Homeಮುಖಪುಟ’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

’ಬುಲ್ಲಿ ಬಾಯ್’ ಪ್ರಕರಣದ ಪ್ರಮುಖ ಆರೋಪಿ ನೀರಜ್ ಬಿಷ್ಣೋಯ್ ಬಂಧನ: ದೆಹಲಿ ಪೊಲೀಸರು

- Advertisement -
- Advertisement -

ಮುಸ್ಲಿಂ ಮಹಿಳೆಯರನ್ನು ಆನ್‌ಲೈನ್‌ನಲ್ಲಿ ಹರಾಜು ಹಾಕಿದ್ದ ’ಬುಲ್ಲಿ ಬಾಯ್’ ಆಪ್ ಪ್ರಕರಣದ ಪ್ರಮುಖ ಸಂಚುಕೋರನನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ.

“ದೆಹಲಿ ಪೊಲೀಸ್ ವಿಶೇಷ ಘಟಕದ ಐಎಫ್‌ಎಸ್‌ಒ ತಂಡವು ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ಬುಲ್ಲಿ ಬಾಯ್‌ ಆಪ್ ರಚನೆ ಮಾಡಿದ್ದ ಸೃಷ್ಟಿಕರ್ತ, ಸಂಚುಕೋರ ನೀರಜ್ ಬಿಷ್ಣೋಯ್ ಎಂಬುವವರನ್ನು ಅಸ್ಸಾಂನಲ್ಲಿ ಬಂಧಿಸಿದೆ. ಈ ಅಪ್ಲಿಕೇಶನ್‌ನ ಮುಖ್ಯ ಟ್ವಿಟರ್ ಖಾತೆದಾರ ಇತನೇ” ಎಂದು IFSO ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ತಿಳಿಸಿದ್ದಾರೆ.

21 ವರ್ಷದ ನೀರಜ್ ಬಿಷ್ಣೋಯ್ ಭೋಪಾಲ್ ಮೂಲದ ಶಿಕ್ಷಣ ಸಂಸ್ಥೆಯಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯನ್ನು ಅಸ್ಸಾಂನ ಜೋರ್ಹತ್‌ನಲ್ಲಿರುವ ಅವರ ಸ್ವಗ್ರಾಮದಿಂದ ಬಂಧಿಸಲಾಗಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ‘ಬುಲ್ಲಿ ಬಾಯ್‌’ ವಿಕೃತಿ: ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆ

ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ದನಿಯೆತ್ತಿರುವ ಪ್ರಮುಖ ಮುಸ್ಲಿಂ ಮಹಿಳಾ ಪತ್ರಕರ್ತರು, ವಕೀಲರು ಮತ್ತು ಹೋರಾಟಗಾರ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿದ್ದ ಈ ಆಪ್‌ ಪ್ರಕರಣದಲ್ಲಿ ಇದು ನಾಲ್ಕನೇ ಬಂಧನವಾಗಿದೆ.

ಮುಂಬೈ ಪೊಲೀಸರ ಸೈಬರ್ ಸೆಲ್ ಈ ಹಿಂದೆ ಮೂವರನ್ನು ಬಂಧಿಸಿತ್ತು. 21 ವರ್ಷದ ವಿದ್ಯಾರ್ಥಿ ಮಯಾಂಕ್ ರಾವಲ್, 19 ವರ್ಷದ ಶ್ವೇತಾ ಸಿಂಗ್ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ ಎಂಬುವವರನ್ನು ಬಂಧಿಸಲಾಗಿದೆ. ಈ ಪ್ರಕರಣದ ಮಾಸ್ಟರ್ ಮೈಂಡ್ ಶ್ವೇತಾ ಸಿಂಗ್ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಪೊಲೀಸರು ಐಪಿಸಿ ಮತ್ತು ಐಟಿ ಕಾಯ್ದೆಯ ಹಲವು ಸೆಕ್ಷನ್ ಗಳ ಆಧಾರದಲ್ಲಿ ಬುಲ್ಲಿ ಆಪ್ ತಯಾರಕರು, ಅದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡವರು, ಮುಂತಾದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಏನಿದು ಬುಲ್ಲಿ ಬಾಯ್..?

ಗಿಟ್ ಹಬ್ ಪ್ಲಾಟ್‌ಫಾರ್ಮ್ ಮೂಲಕ ರಚನೆಗೊಂಡ ಮೊಬೈಲ್ ಅಪ್ ಬುಲ್ಲಿ ಬಾಯ್. ಇದರಲ್ಲಿ ದುಷ್ಕರ್ಮಿಗಳು ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಅಸಭ್ಯ ಕಮೆಂಟ್‌ಗಳನ್ನು ಮಾಡಲಾಗುತ್ತಿತ್ತು. ಅಲ್ಲದೆ ಬೇರೆಯವರು ಸಹ ಇದೇ ಮಾಡುವಂತೆ ಪ್ರಚೋದನೆ ನೀಡಲಾಗುತ್ತಿತ್ತು. ಆ ಮೂಲಕ ಟ್ವಿಟರ್‌ನಲ್ಲಿ #BulliBai ಎಂಬ ಹ್ಯಾಷ್ ಟ್ಯಾಗ್‌ ಅನ್ನು ಟ್ರೆಂಡಿಂಗ್ ಮಾಡಲಾಗುತ್ತಿತ್ತು. ಈ ಮುಂಚೆ ಸುಲ್ಲಿ ಡೀಲ್ ಎಂಬ ಆಪ್ ಮೂಲಕ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂಬ ಕಮೆಂಟ್ ಮಾಡುವು ಮೂಲಕ ಅವಮಾನ ಮಾಡಲಾಗುತ್ತಿತ್ತು. ಕೆಲವೊಮ್ಮೆ ಧಾರ್ಮಿಕವಾಗಿ ಹೀಯಾಳಿಸಲು ಇದನ್ನು ಬಳಸಿಕೊಳ್ಳಲಾಗಿತ್ತು. ಅದೇ ರೀತಿ ಬುಲ್ಲಿ ಬಾಯ್ ನಲ್ಲಿಯೂ ಕೂಡ 100 ಮುಸ್ಲಿಂ ಮಹಿಳೆಯರ ಚಿತ್ರಗಳನ್ನು ಪ್ರಕಟಿಸಿ ಮಾರಾಟಕ್ಕಿದ್ದಾರೆ ಎಂದು ಪ್ರಕಟಿಸಿದಾಗ ಅದರಲ್ಲಿ ಒಬ್ಬ ಖ್ಯಾತ ಮುಸ್ಲಿಂ ಪತ್ರಕರ್ತೆಯ ಫೋಟೊ ಸಹ ಪ್ರಕಟಿಸಲಾಗಿತ್ತು. ಇಂದಿನ ನಿಮ್ಮ ಬುಲ್ಲಿ ಬಾಯ್ ಇವರು ಎಂದು ಮಹಿಳೆಯರ ಫೋಟೊಗಳನ್ನು ಅಪ್‌ಲೋಡ್ ಮಾಡಿ ಅದರ ಕೆಳಗೆ ಹರಾಜಿಗಿಡಲಾಗಿದೆ ಎಂದು ಬರೆದು ವಿಕೃತಿ ಮೆರೆಯಲಾಗುತ್ತಿತ್ತು. ಪತ್ರಕರ್ತರೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿತ್ತು.


ಇದನ್ನೂ ಓದಿ: ಬೆಂಗಳೂರು ಮೂಲದ ಯುವಕನ ಬಂಧನ: ಏನಿದು ಬುಲ್ಲಿ ಬಾಯ್ ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...