮ ಮಾಡಲು ಬಿಜೆಪಿ ಯೋಜಿಸಿತ್ತು. ಅದರೆ ಪೊಲೀಸ್ ಬಲ ಸಾಲದೇ ಇದ್ದುದರಿಂದ ಅದನ್ನು ಮಾಡಿರಲಿಲ್ಲ. ಇಂದು ತಮ್ಮದೇ ಕೈಯಲ್ಲಿರುವ ದೆಹಲಿ ಪೊಲೀಸರನ್ನು ಬಳಸಿ ಬುಲ್ಡೋಜರ್ ನುಗ್ಗಿಸಲಾಗುತ್ತಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ತೆರವು ಕಾರ್ಯಾಚರಣೆ ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು, ಕಾಂಗ್ರೆಸ್ ಮತ್ತು ಆಪ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ಒಕ್ಲಾ ಕ್ಷೇತ್ರದ ಆಪ್ ಶಾಸಕ ಅಮಾನತುಲ್ಲಾಖಾನ್ ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಇಲ್ಲಿ ಯಾವುದೇ ಅಕ್ರಮ ಕಟ್ಟಡಗಳಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ ನಂತರ ಪೊಲೀಸರು ಮತ್ತು ವರ್ತಕರ ನಡುವೆ ಮಾತುಕತೆ ಆರಂಭವಾಗಿದ್ದು, ಸದ್ಯಕ್ಕೆ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಆದರೂ ದಕ್ಷಿಣ ದೆಹಲಿಯ ಮೇಯರ್ ಮುಖೇಶ್ ಸೂರ್ಯನ್, ನಮ್ಮ ಈ ತೆರವು ಕಾರ್ಯಾಚರಣೆಗೆ ದೆಹಲಿ ಜನರ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ.

ಕಳೆದ ತಿಂಗಳು ದೆಹಲಿಯ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಎಂಸಿಡಿಗೆ ಪತ್ರ ಬರೆದು ಶಾಹೀನ್ ಬಾಗ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸುವಂತೆ ಮನವಿ ಮಾಡಿದ್ದರು. ಇಲ್ಲಿ ಅಕ್ರಮ ಬಾಂಗ್ಲಾ ನುಸುಳುಕೋರರು, ರೋಹಿಂಗ್ಯಾ ಮುಸ್ಲಿಮರು ಮತ್ತು ಸಮಾಜವಿರೋಧಿ ಶಕ್ತಿಗಳು ನೆಲಿಸಿದ್ದಾರೆ ಎಂದು ದೂರಿದ್ದರು. ಅದರ ಆಧಾರದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ದಕ್ಷಿಣ ದೆಹಲಿಯ ಕಾರ್ಪೊರೇಷನ್ 10 ದಿನಗಳ ತೆರವು ಕಾರ್ಯಾಚರಣೆಯ ಯೋಜನೆ ಸಿದ್ದಪಡಿಸಿಕೊಂಡಿದೆ. ಮೇ 13ರವರೆಗೂ ಅದು ನಡೆಯಲಿದೆ ಎಂದು ಮೇಯರ್ ತಿಳಿಸಿದ್ದಾರೆ. ಇದು ಬಿಜೆಪಿಯ ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಜಹಾಂಗೀರ್‌ಪುರಿಯಲ್ಲಿ ಎಂಸಿಡಿ ತೆರವು ಕಾರ್ಯಾಚರಣೆ ನಡೆಸಿದಾಗ ಸುಪ್ರೀಂ ಕೋರ್ಟ್ ಅದಕ್ಕೆ ತಡೆಯಾಜ್ಞೆ ನೀಡಿತ್ತು. ಅದನ್ನು ಧಿಕ್ಕರಿಸಿ ಕಾರ್ಯಾಚರನೆ ಮುಂದುವರೆಸಿದಾಗ ಚೀಮಾರಿ ಹಾಕಿತ್ತು. ಇಂದು ಆ ವಿಷಯದ ಕುರಿತು ವಿಚಾರಣೆ ನಡೆಯುತ್ತಿರುವಾಗಲೇ ಶಾಹೀನ್‌ಬಾನ್‌ನಲ್ಲಿ ತೆರವು ಕಾರ್ಯಾಚರಣೆ ಆರಂಭವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...