Homeಕರ್ನಾಟಕಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟಗಳ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

- Advertisement -
- Advertisement -

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚಾರಿತ್ರ್ಯ ಹರಣ ಮಾಡಲು ಸೃಷ್ಟಿಸಲಾಗಿದ್ದ “ಬುಲ್ಲಿ ಬಾಯಿ” ಮತ್ತು “ಸುಲ್ಲಿ ಡೀಲ್ಸ್” ಆಪ್‌ಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸುದೀರ್ಘವಾದ ಚಾರ್ಜ್‌‌ಶೀಟ್ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ಕೋಶದ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಘಟಕವು ಪ್ರಕರಣಗಳ ತನಿಖೆ ಮಾಡುತ್ತಿದೆ.

ಸುಲ್ಲಿ ಡೀಲ್ಸ್ ಮೊಬೈಲ್ ಅಪ್ಲಿಕೇಶನ್ ವಿಕೃತಿಯು ಜುಲೈ 2021ರಲ್ಲಿ ಬೆಳಕಿಗೆ ಬಂದಿತ್ತು. ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಪೋಸ್ಟ್‌ ಮಾಡಿ, ಹರಾಜಿಗೆ ಇಡಲಾಗಿತ್ತು. ಆರು ತಿಂಗಳ ಬಳಿಕ ಇಂಥದ್ದೇ ವಿಕೃತಿ ಮೆರೆಯಲಾಗಿತ್ತು.

ಪತ್ರಕರ್ತೆಯೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿ, “ಮೊಬೈಲ್ ಅಪ್ಲಿಕೇಶನ್‌ನಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ತಿಳಿಸಿದರು. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಲು ಉದ್ದೇಶಿಸಲಾಗಿದ್ದ ಬುಲ್ಲಿ ಬಾಯ್‌ ಅಪ್ಲಿಕೇಷನ್‌ ಬೆಳಕಿಗೆ ಬಂತು. ಮತ್ತೊಮ್ಮೆ ಯುಎಸ್ ಮೂಲದ ಗಿಟ್‌ಹಬ್ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ಲಿಕೇಷನ್‌ ರಚಿಸಲಾಗಿತ್ತು.

ಇದನ್ನೂ ಓದಿರಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ಬುಲ್ಲಿ ಬಾಯ್‌ ಅಪ್ಲಿಕೇಶನ್ ರಚಿಸಿದ ನೀರಜ್ ಬಿಷ್ಣೋಯ್ ಎಂಬಾತನನ್ನು ಪ್ರಮುಖ ಆರೋಪಿಯಾಗಿ ಗುರುತಿಸಿ ಜನವರಿ 6ರಂದು ಬಂಧಿಸಲಾಯಿತು. ಸುಲ್ಲಿ ಡೀಲ್ಸ್ ಅಪ್ಲಿಕೇಶನ್‌ನ ಸೃಷ್ಟಿಕರ್ತ ಓಂಕಾರೇಶ್ವರ್ ಠಾಕೂರ್ ಎಂದು ಗುರುತಿಸಿ ಜನವರಿ 8 ರಂದು ದೆಹಲಿ ಪೊಲೀಸರು ಬಂಧಿಸಿದರು.

ಮೂಲಗಳ ಪ್ರಕಾರ, ಮಾರ್ಚ್ 4ರಂದು ದೆಹಲಿಯ ಸ್ಥಳೀಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟ ಚಾರ್ಜ್‌‌ಶೀಟ್ ಬರೆಯಲಾಗಿದೆ.

ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ ದೆಹಲಿ ಪೊಲೀಸರ ಸೈಬರ್ ಕ್ರೈಂ ಘಟಕವು ಜುಲೈ 8 ರಂದು ಐಪಿಸಿ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

ಅದಾಗ್ಯೂ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯ ಕಾಪಾಡುವಲ್ಲಿ ಪೂರ್ವಗ್ರಹ ಹೊಂದಿರುವುದು), 153 ಬಿ (ರಾಷ್ಟ್ರೀಯ ಏಕತೆಗೆ ಸಂಬಂಧಿಸಿದ ಪೂರ್ವಗ್ರಹಗಳು, ಆರೋಪಗಳು, ಸಮರ್ಥನೆಗಳು), 354ಎ(3) (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಶಿಕ್ಷೆ) ಐಟಿ ಕಾಯ್ದೆಯ ಸೆಕ್ಷನ್ 66, 67 ಅಡಿ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

ಪತ್ರಕರ್ತರು, ಸಮಾಜ ಸೇವಕರು, ವಿದ್ಯಾರ್ಥಿಗಳು, ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಹಲವಾರು ಮಹಿಳೆಯರ ಚಿತ್ರಗಳನ್ನು ಬುಲ್ಲಿ ಬಾಯ್‌ ಅಪ್ಲಿಕೇಷನ್‌ನಲ್ಲಿ ಪೋಸ್ಟ್‌‌ ಮಾಡಿ ಅವಹೇಳನಕಾರಿ ಬರೆದು ಹರಾಜಿಗಿಡಲಾಗಿತ್ತು.

ಆರೋಪಿ ನೀರಜ್ ಬಿಷ್ಣೋಯ್ ವಿರುದ್ಧ 153ಎ, 153ಬಿ, 354ಎ, 509 ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ. ಬಿಷ್ಣೋಯ್ ಅಸ್ಸಾಂನ ಜೋರ್ಹತ್ ಗ್ರಾಮದ ನಿವಾಸಿಯಾಗಿದ್ದು, ಬಿ.ಟೆಕ್, ಕಂಪ್ಯೂಟರ್ ಸೈನ್ಸ್‌ ವ್ಯಾಸಂಗ ಮಾಡುತ್ತಿದ್ದನು. ಬಿಷ್ಣೋಯ್ ಬಂಧನದ ಎರಡು ದಿನಗಳ ನಂತರ, 25 ವರ್ಷದ ಓಂಕಾರೇಶ್ವರ್‌‌ ಠಾಕೂರ್‌ನನ್ನು ಮಧ್ಯಪ್ರದೇಶದ ಇಂದೋರ್‌ನಿಂದ ಬಂಧಿಸಲಾಯಿತು.


ಇದನ್ನೂ ಓದಿರಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...