Homeಕರ್ನಾಟಕಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟಗಳ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

- Advertisement -
- Advertisement -

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚಾರಿತ್ರ್ಯ ಹರಣ ಮಾಡಲು ಸೃಷ್ಟಿಸಲಾಗಿದ್ದ “ಬುಲ್ಲಿ ಬಾಯಿ” ಮತ್ತು “ಸುಲ್ಲಿ ಡೀಲ್ಸ್” ಆಪ್‌ಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸುದೀರ್ಘವಾದ ಚಾರ್ಜ್‌‌ಶೀಟ್ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ಕೋಶದ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಘಟಕವು ಪ್ರಕರಣಗಳ ತನಿಖೆ ಮಾಡುತ್ತಿದೆ.

ಸುಲ್ಲಿ ಡೀಲ್ಸ್ ಮೊಬೈಲ್ ಅಪ್ಲಿಕೇಶನ್ ವಿಕೃತಿಯು ಜುಲೈ 2021ರಲ್ಲಿ ಬೆಳಕಿಗೆ ಬಂದಿತ್ತು. ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಪೋಸ್ಟ್‌ ಮಾಡಿ, ಹರಾಜಿಗೆ ಇಡಲಾಗಿತ್ತು. ಆರು ತಿಂಗಳ ಬಳಿಕ ಇಂಥದ್ದೇ ವಿಕೃತಿ ಮೆರೆಯಲಾಗಿತ್ತು.

ಪತ್ರಕರ್ತೆಯೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿ, “ಮೊಬೈಲ್ ಅಪ್ಲಿಕೇಶನ್‌ನಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ತಿಳಿಸಿದರು. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಲು ಉದ್ದೇಶಿಸಲಾಗಿದ್ದ ಬುಲ್ಲಿ ಬಾಯ್‌ ಅಪ್ಲಿಕೇಷನ್‌ ಬೆಳಕಿಗೆ ಬಂತು. ಮತ್ತೊಮ್ಮೆ ಯುಎಸ್ ಮೂಲದ ಗಿಟ್‌ಹಬ್ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ಲಿಕೇಷನ್‌ ರಚಿಸಲಾಗಿತ್ತು.

ಇದನ್ನೂ ಓದಿರಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ಬುಲ್ಲಿ ಬಾಯ್‌ ಅಪ್ಲಿಕೇಶನ್ ರಚಿಸಿದ ನೀರಜ್ ಬಿಷ್ಣೋಯ್ ಎಂಬಾತನನ್ನು ಪ್ರಮುಖ ಆರೋಪಿಯಾಗಿ ಗುರುತಿಸಿ ಜನವರಿ 6ರಂದು ಬಂಧಿಸಲಾಯಿತು. ಸುಲ್ಲಿ ಡೀಲ್ಸ್ ಅಪ್ಲಿಕೇಶನ್‌ನ ಸೃಷ್ಟಿಕರ್ತ ಓಂಕಾರೇಶ್ವರ್ ಠಾಕೂರ್ ಎಂದು ಗುರುತಿಸಿ ಜನವರಿ 8 ರಂದು ದೆಹಲಿ ಪೊಲೀಸರು ಬಂಧಿಸಿದರು.

ಮೂಲಗಳ ಪ್ರಕಾರ, ಮಾರ್ಚ್ 4ರಂದು ದೆಹಲಿಯ ಸ್ಥಳೀಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟ ಚಾರ್ಜ್‌‌ಶೀಟ್ ಬರೆಯಲಾಗಿದೆ.

ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ ದೆಹಲಿ ಪೊಲೀಸರ ಸೈಬರ್ ಕ್ರೈಂ ಘಟಕವು ಜುಲೈ 8 ರಂದು ಐಪಿಸಿ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

ಅದಾಗ್ಯೂ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯ ಕಾಪಾಡುವಲ್ಲಿ ಪೂರ್ವಗ್ರಹ ಹೊಂದಿರುವುದು), 153 ಬಿ (ರಾಷ್ಟ್ರೀಯ ಏಕತೆಗೆ ಸಂಬಂಧಿಸಿದ ಪೂರ್ವಗ್ರಹಗಳು, ಆರೋಪಗಳು, ಸಮರ್ಥನೆಗಳು), 354ಎ(3) (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಶಿಕ್ಷೆ) ಐಟಿ ಕಾಯ್ದೆಯ ಸೆಕ್ಷನ್ 66, 67 ಅಡಿ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

ಪತ್ರಕರ್ತರು, ಸಮಾಜ ಸೇವಕರು, ವಿದ್ಯಾರ್ಥಿಗಳು, ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಹಲವಾರು ಮಹಿಳೆಯರ ಚಿತ್ರಗಳನ್ನು ಬುಲ್ಲಿ ಬಾಯ್‌ ಅಪ್ಲಿಕೇಷನ್‌ನಲ್ಲಿ ಪೋಸ್ಟ್‌‌ ಮಾಡಿ ಅವಹೇಳನಕಾರಿ ಬರೆದು ಹರಾಜಿಗಿಡಲಾಗಿತ್ತು.

ಆರೋಪಿ ನೀರಜ್ ಬಿಷ್ಣೋಯ್ ವಿರುದ್ಧ 153ಎ, 153ಬಿ, 354ಎ, 509 ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ. ಬಿಷ್ಣೋಯ್ ಅಸ್ಸಾಂನ ಜೋರ್ಹತ್ ಗ್ರಾಮದ ನಿವಾಸಿಯಾಗಿದ್ದು, ಬಿ.ಟೆಕ್, ಕಂಪ್ಯೂಟರ್ ಸೈನ್ಸ್‌ ವ್ಯಾಸಂಗ ಮಾಡುತ್ತಿದ್ದನು. ಬಿಷ್ಣೋಯ್ ಬಂಧನದ ಎರಡು ದಿನಗಳ ನಂತರ, 25 ವರ್ಷದ ಓಂಕಾರೇಶ್ವರ್‌‌ ಠಾಕೂರ್‌ನನ್ನು ಮಧ್ಯಪ್ರದೇಶದ ಇಂದೋರ್‌ನಿಂದ ಬಂಧಿಸಲಾಯಿತು.


ಇದನ್ನೂ ಓದಿರಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...