Homeಮುಖಪುಟಪಟಾಕಿ ಸಿಡಿಸುವುದು ಧಾರ್ಮಿಕ ಹಕ್ಕಿನಡಿ ರಕ್ಷಿಸಲ್ಪಟ್ಟಿಲ್ಲ : ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್‌. ಓಕಾ

ಪಟಾಕಿ ಸಿಡಿಸುವುದು ಧಾರ್ಮಿಕ ಹಕ್ಕಿನಡಿ ರಕ್ಷಿಸಲ್ಪಟ್ಟಿಲ್ಲ : ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್‌. ಓಕಾ

- Advertisement -
- Advertisement -

ಮಾಲಿನ್ಯ ಅಥವಾ ಪರಿಸರ ಹಾನಿ ಉಂಟುಮಾಡುವ ಧಾರ್ಮಿಕ ಆಚರಣೆಗಳು ಸಂವಿಧಾನದ 25ನೇ ವಿಧಿಯಡಿ (ಧಾರ್ಮಿಕ ಸ್ವಾತಂತ್ರ್ಯದ ಹಕ್ಕು) ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹೇಳಿದ್ದಾರೆ. ನಾಗರಿಕರು, ಸರ್ಕಾರಗಳು ಮತ್ತು ನ್ಯಾಯಾಲಯಗಳು ಹಬ್ಬಗಳು ಮತ್ತು ನಂಬಿಕೆ ಆಧಾರಿತ ಪದ್ಧತಿಗಳು ಪರಿಸರ ಮೇಲೆ ಬೀರುವ ಪರಿಣಾಮದ ಕುರಿತು ಪುನ:ವಿಮರ್ಶಿಸುವಂತೆ ಒತ್ತಾಯಿಸಿದ್ದಾರೆ.

“ಪಟಾಕಿ ಸಿಡಿಸುವುದು ಅಥವಾ ನದಿಗಳನ್ನು ಮಾಲಿನ್ಯ ಮಾಡುವ ಈ ರೀತಿಯ ಚಟುವಟಿಕೆಗಳು ಸಂವಿಧಾನದ 25ನೇ ವಿಧಿಯಡಿ ರಕ್ಷಣೆ ರಕ್ಷಿಸಲ್ಪಟ್ಟಿವೆಯೇ? ಎಂಬುವುದು ಪ್ರಶ್ನೆ. ನನ್ನ ಸೀಮಿತ ಜ್ಞಾನದ ಪ್ರಕಾರ, ಉತ್ತರವು ದೃಢವಾಗಿ ನಕಾರಾತ್ಮಕವಾಗಿರಬೇಕು” ಎಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಆಯೋಜಿಸಿದ್ದ ‘ಕ್ಲೀನ್ ಏರ್, ಕ್ಲೈಮೆಟ್ ಜಸ್ಟಿಸ್ ಅಂಡ್ ವಿ – ಟುಗೆದರ್ ಫಾರ್ ಎ ಸಸ್ಟೇನೇಬಲ್ ಫ್ಯೂಚರ್’ ಎಂಬ ಉಪನ್ಯಾಸದಲ್ಲಿ ಓಕಾ ಹೇಳಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯವಾಗಲಿ ಅಥವಾ ಜನಪ್ರಿಯ ಭಾವನೆಯಾಗಲಿ ಸಾರ್ವಜನಿಕ ಆರೋಗ್ಯ ಅಥವಾ ಪರಿಸರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಮಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

“ಧಾರ್ಮಿಕ ಹಬ್ಬದಂದು ಮಾಲಿನ್ಯ ಸೃಷ್ಟಿಸುವ ಹಕ್ಕು ನನಗಿದೆ ಎಂದು ನಾನು ಹೇಳಲಾರೆ. ಸಂವಿಧಾನವನ್ನು ಪಾಲಿಸುವುದು ಮತ್ತು 21ನೇ ವಿಧಿಯ ಅಡಿಯಲ್ಲಿ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಅನುಭವಿಸುವಂತೆ ನೋಡಿಕೊಳ್ಳುವುದು ನನ್ನ ಮೂಲಭೂತ ಕರ್ತವ್ಯ. ನ್ಯಾಯಾಲಯಗಳು ಪರಿಸರ ವಿಷಯಗಳನ್ನು ನಿರ್ವಹಿಸುವಾಗ, ಅವು ಜನಪ್ರಿಯ ಅಥವಾ ಧಾರ್ಮಿಕ ಭಾವನೆಗಳಿಂದ ಪ್ರಭಾವಿತವಾಗಬಾರದು” ಎಂದು ಅಭಯ್ ಎಸ್‌. ಓಕಾ ಹೇಳಿದ್ದಾರೆ.

ಪರಿಸರ (ರಕ್ಷಣೆ) ಕಾಯ್ದೆ, ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಮತ್ತು ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆಗಳಿಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿಗಳ ಬಗ್ಗೆ ನ್ಯಾಯಮೂರ್ತಿ ಓಕಾ ಕಳವಳ ವ್ಯಕ್ತಪಡಿಸಿದ್ದು, ಇವು ಉಲ್ಲಂಘನೆಗಳಿಗೆ ಕ್ರಿಮಿನಲ್ ಹೊಣೆಗಾರಿಕೆಯನ್ನು ತೆಗೆದುಹಾಕಿವೆ ಎಂದಿದ್ದಾರೆ.

“ಮೊದಲು ಪರಿಸರ ಕಾಯ್ದೆಗಳಲ್ಲಿ (ಇಪಿಎ, ಗಾಳಿ ಮತ್ತು ನೀರು ಕಾಯ್ದೆಗಳು) ಮಾಲಿನ್ಯಕಾರಕ ಕೃತ್ಯಗಳಿಗೆ ಜೈಲು ಶಿಕ್ಷೆ ಅಥವಾ ಅಪರಾಧ ಕೇಸ್ ಹಾಕುವ ನಿಯಮಗಳಿದ್ದವು. ಆದರೆ ಈಗ ಶಾಸಕಾಂಗವು ಆ ನಿಯಮಗಳನ್ನು ತೆಗೆದುಹಾಕಿ, ಕೇವಲ ಹಣದ ದಂಡ ಮಾತ್ರ ವಿಧಿಸುವಂತೆ ಬದಲಾಯಿಸಿದೆ. ಉದಾಹರಣೆಗೆ, ಕುಡಿಯುವ ನೀರನ್ನು ಕಲುಷಿತಗೊಳಿಸಿದರೂ ಆ ವ್ಯಕ್ತಿಗೆ ಜೈಲು ಶಿಕ್ಷೆಯಾಗದು, ಕೇವಲ ದಂಡ ಮಾತ್ರ. ಇದು ಪರಿಸರ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ ಎಂಬುದು ಓಕಾ ಕಳವಳ ವ್ಯಕ್ತಪಡಿಸಿದ್ದಾರೆ.

ಪರಿಸರ ಸಂರಕ್ಷಣೆ ಯಾವಾಗಲೂ ಭಾರತೀಯ ಸಂಸ್ಕೃತಿಯ ಭಾಗವಾಗಿದೆ ಎಂದು ನಿವೃತ್ತ ನ್ಯಾಯಾಧೀಶರು ಹೇಳಿದ್ದಾರೆ.

“ಶತಮಾನಗಳಿಂದ ನಮ್ಮ ಧಾರ್ಮಿಕ ಮತ್ತು ತತ್ವಜ್ಞಾನಿಗಳು ನಮ್ಮ ಪರಿಸರವನ್ನು ಸಂರಕ್ಷಿಸುವ ಮಹತ್ವವನ್ನು ನಮಗೆ ಕಲಿಸಿದ್ದಾರೆ. ನಾವು ಈ ಅಂತಾರಾಷ್ಟ್ರೀಯ ಸಮಾವೇಶಗಳಿಗೆ ಹೋಗಬೇಕಾಗಿಲ್ಲ; ಅದು ನಮ್ಮ ಸಂಸ್ಕೃತಿಯ ಒಂದು ಭಾಗವಾಗಿದೆ. ಬಹುಶಃ ಕಾಲಾನಂತರದಲ್ಲಿ, ನಮ್ಮ ಸಂಸ್ಕೃತಿಯಲ್ಲಿ ಯಾವುದು ಉತ್ತಮ ಎಂಬುದನ್ನು ನಾವು ಮರೆತಿರಬಹುದು” ಎಂದಿದ್ದಾರೆ.

“ಹಸಿರು ಬೆಂಚುಗಳ” ಪರಿಣಾಮಕಾರಿತ್ವವನ್ನು ಅವುಗಳ ಶೀರ್ಷಿಕೆಯಿಂದಲ್ಲ, ಬದಲಾಗಿ ಅವುಗಳ ಕೆಲಸದ ಮೂಲಕ ನಿರ್ಣಯಿಸಬೇಕು ಎಂದು ಓಕಾ ಹೇಳಿದ್ದಾರೆ.

“ಒಂದು ಪೀಠವು ಹಸಿರು ಬಣ್ಣದ್ದಾಗಿದೆಯೋ ಇಲ್ಲವೋ ಎಂಬುದು ಅದು ಹೊರಡಿಸಿದ ಆದೇಶಗಳ ಸ್ವರೂಪವನ್ನು ಅವಲಂಬಿಸಿರುತ್ತದೆ ಹೊರತು, ಅದರ ಹೆಸರಿನ ಆಧಾರದ ಮೇಲೆ ಅಲ್ಲ” ಎಂದು ಅವರು ಟೀಕಿಸಿದ್ದಾರೆ.

ನ್ಯಾಯಪೀಠದಲ್ಲಿ ತಮ್ಮ ಅವಧಿಯನ್ನು ನೆನಪಿಸಿಕೊಂಡ ನ್ಯಾಯಮೂರ್ತಿ ಓಕಾ, “ದುಃಖದ ಸಂಗತಿಯೆಂದರೆ ಪರಿಸರ ಸಮಸ್ಯೆಗಳಿಗೆ ನ್ಯಾಯಾಲಯದ ಮೆಟ್ಟಿಲೇರಲು ಧೈರ್ಯ ತೋರುವ ನಾಗರಿಕರು ಬಹಳ ಕಡಿಮೆ ಇದ್ದಾರೆ. ದುರದೃಷ್ಟವಶಾತ್, ಇಂತಹ ಪರಿಸರ ಪರ ಕೆಲಸ ಮಾಡುವರನ್ನು ರಾಜಕೀಯ ವರ್ಗ ಮತ್ತು ಧಾರ್ಮಿಕ ಗುಂಪುಗಳು ಅಪಹಾಸ್ಯ ಮಾಡುತ್ತವೆ. ಪರಿಸರ ವಿಷಯಗಳಲ್ಲಿ ಬಲವಾದ ಆದೇಶಗಳನ್ನು ನೀಡುವ ನ್ಯಾಯಾಧೀಶರನ್ನು ಕೂಡ ಗುರಿಯಾಗಿಸಲಾಗುತ್ತಿದೆ. ಇದು ಅತ್ಯಂತ ದುರದೃಷ್ಟಕರ ಪರಿಸ್ಥಿತಿ” ಎಂದಿದ್ದಾರೆ.

ನಿಜವಾದ ಅಭಿವೃದ್ಧಿಯು ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕೇ ಹೊರತು, ಪರಿಸರವನ್ನು ಕೆಡಿಸಬಾರದು ಎಂದು ನ್ಯಾಯಮೂರ್ತಿ ಓಕಾ ತಿಳಿಸಿದ್ದಾರೆ.

“ಪರಿಸರ ಕಾಳಜಿಯನ್ನು ಅಭಿವೃದ್ಧಿಯ ಅಗತ್ಯದೊಂದಿಗೆ ಸಮತೋಲನಗೊಳಿಸಬೇಕು ಎಂಬ ಅಭಿಪ್ರಾಯ ಚಾಲ್ತಿಯಲ್ಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ನಿಜವಾದ ಅಭಿವೃದ್ಧಿ ಎಂದರೆ ಏನು ಎಂಬುದನ್ನು ನಾವು ನಿರ್ಲಕ್ಷಿಸಿರುವುದರಿಂದ ಬಹುಶಃ ಇದೆಲ್ಲವೂ ಸಂಭವಿಸಿದೆ” ಎಂದಿದ್ದಾರೆ.

“ನಮ್ಮ ನಗರಗಳಲ್ಲಿ ಬಡವರಿಗೆ ಕೈಗೆಟುಕುವ ವಸತಿ ಸೌಕರ್ಯ, ಸಾಮಾನ್ಯ ಜನರಿಗೆ ಕೈಗೆಟುಕುವ ಸಾರಿಗೆ, ಶಿಕ್ಷಣ ಮತ್ತು ಆರೋಗ್ಯವನ್ನು ಸೃಷ್ಟಿಸುವುದು ನಿಜವಾದ ಅಭಿವೃದ್ಧಿ ಎಂದು ನಾನು ಭಾವಿಸುತ್ತೇನೆ. ಇಂದು ಯಾವುದೇ ನಗರದಲ್ಲಿ, ಸಾಮಾನ್ಯ ವ್ಯಕ್ತಿಯು ವಸತಿ ಸೌಕರ್ಯವನ್ನು ಪಡೆಯಲು ಸಾಹಸ ಮಾಡಬಹುದೇ? ಅದು ಅಸಾಧ್ಯ,” ಎಂದು ಹೇಳಿದ್ದಾರೆ.

ನ್ಯಾಯಾಂಗ ಆದೇಶಗಳು ವಿಕಸಿತ ಭಾರತ ಅಭಿಯಾನಕ್ಕೆ ಅಡ್ಡಿಯಾಗುತ್ತಿವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಇತ್ತೀಚೆಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಓಕಾ, “ಸರ್ಕಾರದಲ್ಲಿ ಉತ್ತಮ ಹುದ್ದೆಯನ್ನು ಹೊಂದಿರುವ ಒಬ್ಬ ಪ್ರಖ್ಯಾತ ವ್ಯಕ್ತಿ ಇತ್ತೀಚೆಗೆ ಟೀಕೆ ಮಾಡಿದ್ದಾರೆ. ನ್ಯಾಯಾಲಯದ ಆದೇಶಗಳು ವಿಕಸಿತ ಭಾರತಕ್ಕೆ ಅಡ್ಡಿಯಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನಿಗೂ ರಚನಾತ್ಮಕ ಟೀಕೆ ಮಾಡುವ ಹಕ್ಕಿದೆ ಎಂದು ನಾನು ಹೇಳಿದ್ದೇನೆ. ಆದರೆ, ಈ ವಿದ್ವಾಂಸರು ವಿಕಸಿತ ಭಾರತದ ಪ್ರಯತ್ನಕ್ಕೆ ಅಡ್ಡಿಯಾದ ನ್ಯಾಯಾಂಗ ಆದೇಶಗಳ ಉದಾಹರಣೆಗಳನ್ನು ನೀಡಬೇಕಾಗಿತ್ತು. ಅವರು ವಿವರಗಳನ್ನು ಕೊಡಬೇಕಿತ್ತು. ಆ ಆದೇಶಗಳು ಯಾವುವು? ಎಂದು ಅವರು ಹೇಳಿದ್ದರೆ, ಅದು ರಚನಾತ್ಮಕ ಟೀಕೆಯಾಗುತ್ತಿತ್ತು. ಅವರು ನಿದರ್ಶನಗಳನ್ನು ನೀಡಿದ್ದರೆ, ನಾವು ಆ ಆದೇಶಗಳನ್ನು ಅಧ್ಯಯನ ಮಾಡುತ್ತಿದ್ದೆವು” ಎಂದಿದ್ದಾರೆ.

Courtesy: barandbench.com

ಒಳಮೀಸಲಾತಿಯ ಒಳಸುಳಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...