Homeಕರ್ನಾಟಕಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟಗಳ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

- Advertisement -
- Advertisement -

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚಾರಿತ್ರ್ಯ ಹರಣ ಮಾಡಲು ಸೃಷ್ಟಿಸಲಾಗಿದ್ದ “ಬುಲ್ಲಿ ಬಾಯಿ” ಮತ್ತು “ಸುಲ್ಲಿ ಡೀಲ್ಸ್” ಆಪ್‌ಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸುದೀರ್ಘವಾದ ಚಾರ್ಜ್‌‌ಶೀಟ್ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ಕೋಶದ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಘಟಕವು ಪ್ರಕರಣಗಳ ತನಿಖೆ ಮಾಡುತ್ತಿದೆ.

ಸುಲ್ಲಿ ಡೀಲ್ಸ್ ಮೊಬೈಲ್ ಅಪ್ಲಿಕೇಶನ್ ವಿಕೃತಿಯು ಜುಲೈ 2021ರಲ್ಲಿ ಬೆಳಕಿಗೆ ಬಂದಿತ್ತು. ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಪೋಸ್ಟ್‌ ಮಾಡಿ, ಹರಾಜಿಗೆ ಇಡಲಾಗಿತ್ತು. ಆರು ತಿಂಗಳ ಬಳಿಕ ಇಂಥದ್ದೇ ವಿಕೃತಿ ಮೆರೆಯಲಾಗಿತ್ತು.

ಪತ್ರಕರ್ತೆಯೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿ, “ಮೊಬೈಲ್ ಅಪ್ಲಿಕೇಶನ್‌ನಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ತಿಳಿಸಿದರು. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಲು ಉದ್ದೇಶಿಸಲಾಗಿದ್ದ ಬುಲ್ಲಿ ಬಾಯ್‌ ಅಪ್ಲಿಕೇಷನ್‌ ಬೆಳಕಿಗೆ ಬಂತು. ಮತ್ತೊಮ್ಮೆ ಯುಎಸ್ ಮೂಲದ ಗಿಟ್‌ಹಬ್ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ಲಿಕೇಷನ್‌ ರಚಿಸಲಾಗಿತ್ತು.

ಇದನ್ನೂ ಓದಿರಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ಬುಲ್ಲಿ ಬಾಯ್‌ ಅಪ್ಲಿಕೇಶನ್ ರಚಿಸಿದ ನೀರಜ್ ಬಿಷ್ಣೋಯ್ ಎಂಬಾತನನ್ನು ಪ್ರಮುಖ ಆರೋಪಿಯಾಗಿ ಗುರುತಿಸಿ ಜನವರಿ 6ರಂದು ಬಂಧಿಸಲಾಯಿತು. ಸುಲ್ಲಿ ಡೀಲ್ಸ್ ಅಪ್ಲಿಕೇಶನ್‌ನ ಸೃಷ್ಟಿಕರ್ತ ಓಂಕಾರೇಶ್ವರ್ ಠಾಕೂರ್ ಎಂದು ಗುರುತಿಸಿ ಜನವರಿ 8 ರಂದು ದೆಹಲಿ ಪೊಲೀಸರು ಬಂಧಿಸಿದರು.

ಮೂಲಗಳ ಪ್ರಕಾರ, ಮಾರ್ಚ್ 4ರಂದು ದೆಹಲಿಯ ಸ್ಥಳೀಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟ ಚಾರ್ಜ್‌‌ಶೀಟ್ ಬರೆಯಲಾಗಿದೆ.

ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ ದೆಹಲಿ ಪೊಲೀಸರ ಸೈಬರ್ ಕ್ರೈಂ ಘಟಕವು ಜುಲೈ 8 ರಂದು ಐಪಿಸಿ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

ಅದಾಗ್ಯೂ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯ ಕಾಪಾಡುವಲ್ಲಿ ಪೂರ್ವಗ್ರಹ ಹೊಂದಿರುವುದು), 153 ಬಿ (ರಾಷ್ಟ್ರೀಯ ಏಕತೆಗೆ ಸಂಬಂಧಿಸಿದ ಪೂರ್ವಗ್ರಹಗಳು, ಆರೋಪಗಳು, ಸಮರ್ಥನೆಗಳು), 354ಎ(3) (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಶಿಕ್ಷೆ) ಐಟಿ ಕಾಯ್ದೆಯ ಸೆಕ್ಷನ್ 66, 67 ಅಡಿ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

ಪತ್ರಕರ್ತರು, ಸಮಾಜ ಸೇವಕರು, ವಿದ್ಯಾರ್ಥಿಗಳು, ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಹಲವಾರು ಮಹಿಳೆಯರ ಚಿತ್ರಗಳನ್ನು ಬುಲ್ಲಿ ಬಾಯ್‌ ಅಪ್ಲಿಕೇಷನ್‌ನಲ್ಲಿ ಪೋಸ್ಟ್‌‌ ಮಾಡಿ ಅವಹೇಳನಕಾರಿ ಬರೆದು ಹರಾಜಿಗಿಡಲಾಗಿತ್ತು.

ಆರೋಪಿ ನೀರಜ್ ಬಿಷ್ಣೋಯ್ ವಿರುದ್ಧ 153ಎ, 153ಬಿ, 354ಎ, 509 ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ. ಬಿಷ್ಣೋಯ್ ಅಸ್ಸಾಂನ ಜೋರ್ಹತ್ ಗ್ರಾಮದ ನಿವಾಸಿಯಾಗಿದ್ದು, ಬಿ.ಟೆಕ್, ಕಂಪ್ಯೂಟರ್ ಸೈನ್ಸ್‌ ವ್ಯಾಸಂಗ ಮಾಡುತ್ತಿದ್ದನು. ಬಿಷ್ಣೋಯ್ ಬಂಧನದ ಎರಡು ದಿನಗಳ ನಂತರ, 25 ವರ್ಷದ ಓಂಕಾರೇಶ್ವರ್‌‌ ಠಾಕೂರ್‌ನನ್ನು ಮಧ್ಯಪ್ರದೇಶದ ಇಂದೋರ್‌ನಿಂದ ಬಂಧಿಸಲಾಯಿತು.


ಇದನ್ನೂ ಓದಿರಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...