Homeಮುಖಪುಟ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

- Advertisement -
- Advertisement -

ಮುಸ್ಲಿಂ ಮಹಿಳೆಯರನ್ನು ಆನ್‌ಲೈನ್‌ನಲ್ಲಿ ಹರಾಜು ಹಾಕಿದ್ದ ’ಬುಲ್ಲಿ ಬಾಯ್’ ಆಪ್ ಪ್ರಕರಣದ ಪ್ರಮುಖ ಸಂಚುಕೋರನನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

“ದೆಹಲಿ ಪೊಲೀಸ್ ವಿಶೇಷ ಘಟಕದ ಐಎಫ್‌ಎಸ್‌ಒ ತಂಡವು ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ಬುಲ್ಲಿ ಬಾಯ್‌ ಆಪ್ ರಚನೆ ಮಾಡಿದ್ದ ಸೃಷ್ಟಿಕರ್ತ, ಸಂಚುಕೋರ ನೀರಜ್ ಬಿಷ್ಣೋಯ್ ಎಂಬುವವರನ್ನು ಅಸ್ಸಾಂನಲ್ಲಿ ಬಂಧಿಸಿದೆ. ಈ ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಇತನೇ” ಎಂದು IFSO ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.

21 ವರ್ಷದ ನೀರಜ್ ಬಿಷ್ಣೋಯ್ ಭೋಪಾಲ್ ಮೂಲದ ಶಿಕ್ಷಣ ಸಂಸ್ಥೆಯಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯನ್ನು ಅಸ್ಸಾಂನ ಜೋರ್ಹತ್‌ನಲ್ಲಿರುವ ಅವರ ಸ್ವಗ್ರಾಮದಿಂದ ಬಂಧಿಸಲಾಗಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಬುಲ್ಲಿ ಬಾಯ್‌’ ವಿಕೃತಿ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ದನಿಯೆತ್ತಿರುವ ಪ್ರಮುಖ ಮುಸ್ಲಿಂ ಮಹಿಳಾ ಪತ್ರಕರ್ತರು, ವಕೀಲರು ಮತ್ತು ಹೋರಾಟಗಾರ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿದ್ದ ಈ ಆಪ್‌ ಪ್ರಕರಣದಲ್ಲಿ ಇದು ನಾಲ್ಕನೇ ಬಂಧನವಾಗಿದೆ.

ಮುಂಬೈ ಪೊಲೀಸರ ಸೈಬರ್ ಸೆಲ್ ಈ ಹಿಂದೆ ಮೂವರನ್ನು ಬಂಧಿಸಿತ್ತು. 21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮಾಸ್ಟರ್ ಮೈಂಡ್ ಶ್ವೇತಾ ಸಿಂಗ್ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಪೊಲೀಸರು ಐಪಿಸಿ ಮತ್ತು ಐಟಿ ಕಾಯ್ದೆಯ ಹಲವು ಸೆಕ್ಷನ್ ಗಳ ಆಧಾರದಲ್ಲಿ ಬುಲ್ಲಿ ಆಪ್ ತಯಾರಕರು, ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡವರು, ಮುಂತಾದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...