Homeಮುಖಪುಟ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

- Advertisement -
- Advertisement -

ಮುಸ್ಲಿಂ ಮಹಿಳೆಯರನ್ನು ಆನ್‌ಲೈನ್‌ನಲ್ಲಿ ಹರಾಜು ಹಾಕಿದ್ದ ’ಬುಲ್ಲಿ ಬಾಯ್’ ಆಪ್ ಪ್ರಕರಣದ ಪ್ರಮುಖ ಸಂಚುಕೋರನನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

“ದೆಹಲಿ ಪೊಲೀಸ್ ವಿಶೇಷ ಘಟಕದ ಐಎಫ್‌ಎಸ್‌ಒ ತಂಡವು ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ಬುಲ್ಲಿ ಬಾಯ್‌ ಆಪ್ ರಚನೆ ಮಾಡಿದ್ದ ಸೃಷ್ಟಿಕರ್ತ, ಸಂಚುಕೋರ ನೀರಜ್ ಬಿಷ್ಣೋಯ್ ಎಂಬುವವರನ್ನು ಅಸ್ಸಾಂನಲ್ಲಿ ಬಂಧಿಸಿದೆ. ಈ ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಇತನೇ” ಎಂದು IFSO ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.

21 ವರ್ಷದ ನೀರಜ್ ಬಿಷ್ಣೋಯ್ ಭೋಪಾಲ್ ಮೂಲದ ಶಿಕ್ಷಣ ಸಂಸ್ಥೆಯಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯನ್ನು ಅಸ್ಸಾಂನ ಜೋರ್ಹತ್‌ನಲ್ಲಿರುವ ಅವರ ಸ್ವಗ್ರಾಮದಿಂದ ಬಂಧಿಸಲಾಗಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಬುಲ್ಲಿ ಬಾಯ್‌’ ವಿಕೃತಿ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ದನಿಯೆತ್ತಿರುವ ಪ್ರಮುಖ ಮುಸ್ಲಿಂ ಮಹಿಳಾ ಪತ್ರಕರ್ತರು, ವಕೀಲರು ಮತ್ತು ಹೋರಾಟಗಾರ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿದ್ದ ಈ ಆಪ್‌ ಪ್ರಕರಣದಲ್ಲಿ ಇದು ನಾಲ್ಕನೇ ಬಂಧನವಾಗಿದೆ.

ಮುಂಬೈ ಪೊಲೀಸರ ಸೈಬರ್ ಸೆಲ್ ಈ ಹಿಂದೆ ಮೂವರನ್ನು ಬಂಧಿಸಿತ್ತು. 21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮಾಸ್ಟರ್ ಮೈಂಡ್ ಶ್ವೇತಾ ಸಿಂಗ್ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಪೊಲೀಸರು ಐಪಿಸಿ ಮತ್ತು ಐಟಿ ಕಾಯ್ದೆಯ ಹಲವು ಸೆಕ್ಷನ್ ಗಳ ಆಧಾರದಲ್ಲಿ ಬುಲ್ಲಿ ಆಪ್ ತಯಾರಕರು, ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡವರು, ಮುಂತಾದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...