Homeಕರ್ನಾಟಕಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟಗಳ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

- Advertisement -
- Advertisement -

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚಾರಿತ್ರ್ಯ ಹರಣ ಮಾಡಲು ಸೃಷ್ಟಿಸಲಾಗಿದ್ದ “ಬುಲ್ಲಿ ಬಾಯಿ” ಮತ್ತು “ಸುಲ್ಲಿ ಡೀಲ್ಸ್” ಆಪ್‌ಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸುದೀರ್ಘವಾದ ಚಾರ್ಜ್‌‌ಶೀಟ್ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ಕೋಶದ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಘಟಕವು ಪ್ರಕರಣಗಳ ತನಿಖೆ ಮಾಡುತ್ತಿದೆ.

ಸುಲ್ಲಿ ಡೀಲ್ಸ್ ಮೊಬೈಲ್ ಅಪ್ಲಿಕೇಶನ್ ವಿಕೃತಿಯು ಜುಲೈ 2021ರಲ್ಲಿ ಬೆಳಕಿಗೆ ಬಂದಿತ್ತು. ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಪೋಸ್ಟ್‌ ಮಾಡಿ, ಹರಾಜಿಗೆ ಇಡಲಾಗಿತ್ತು. ಆರು ತಿಂಗಳ ಬಳಿಕ ಇಂಥದ್ದೇ ವಿಕೃತಿ ಮೆರೆಯಲಾಗಿತ್ತು.

ಪತ್ರಕರ್ತೆಯೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿ, “ಮೊಬೈಲ್ ಅಪ್ಲಿಕೇಶನ್‌ನಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ತಿಳಿಸಿದರು. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಲು ಉದ್ದೇಶಿಸಲಾಗಿದ್ದ ಬುಲ್ಲಿ ಬಾಯ್‌ ಅಪ್ಲಿಕೇಷನ್‌ ಬೆಳಕಿಗೆ ಬಂತು. ಮತ್ತೊಮ್ಮೆ ಯುಎಸ್ ಮೂಲದ ಗಿಟ್‌ಹಬ್ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ಲಿಕೇಷನ್‌ ರಚಿಸಲಾಗಿತ್ತು.

ಇದನ್ನೂ ಓದಿರಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ಬುಲ್ಲಿ ಬಾಯ್‌ ಅಪ್ಲಿಕೇಶನ್ ರಚಿಸಿದ ನೀರಜ್ ಬಿಷ್ಣೋಯ್ ಎಂಬಾತನನ್ನು ಪ್ರಮುಖ ಆರೋಪಿಯಾಗಿ ಗುರುತಿಸಿ ಜನವರಿ 6ರಂದು ಬಂಧಿಸಲಾಯಿತು. ಸುಲ್ಲಿ ಡೀಲ್ಸ್ ಅಪ್ಲಿಕೇಶನ್‌ನ ಸೃಷ್ಟಿಕರ್ತ ಓಂಕಾರೇಶ್ವರ್ ಠಾಕೂರ್ ಎಂದು ಗುರುತಿಸಿ ಜನವರಿ 8 ರಂದು ದೆಹಲಿ ಪೊಲೀಸರು ಬಂಧಿಸಿದರು.

ಮೂಲಗಳ ಪ್ರಕಾರ, ಮಾರ್ಚ್ 4ರಂದು ದೆಹಲಿಯ ಸ್ಥಳೀಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟ ಚಾರ್ಜ್‌‌ಶೀಟ್ ಬರೆಯಲಾಗಿದೆ.

ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ ದೆಹಲಿ ಪೊಲೀಸರ ಸೈಬರ್ ಕ್ರೈಂ ಘಟಕವು ಜುಲೈ 8 ರಂದು ಐಪಿಸಿ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

ಅದಾಗ್ಯೂ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯ ಕಾಪಾಡುವಲ್ಲಿ ಪೂರ್ವಗ್ರಹ ಹೊಂದಿರುವುದು), 153 ಬಿ (ರಾಷ್ಟ್ರೀಯ ಏಕತೆಗೆ ಸಂಬಂಧಿಸಿದ ಪೂರ್ವಗ್ರಹಗಳು, ಆರೋಪಗಳು, ಸಮರ್ಥನೆಗಳು), 354ಎ(3) (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಶಿಕ್ಷೆ) ಐಟಿ ಕಾಯ್ದೆಯ ಸೆಕ್ಷನ್ 66, 67 ಅಡಿ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

ಪತ್ರಕರ್ತರು, ಸಮಾಜ ಸೇವಕರು, ವಿದ್ಯಾರ್ಥಿಗಳು, ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಹಲವಾರು ಮಹಿಳೆಯರ ಚಿತ್ರಗಳನ್ನು ಬುಲ್ಲಿ ಬಾಯ್‌ ಅಪ್ಲಿಕೇಷನ್‌ನಲ್ಲಿ ಪೋಸ್ಟ್‌‌ ಮಾಡಿ ಅವಹೇಳನಕಾರಿ ಬರೆದು ಹರಾಜಿಗಿಡಲಾಗಿತ್ತು.

ಆರೋಪಿ ನೀರಜ್ ಬಿಷ್ಣೋಯ್ ವಿರುದ್ಧ 153ಎ, 153ಬಿ, 354ಎ, 509 ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ. ಬಿಷ್ಣೋಯ್ ಅಸ್ಸಾಂನ ಜೋರ್ಹತ್ ಗ್ರಾಮದ ನಿವಾಸಿಯಾಗಿದ್ದು, ಬಿ.ಟೆಕ್, ಕಂಪ್ಯೂಟರ್ ಸೈನ್ಸ್‌ ವ್ಯಾಸಂಗ ಮಾಡುತ್ತಿದ್ದನು. ಬಿಷ್ಣೋಯ್ ಬಂಧನದ ಎರಡು ದಿನಗಳ ನಂತರ, 25 ವರ್ಷದ ಓಂಕಾರೇಶ್ವರ್‌‌ ಠಾಕೂರ್‌ನನ್ನು ಮಧ್ಯಪ್ರದೇಶದ ಇಂದೋರ್‌ನಿಂದ ಬಂಧಿಸಲಾಯಿತು.


ಇದನ್ನೂ ಓದಿರಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...