Homeಮುಖಪುಟಬುಲ್ಲಿ ಬಾಯ್ ವಿವಾದ: ಎಸಗಿದ ಕೃತ್ಯಕ್ಕೆ ಯಾವುದೇ ಪಶ್ಚಾತಾಪ ವ್ಯಕ್ತಪಡಿಸದ ಆರೋಪಿ- ಮೂಲಗಳು

ಬುಲ್ಲಿ ಬಾಯ್ ವಿವಾದ: ಎಸಗಿದ ಕೃತ್ಯಕ್ಕೆ ಯಾವುದೇ ಪಶ್ಚಾತಾಪ ವ್ಯಕ್ತಪಡಿಸದ ಆರೋಪಿ- ಮೂಲಗಳು

- Advertisement -
- Advertisement -

ಮುಸ್ಲಿಂ ಮಹಿಳೆಯರನ್ನು ಹರಾಜು ಹಾಕಲು ಬಳಸುತ್ತಿದ್ದ ‘ಬುಲ್ಲಿ ಬಾಯ್‌’ ಆ್ಯಪ್‌ನ ಹಿಂದಿನ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಪೊಲೀಸ್ ವಿಚಾರಣೆ ವೇಳೆ ತಾನು ಮಾಡಿರುವ ಕೃತ್ಯಕ್ಕೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ತಾನು ಮಾಡಿರುವುದು ಸರಿಯಾಗಿದೆ ಎಂದು ಭಾವಿಸಿದ್ದಾರೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ ಎಂದು NDTV ವರದಿ ಮಾಡಿದೆ.

21 ವರ್ಷದ ಆರೋಪಿ ನೀರಜ್ ಬಿಷ್ಣೋಯ್, ಭೋಪಾಲ್‌ನ ಇನ್‌ಸ್ಟಿಟ್ಯೂಟ್‌ನಲ್ಲಿ ಎರಡನೇ ವರ್ಷದ ಬಿಟೆಕ್ ವಿದ್ಯಾರ್ಥಿಯಾಗಿದ್ದು, ದೆಹಲಿ ಪೊಲೀಸರು ಗುರುವಾರ (ಜ.6) ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈ ಹಿಂದೆ ಇದೇ ಪ್ರಕರಣದಲ್ಲಿ  21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ. 

ಮೈಕ್ರೋಸಾಫ್ಟ್ ಒಡೆತನದ ಗಿಟ್‌ಹಬ್‌ನಲ್ಲಿ ಹೋಸ್ಟ್ ಮಾಡಲಾದ ಬುಲ್ಲಿ ಬಾಯ್‌ ಅಪ್ಲಿಕೇಶನ್ ರಚಿಸಲು ಬಳಸಿದ ಸಾಧನವನ್ನು ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ. ಬಂಧಿಸಿದ ದಿನವೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ಇನ್ನು ಆರೋಪಿ ಬಿಷ್ಣೋಯ್ ರಚಿಸಿದ ಟ್ವಿಟರ್ ಹ್ಯಾಂಡಲ್‌ನನ್ನು ಡಿಜಿಟಲ್ ಕಣ್ಗಾವಲು ಮೂಲಕ ಪತ್ತೆಹಚ್ಚಲಾಗಿದ್ದು ಖಾತೆಯನ್ನು ಅಮಾನತುಗೊಳಿಸಲಾಗಿದೆ. ಜೊತೆಗೆ ಮುಂಬೈ ಪೊಲೀಸರನ್ನು ಅಪಹಾಸ್ಯ ಮಾಡಲು ಬಳಸಿದ @giyu44 ಟ್ವಿಟರ್‌ ಹ್ಯಾಂಡಲ್ ಅನ್ನು ಸಹ ಬಿಷ್ಣೋಯ್ ರಚಿಸಿದ್ದರು. ಅದರಲ್ಲಿ ಮುಂಬೈ ಪೊಲೀಸರನ್ನು “ಸ್ಲಂಬೈ ಪೋಲೀಸ್” ಎಂದು ಉಲ್ಲೇಖಿಸಿದ್ದರು.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...