Homeಮುಖಪುಟ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

- Advertisement -
- Advertisement -

ಮುಸ್ಲಿಂ ಮಹಿಳೆಯರನ್ನು ಆನ್‌ಲೈನ್‌ನಲ್ಲಿ ಹರಾಜು ಹಾಕಿದ್ದ ’ಬುಲ್ಲಿ ಬಾಯ್’ ಆಪ್ ಪ್ರಕರಣದ ಪ್ರಮುಖ ಸಂಚುಕೋರನನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

“ದೆಹಲಿ ಪೊಲೀಸ್ ವಿಶೇಷ ಘಟಕದ ಐಎಫ್‌ಎಸ್‌ಒ ತಂಡವು ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ಬುಲ್ಲಿ ಬಾಯ್‌ ಆಪ್ ರಚನೆ ಮಾಡಿದ್ದ ಸೃಷ್ಟಿಕರ್ತ, ಸಂಚುಕೋರ ನೀರಜ್ ಬಿಷ್ಣೋಯ್ ಎಂಬುವವರನ್ನು ಅಸ್ಸಾಂನಲ್ಲಿ ಬಂಧಿಸಿದೆ. ಈ ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಇತನೇ” ಎಂದು IFSO ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.

21 ವರ್ಷದ ನೀರಜ್ ಬಿಷ್ಣೋಯ್ ಭೋಪಾಲ್ ಮೂಲದ ಶಿಕ್ಷಣ ಸಂಸ್ಥೆಯಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯನ್ನು ಅಸ್ಸಾಂನ ಜೋರ್ಹತ್‌ನಲ್ಲಿರುವ ಅವರ ಸ್ವಗ್ರಾಮದಿಂದ ಬಂಧಿಸಲಾಗಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಬುಲ್ಲಿ ಬಾಯ್‌’ ವಿಕೃತಿ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ದನಿಯೆತ್ತಿರುವ ಪ್ರಮುಖ ಮುಸ್ಲಿಂ ಮಹಿಳಾ ಪತ್ರಕರ್ತರು, ವಕೀಲರು ಮತ್ತು ಹೋರಾಟಗಾರ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿದ್ದ ಈ ಆಪ್‌ ಪ್ರಕರಣದಲ್ಲಿ ಇದು ನಾಲ್ಕನೇ ಬಂಧನವಾಗಿದೆ.

ಮುಂಬೈ ಪೊಲೀಸರ ಸೈಬರ್ ಸೆಲ್ ಈ ಹಿಂದೆ ಮೂವರನ್ನು ಬಂಧಿಸಿತ್ತು. 21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮಾಸ್ಟರ್ ಮೈಂಡ್ ಶ್ವೇತಾ ಸಿಂಗ್ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಪೊಲೀಸರು ಐಪಿಸಿ ಮತ್ತು ಐಟಿ ಕಾಯ್ದೆಯ ಹಲವು ಸೆಕ್ಷನ್ ಗಳ ಆಧಾರದಲ್ಲಿ ಬುಲ್ಲಿ ಆಪ್ ತಯಾರಕರು, ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡವರು, ಮುಂತಾದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...