Homeಮುಖಪುಟಬುಲ್ಲಿ ಬಾಯ್ ವಿವಾದ: ಎಸಗಿದ ಕೃತ್ಯಕ್ಕೆ ಯಾವುದೇ ಪಶ್ಚಾತಾಪ ವ್ಯಕ್ತಪಡಿಸದ ಆರೋಪಿ- ಮೂಲಗಳು

ಬುಲ್ಲಿ ಬಾಯ್ ವಿವಾದ: ಎಸಗಿದ ಕೃತ್ಯಕ್ಕೆ ಯಾವುದೇ ಪಶ್ಚಾತಾಪ ವ್ಯಕ್ತಪಡಿಸದ ಆರೋಪಿ- ಮೂಲಗಳು

- Advertisement -
- Advertisement -

ಮುಸ್ಲಿಂ ಮಹಿಳೆಯರನ್ನು ಹರಾಜು ಹಾಕಲು ಬಳಸುತ್ತಿದ್ದ ‘ಬುಲ್ಲಿ ಬಾಯ್‌’ ಆ್ಯಪ್‌ನ ಹಿಂದಿನ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಪೊಲೀಸ್ ವಿಚಾರಣೆ ವೇಳೆ ತಾನು ಮಾಡಿರುವ ಕೃತ್ಯಕ್ಕೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ತಾನು ಮಾಡಿರುವುದು ಸರಿಯಾಗಿದೆ ಎಂದು ಭಾವಿಸಿದ್ದಾರೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ ಎಂದು NDTV ವರದಿ ಮಾಡಿದೆ.

21 ವರ್ಷದ ಆರೋಪಿ ನೀರಜ್ ಬಿಷ್ಣೋಯ್, ಭೋಪಾಲ್‌ನ ಇನ್‌ಸ್ಟಿಟ್ಯೂಟ್‌ನಲ್ಲಿ ಎರಡನೇ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದು, ದೆಹಲಿ ಪೊಲೀಸರು ಗುರುವಾರ (ಜ.6) ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ  21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ. 

ಮೈಕ್ರೋಸಾಫ್ಟ್ ಒಡೆತನದ ಗಿಟ್‌ಹಬ್‌ನಲ್ಲಿ ಹೋಸ್ಟ್ ಮಾಡಲಾದ ಬುಲ್ಲಿ ಬಾಯ್‌ ಅಪ್ಲಿಕೇಶನ್ ರಚಿಸಲು ಬಳಸಿದ ಸಾಧನವನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ. ಬಂಧಿಸಿದ ದಿನವೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ಇನ್ನು ಆರೋಪಿ ಬಿಷ್ಣೋಯ್ ರಚಿಸಿದ ಟ್ವಿಟರ್ ಹ್ಯಾಂಡಲ್‌ನನ್ನು ಡಿಜಿಟಲ್ ಕಣ್ಗಾವಲು ಮೂಲಕ ಪತ್ತೆಹಚ್ಚಲಾಗಿದ್ದು ಖಾತೆಯನ್ನು ಅಮಾನತುಗೊಳಿಸಲಾಗಿದೆ. ಜೊತೆಗೆ ಮುಂಬೈ ಪೊಲೀಸರನ್ನು ಅಪಹಾಸ್ಯ ಮಾಡಲು ಬಳಸಿದ @giyu44 ಟ್ವಿಟರ್‌ ಹ್ಯಾಂಡಲ್ ಅನ್ನು ಸಹ ಬಿಷ್ಣೋಯ್ ರಚಿಸಿದ್ದರು. ಅದರಲ್ಲಿ ಮುಂಬೈ ಪೊಲೀಸರನ್ನು “ಸ್ಲಂಬೈ ಪೋಲೀಸ್” ಎಂದು ಉಲ್ಲೇಖಿಸಿದ್ದರು.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...