Homeಮುಖಪುಟಪಟಾಕಿ ಸಿಡಿಸುವುದು ಧಾರ್ಮಿಕ ಹಕ್ಕಿನಡಿ ರಕ್ಷಿಸಲ್ಪಟ್ಟಿಲ್ಲ : ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್‌. ಓಕಾ

ಪಟಾಕಿ ಸಿಡಿಸುವುದು ಧಾರ್ಮಿಕ ಹಕ್ಕಿನಡಿ ರಕ್ಷಿಸಲ್ಪಟ್ಟಿಲ್ಲ : ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್‌. ಓಕಾ

- Advertisement -
- Advertisement -

ಮಾಲಿನ್ಯ ಅಥವಾ ಪರಿಸರ ಹಾನಿ ಉಂಟುಮಾಡುವ ಧಾರ್ಮಿಕ ಆಚರಣೆಗಳು ಸಂವಿಧಾನದ 25ನೇ ವಿಧಿಯಡಿ (ಧಾರ್ಮಿಕ ಸ್ವಾತಂತ್ರ್ಯದ ಹಕ್ಕು) ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹೇಳಿದ್ದಾರೆ. ನಾಗರಿಕರು, ಸರ್ಕಾರಗಳು ಮತ್ತು ನ್ಯಾಯಾಲಯಗಳು ಹಬ್ಬಗಳು ಮತ್ತು ನಂಬಿಕೆ ಆಧಾರಿತ ಪದ್ಧತಿಗಳು ಪರಿಸರ ಮೇಲೆ ಬೀರುವ ಪರಿಣಾಮದ ಕುರಿತು ಪುನ:ವಿಮರ್ಶಿಸುವಂತೆ ಒತ್ತಾಯಿಸಿದ್ದಾರೆ.

“ಪಟಾಕಿ ಸಿಡಿಸುವುದು ಅಥವಾ ನದಿಗಳನ್ನು ಮಾಲಿನ್ಯ ಮಾಡುವ ಈ ರೀತಿಯ ಚಟುವಟಿಕೆಗಳು ಸಂವಿಧಾನದ 25ನೇ ವಿಧಿಯಡಿ ರಕ್ಷಣೆ ರಕ್ಷಿಸಲ್ಪಟ್ಟಿವೆಯೇ? ಎಂಬುವುದು ಪ್ರಶ್ನೆ. ನನ್ನ ಸೀಮಿತ ಜ್ಞಾನದ ಪ್ರಕಾರ, ಉತ್ತರವು ದೃಢವಾಗಿ ನಕಾರಾತ್ಮಕವಾಗಿರಬೇಕು” ಎಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಆಯೋಜಿಸಿದ್ದ ‘ಕ್ಲೀನ್ ಏರ್, ಕ್ಲೈಮೆಟ್ ಜಸ್ಟಿಸ್ ಅಂಡ್ ವಿ – ಟುಗೆದರ್ ಫಾರ್ ಎ ಸಸ್ಟೇನೇಬಲ್ ಫ್ಯೂಚರ್’ ಎಂಬ ಉಪನ್ಯಾಸದಲ್ಲಿ ಓಕಾ ಹೇಳಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯವಾಗಲಿ ಅಥವಾ ಜನಪ್ರಿಯ ಭಾವನೆಯಾಗಲಿ ಸಾರ್ವಜನಿಕ ಆರೋಗ್ಯ ಅಥವಾ ಪರಿಸರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಮಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

“ಧಾರ್ಮಿಕ ಹಬ್ಬದಂದು ಮಾಲಿನ್ಯ ಸೃಷ್ಟಿಸುವ ಹಕ್ಕು ನನಗಿದೆ ಎಂದು ನಾನು ಹೇಳಲಾರೆ. ಸಂವಿಧಾನವನ್ನು ಪಾಲಿಸುವುದು ಮತ್ತು 21ನೇ ವಿಧಿಯ ಅಡಿಯಲ್ಲಿ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಅನುಭವಿಸುವಂತೆ ನೋಡಿಕೊಳ್ಳುವುದು ನನ್ನ ಮೂಲಭೂತ ಕರ್ತವ್ಯ. ನ್ಯಾಯಾಲಯಗಳು ಪರಿಸರ ವಿಷಯಗಳನ್ನು ನಿರ್ವಹಿಸುವಾಗ, ಅವು ಜನಪ್ರಿಯ ಅಥವಾ ಧಾರ್ಮಿಕ ಭಾವನೆಗಳಿಂದ ಪ್ರಭಾವಿತವಾಗಬಾರದು” ಎಂದು ಅಭಯ್ ಎಸ್‌. ಓಕಾ ಹೇಳಿದ್ದಾರೆ.

ಪರಿಸರ (ರಕ್ಷಣೆ) ಕಾಯ್ದೆ, ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಮತ್ತು ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆಗಳಿಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿಗಳ ಬಗ್ಗೆ ನ್ಯಾಯಮೂರ್ತಿ ಓಕಾ ಕಳವಳ ವ್ಯಕ್ತಪಡಿಸಿದ್ದು, ಇವು ಉಲ್ಲಂಘನೆಗಳಿಗೆ ಕ್ರಿಮಿನಲ್ ಹೊಣೆಗಾರಿಕೆಯನ್ನು ತೆಗೆದುಹಾಕಿವೆ ಎಂದಿದ್ದಾರೆ.

“ಮೊದಲು ಪರಿಸರ ಕಾಯ್ದೆಗಳಲ್ಲಿ (ಇಪಿಎ, ಗಾಳಿ ಮತ್ತು ನೀರು ಕಾಯ್ದೆಗಳು) ಮಾಲಿನ್ಯಕಾರಕ ಕೃತ್ಯಗಳಿಗೆ ಜೈಲು ಶಿಕ್ಷೆ ಅಥವಾ ಅಪರಾಧ ಕೇಸ್ ಹಾಕುವ ನಿಯಮಗಳಿದ್ದವು. ಆದರೆ ಈಗ ಶಾಸಕಾಂಗವು ಆ ನಿಯಮಗಳನ್ನು ತೆಗೆದುಹಾಕಿ, ಕೇವಲ ಹಣದ ದಂಡ ಮಾತ್ರ ವಿಧಿಸುವಂತೆ ಬದಲಾಯಿಸಿದೆ. ಉದಾಹರಣೆಗೆ, ಕುಡಿಯುವ ನೀರನ್ನು ಕಲುಷಿತಗೊಳಿಸಿದರೂ ಆ ವ್ಯಕ್ತಿಗೆ ಜೈಲು ಶಿಕ್ಷೆಯಾಗದು, ಕೇವಲ ದಂಡ ಮಾತ್ರ. ಇದು ಪರಿಸರ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ ಎಂಬುದು ಓಕಾ ಕಳವಳ ವ್ಯಕ್ತಪಡಿಸಿದ್ದಾರೆ.

ಪರಿಸರ ಸಂರಕ್ಷಣೆ ಯಾವಾಗಲೂ ಭಾರತೀಯ ಸಂಸ್ಕೃತಿಯ ಭಾಗವಾಗಿದೆ ಎಂದು ನಿವೃತ್ತ ನ್ಯಾಯಾಧೀಶರು ಹೇಳಿದ್ದಾರೆ.

“ಶತಮಾನಗಳಿಂದ ನಮ್ಮ ಧಾರ್ಮಿಕ ಮತ್ತು ತತ್ವಜ್ಞಾನಿಗಳು ನಮ್ಮ ಪರಿಸರವನ್ನು ಸಂರಕ್ಷಿಸುವ ಮಹತ್ವವನ್ನು ನಮಗೆ ಕಲಿಸಿದ್ದಾರೆ. ನಾವು ಈ ಅಂತಾರಾಷ್ಟ್ರೀಯ ಸಮಾವೇಶಗಳಿಗೆ ಹೋಗಬೇಕಾಗಿಲ್ಲ; ಅದು ನಮ್ಮ ಸಂಸ್ಕೃತಿಯ ಒಂದು ಭಾಗವಾಗಿದೆ. ಬಹುಶಃ ಕಾಲಾನಂತರದಲ್ಲಿ, ನಮ್ಮ ಸಂಸ್ಕೃತಿಯಲ್ಲಿ ಯಾವುದು ಉತ್ತಮ ಎಂಬುದನ್ನು ನಾವು ಮರೆತಿರಬಹುದು” ಎಂದಿದ್ದಾರೆ.

“ಹಸಿರು ಬೆಂಚುಗಳ” ಪರಿಣಾಮಕಾರಿತ್ವವನ್ನು ಅವುಗಳ ಶೀರ್ಷಿಕೆಯಿಂದಲ್ಲ, ಬದಲಾಗಿ ಅವುಗಳ ಕೆಲಸದ ಮೂಲಕ ನಿರ್ಣಯಿಸಬೇಕು ಎಂದು ಓಕಾ ಹೇಳಿದ್ದಾರೆ.

“ಒಂದು ಪೀಠವು ಹಸಿರು ಬಣ್ಣದ್ದಾಗಿದೆಯೋ ಇಲ್ಲವೋ ಎಂಬುದು ಅದು ಹೊರಡಿಸಿದ ಆದೇಶಗಳ ಸ್ವರೂಪವನ್ನು ಅವಲಂಬಿಸಿರುತ್ತದೆ ಹೊರತು, ಅದರ ಹೆಸರಿನ ಆಧಾರದ ಮೇಲೆ ಅಲ್ಲ” ಎಂದು ಅವರು ಟೀಕಿಸಿದ್ದಾರೆ.

ನ್ಯಾಯಪೀಠದಲ್ಲಿ ತಮ್ಮ ಅವಧಿಯನ್ನು ನೆನಪಿಸಿಕೊಂಡ ನ್ಯಾಯಮೂರ್ತಿ ಓಕಾ, “ದುಃಖದ ಸಂಗತಿಯೆಂದರೆ ಪರಿಸರ ಸಮಸ್ಯೆಗಳಿಗೆ ನ್ಯಾಯಾಲಯದ ಮೆಟ್ಟಿಲೇರಲು ಧೈರ್ಯ ತೋರುವ ನಾಗರಿಕರು ಬಹಳ ಕಡಿಮೆ ಇದ್ದಾರೆ. ದುರದೃಷ್ಟವಶಾತ್, ಇಂತಹ ಪರಿಸರ ಪರ ಕೆಲಸ ಮಾಡುವರನ್ನು ರಾಜಕೀಯ ವರ್ಗ ಮತ್ತು ಧಾರ್ಮಿಕ ಗುಂಪುಗಳು ಅಪಹಾಸ್ಯ ಮಾಡುತ್ತವೆ. ಪರಿಸರ ವಿಷಯಗಳಲ್ಲಿ ಬಲವಾದ ಆದೇಶಗಳನ್ನು ನೀಡುವ ನ್ಯಾಯಾಧೀಶರನ್ನು ಕೂಡ ಗುರಿಯಾಗಿಸಲಾಗುತ್ತಿದೆ. ಇದು ಅತ್ಯಂತ ದುರದೃಷ್ಟಕರ ಪರಿಸ್ಥಿತಿ” ಎಂದಿದ್ದಾರೆ.

ನಿಜವಾದ ಅಭಿವೃದ್ಧಿಯು ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕೇ ಹೊರತು, ಪರಿಸರವನ್ನು ಕೆಡಿಸಬಾರದು ಎಂದು ನ್ಯಾಯಮೂರ್ತಿ ಓಕಾ ತಿಳಿಸಿದ್ದಾರೆ.

“ಪರಿಸರ ಕಾಳಜಿಯನ್ನು ಅಭಿವೃದ್ಧಿಯ ಅಗತ್ಯದೊಂದಿಗೆ ಸಮತೋಲನಗೊಳಿಸಬೇಕು ಎಂಬ ಅಭಿಪ್ರಾಯ ಚಾಲ್ತಿಯಲ್ಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ನಿಜವಾದ ಅಭಿವೃದ್ಧಿ ಎಂದರೆ ಏನು ಎಂಬುದನ್ನು ನಾವು ನಿರ್ಲಕ್ಷಿಸಿರುವುದರಿಂದ ಬಹುಶಃ ಇದೆಲ್ಲವೂ ಸಂಭವಿಸಿದೆ” ಎಂದಿದ್ದಾರೆ.

“ನಮ್ಮ ನಗರಗಳಲ್ಲಿ ಬಡವರಿಗೆ ಕೈಗೆಟುಕುವ ವಸತಿ ಸೌಕರ್ಯ, ಸಾಮಾನ್ಯ ಜನರಿಗೆ ಕೈಗೆಟುಕುವ ಸಾರಿಗೆ, ಶಿಕ್ಷಣ ಮತ್ತು ಆರೋಗ್ಯವನ್ನು ಸೃಷ್ಟಿಸುವುದು ನಿಜವಾದ ಅಭಿವೃದ್ಧಿ ಎಂದು ನಾನು ಭಾವಿಸುತ್ತೇನೆ. ಇಂದು ಯಾವುದೇ ನಗರದಲ್ಲಿ, ಸಾಮಾನ್ಯ ವ್ಯಕ್ತಿಯು ವಸತಿ ಸೌಕರ್ಯವನ್ನು ಪಡೆಯಲು ಸಾಹಸ ಮಾಡಬಹುದೇ? ಅದು ಅಸಾಧ್ಯ,” ಎಂದು ಹೇಳಿದ್ದಾರೆ.

ನ್ಯಾಯಾಂಗ ಆದೇಶಗಳು ವಿಕಸಿತ ಭಾರತ ಅಭಿಯಾನಕ್ಕೆ ಅಡ್ಡಿಯಾಗುತ್ತಿವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಇತ್ತೀಚೆಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಓಕಾ, “ಸರ್ಕಾರದಲ್ಲಿ ಉತ್ತಮ ಹುದ್ದೆಯನ್ನು ಹೊಂದಿರುವ ಒಬ್ಬ ಪ್ರಖ್ಯಾತ ವ್ಯಕ್ತಿ ಇತ್ತೀಚೆಗೆ ಟೀಕೆ ಮಾಡಿದ್ದಾರೆ. ನ್ಯಾಯಾಲಯದ ಆದೇಶಗಳು ವಿಕಸಿತ ಭಾರತಕ್ಕೆ ಅಡ್ಡಿಯಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನಿಗೂ ರಚನಾತ್ಮಕ ಟೀಕೆ ಮಾಡುವ ಹಕ್ಕಿದೆ ಎಂದು ನಾನು ಹೇಳಿದ್ದೇನೆ. ಆದರೆ, ಈ ವಿದ್ವಾಂಸರು ವಿಕಸಿತ ಭಾರತದ ಪ್ರಯತ್ನಕ್ಕೆ ಅಡ್ಡಿಯಾದ ನ್ಯಾಯಾಂಗ ಆದೇಶಗಳ ಉದಾಹರಣೆಗಳನ್ನು ನೀಡಬೇಕಾಗಿತ್ತು. ಅವರು ವಿವರಗಳನ್ನು ಕೊಡಬೇಕಿತ್ತು. ಆ ಆದೇಶಗಳು ಯಾವುವು? ಎಂದು ಅವರು ಹೇಳಿದ್ದರೆ, ಅದು ರಚನಾತ್ಮಕ ಟೀಕೆಯಾಗುತ್ತಿತ್ತು. ಅವರು ನಿದರ್ಶನಗಳನ್ನು ನೀಡಿದ್ದರೆ, ನಾವು ಆ ಆದೇಶಗಳನ್ನು ಅಧ್ಯಯನ ಮಾಡುತ್ತಿದ್ದೆವು” ಎಂದಿದ್ದಾರೆ.

Courtesy: barandbench.com

ಒಳಮೀಸಲಾತಿಯ ಒಳಸುಳಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...