Homeಮುಖಪುಟಬುಲ್ಡೋಜರ್‌ಗಳು ಪರಿಹಾರವಲ್ಲ: ರೈಲ್ವೆ ಇಲಾಖೆಯ ಒಕ್ಕಲೆಬ್ಬಿಸುವಿಕೆ ಕ್ರಮಕ್ಕೆ ಬಾಂಬೆ ಹೈಕೋರ್ಟ್ ಅಸಮಾನಧಾನ

ಬುಲ್ಡೋಜರ್‌ಗಳು ಪರಿಹಾರವಲ್ಲ: ರೈಲ್ವೆ ಇಲಾಖೆಯ ಒಕ್ಕಲೆಬ್ಬಿಸುವಿಕೆ ಕ್ರಮಕ್ಕೆ ಬಾಂಬೆ ಹೈಕೋರ್ಟ್ ಅಸಮಾನಧಾನ

- Advertisement -
- Advertisement -

ಅಕ್ರಮ ಪ್ರವೇಶದ ಆರೋಪದ ಮೇಲೆ ಅಧಿಕಾರಿಗಳು ಜನರನ್ನು ಅತಿಕ್ರಮಣಕಾರರು ಎಂದು ಕರೆಯುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟಿರುವ ಬಾಂಬೆ ಹೈಕೋರ್ಟ್ ಅವರನ್ನು ತೆರವುಗೊಳಿಸಲು ಬುಲ್ಡೋಜರ್‌ಗಳು ಪರಿಹಾರವಲ್ಲ ಎಂದಿದೆ.

ಜಸ್ಟೀಸ್ ಗೌತಮ್ ಪಟೇಲ್ ಮತ್ತು ಜಸ್ಟೀಸ್ ನೀಲಾ ಗೋಖಲೆ ಅವರಿದ್ದ ಪೀಠವು ಮುಂಬೈನ ಪಶ್ಚಿಮ ರೈಲ್ವೇಯ ಭೂಮಿಯಲ್ಲಿನ 101 ಅಕ್ರಮ ಕಟ್ಟಗಳನ್ನು ನೆಲಸಮಗೊಳಿಸಲು ಅಧಿಕಾರಿಗಳು ಬುಲ್ಡೋಜರ್ ಬಳಿಸಿದ್ದಕ್ಕೆ ಅಸಮಾಧಾ ವ್ಯಕ್ತಪಡಿಸಿದೆ. ಅನಧಿಕೃತ ಒತ್ತುವರಿ ತೆರವು ಕಾಯಿದೆ, 1971ರ ಅಡಿಯಲ್ಲಿ ಯಾವುದೇ ಸಮೀಕ್ಷೆಯಿಲ್ಲದೆ ಮತ್ತು ಸಂಬಂಧಪಟ್ಟವರಿಗೆ ಅಗತ್ಯ ನೋಟಿಸ್‌ ಸಹ ನೀಡದೆ ಒಕ್ಕಲೆಬ್ಬಿಸುತ್ತಿರುವುದು ಸರಿಯಲ್ಲ ಎಂದಿದೆ.

ಸುಪ್ರೀಂ ಕೋರ್ಟ್ ನಿಯಮಾವಳಿಗಳನ್ನು ಉಲ್ಲಂಘಿಸಿ ಇನ್ನು ಮುಂದೆ ಯಾವುದೇ ಧ್ವಂಸ ಕಾರ್ಯಾಚರಣೆ ನಡೆಸದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದ ಪೀಠ, ಆಪಾದಿತ ಅತಿಕ್ರಮಣಗಾರರ ಮೇಲೆ ಬೇರೆ ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದೆ. ಅವರನ್ನು ಒಕ್ಕಲೆಬ್ಬಿಸುವುದು ಗಂಭೀರ ಸಮಸ್ಯೆಯಾಗಿದ್ದು, ಕೆಲವೊಮ್ಮೆ ಈ ಸ್ಥಳಾಂತರ ನಮ್ಮ ಊಹೆಗೂ ಮೀರಿದ್ದಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಬುಲ್ಡೋಜರ್‌ಗಳ ಬದಲಾಗಿ ಬೇರೆ ಮಾರ್ಗದಲ್ಲಿ ಜನರನ್ನು ಮನವೊಲಿಸಬೇಕು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಯಾವುದೇ ಪುನರ್ವಸತಿ ಕಲ್ಪಿಸದೆ, ಅವರಿಗೆ ಮನೆ ವ್ಯವಸ್ಥೆ ಮಾಡದೇ ಏಕಾಏಕಿ ಮನೆ ಕೆಡವುದು ಸರಿಯಲ್ಲ ಎಂದು ಕೋರ್ಟ್ ಹೇಳಿದೆ.

ಏಕ್ತಾ ವೆಲ್ಫೇರ್ ಟ್ರಸ್ಟ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲವು ತಕ್ಷಣವೇ ಒಕ್ಕಲೆಬ್ಬಿಸುವಿಕೆ ಕಾರ್ಯಾಚರಣೆ ನಿಲ್ಲಿಸಬೇಕೆಂದು ಆಗ್ರಹಿಸಿದೆ. ಅಲ್ಲದೆ ಮನೆ ಕಡೆವಿದ ನಂತರ ತ್ಯಾಜ್ಯಗಳನ್ನು ತಗ್ಗು ಪ್ರದೇಶಗಳಿಗೆ ಸುರಿಯವುದಕ್ಕೆ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಭಾರತದ ಬಿಬಿಸಿ ಕಚೇರಿಗಳ ಮೇಲೆ ಐಟಿ ದಾಳಿ; ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...