Homeಮುಖಪುಟಪಟಾಕಿ ಸಿಡಿಸುವುದು ಧಾರ್ಮಿಕ ಹಕ್ಕಿನಡಿ ರಕ್ಷಿಸಲ್ಪಟ್ಟಿಲ್ಲ : ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್‌. ಓಕಾ

ಪಟಾಕಿ ಸಿಡಿಸುವುದು ಧಾರ್ಮಿಕ ಹಕ್ಕಿನಡಿ ರಕ್ಷಿಸಲ್ಪಟ್ಟಿಲ್ಲ : ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್‌. ಓಕಾ

- Advertisement -
- Advertisement -

ಮಾಲಿನ್ಯ ಅಥವಾ ಪರಿಸರ ಹಾನಿ ಉಂಟುಮಾಡುವ ಧಾರ್ಮಿಕ ಆಚರಣೆಗಳು ಸಂವಿಧಾನದ 25ನೇ ವಿಧಿಯಡಿ (ಧಾರ್ಮಿಕ ಸ್ವಾತಂತ್ರ್ಯದ ಹಕ್ಕು) ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹೇಳಿದ್ದಾರೆ. ನಾಗರಿಕರು, ಸರ್ಕಾರಗಳು ಮತ್ತು ನ್ಯಾಯಾಲಯಗಳು ಹಬ್ಬಗಳು ಮತ್ತು ನಂಬಿಕೆ ಆಧಾರಿತ ಪದ್ಧತಿಗಳು ಪರಿಸರ ಮೇಲೆ ಬೀರುವ ಪರಿಣಾಮದ ಕುರಿತು ಪುನ:ವಿಮರ್ಶಿಸುವಂತೆ ಒತ್ತಾಯಿಸಿದ್ದಾರೆ.

“ಪಟಾಕಿ ಸಿಡಿಸುವುದು ಅಥವಾ ನದಿಗಳನ್ನು ಮಾಲಿನ್ಯ ಮಾಡುವ ಈ ರೀತಿಯ ಚಟುವಟಿಕೆಗಳು ಸಂವಿಧಾನದ 25ನೇ ವಿಧಿಯಡಿ ರಕ್ಷಣೆ ರಕ್ಷಿಸಲ್ಪಟ್ಟಿವೆಯೇ? ಎಂಬುವುದು ಪ್ರಶ್ನೆ. ನನ್ನ ಸೀಮಿತ ಜ್ಞಾನದ ಪ್ರಕಾರ, ಉತ್ತರವು ದೃಢವಾಗಿ ನಕಾರಾತ್ಮಕವಾಗಿರಬೇಕು” ಎಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಆಯೋಜಿಸಿದ್ದ ‘ಕ್ಲೀನ್ ಏರ್, ಕ್ಲೈಮೆಟ್ ಜಸ್ಟಿಸ್ ಅಂಡ್ ವಿ – ಟುಗೆದರ್ ಫಾರ್ ಎ ಸಸ್ಟೇನೇಬಲ್ ಫ್ಯೂಚರ್’ ಎಂಬ ಉಪನ್ಯಾಸದಲ್ಲಿ ಓಕಾ ಹೇಳಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯವಾಗಲಿ ಅಥವಾ ಜನಪ್ರಿಯ ಭಾವನೆಯಾಗಲಿ ಸಾರ್ವಜನಿಕ ಆರೋಗ್ಯ ಅಥವಾ ಪರಿಸರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಮಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

“ಧಾರ್ಮಿಕ ಹಬ್ಬದಂದು ಮಾಲಿನ್ಯ ಸೃಷ್ಟಿಸುವ ಹಕ್ಕು ನನಗಿದೆ ಎಂದು ನಾನು ಹೇಳಲಾರೆ. ಸಂವಿಧಾನವನ್ನು ಪಾಲಿಸುವುದು ಮತ್ತು 21ನೇ ವಿಧಿಯ ಅಡಿಯಲ್ಲಿ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಅನುಭವಿಸುವಂತೆ ನೋಡಿಕೊಳ್ಳುವುದು ನನ್ನ ಮೂಲಭೂತ ಕರ್ತವ್ಯ. ನ್ಯಾಯಾಲಯಗಳು ಪರಿಸರ ವಿಷಯಗಳನ್ನು ನಿರ್ವಹಿಸುವಾಗ, ಅವು ಜನಪ್ರಿಯ ಅಥವಾ ಧಾರ್ಮಿಕ ಭಾವನೆಗಳಿಂದ ಪ್ರಭಾವಿತವಾಗಬಾರದು” ಎಂದು ಅಭಯ್ ಎಸ್‌. ಓಕಾ ಹೇಳಿದ್ದಾರೆ.

ಪರಿಸರ (ರಕ್ಷಣೆ) ಕಾಯ್ದೆ, ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಮತ್ತು ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆಗಳಿಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿಗಳ ಬಗ್ಗೆ ನ್ಯಾಯಮೂರ್ತಿ ಓಕಾ ಕಳವಳ ವ್ಯಕ್ತಪಡಿಸಿದ್ದು, ಇವು ಉಲ್ಲಂಘನೆಗಳಿಗೆ ಕ್ರಿಮಿನಲ್ ಹೊಣೆಗಾರಿಕೆಯನ್ನು ತೆಗೆದುಹಾಕಿವೆ ಎಂದಿದ್ದಾರೆ.

“ಮೊದಲು ಪರಿಸರ ಕಾಯ್ದೆಗಳಲ್ಲಿ (ಇಪಿಎ, ಗಾಳಿ ಮತ್ತು ನೀರು ಕಾಯ್ದೆಗಳು) ಮಾಲಿನ್ಯಕಾರಕ ಕೃತ್ಯಗಳಿಗೆ ಜೈಲು ಶಿಕ್ಷೆ ಅಥವಾ ಅಪರಾಧ ಕೇಸ್ ಹಾಕುವ ನಿಯಮಗಳಿದ್ದವು. ಆದರೆ ಈಗ ಶಾಸಕಾಂಗವು ಆ ನಿಯಮಗಳನ್ನು ತೆಗೆದುಹಾಕಿ, ಕೇವಲ ಹಣದ ದಂಡ ಮಾತ್ರ ವಿಧಿಸುವಂತೆ ಬದಲಾಯಿಸಿದೆ. ಉದಾಹರಣೆಗೆ, ಕುಡಿಯುವ ನೀರನ್ನು ಕಲುಷಿತಗೊಳಿಸಿದರೂ ಆ ವ್ಯಕ್ತಿಗೆ ಜೈಲು ಶಿಕ್ಷೆಯಾಗದು, ಕೇವಲ ದಂಡ ಮಾತ್ರ. ಇದು ಪರಿಸರ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ ಎಂಬುದು ಓಕಾ ಕಳವಳ ವ್ಯಕ್ತಪಡಿಸಿದ್ದಾರೆ.

ಪರಿಸರ ಸಂರಕ್ಷಣೆ ಯಾವಾಗಲೂ ಭಾರತೀಯ ಸಂಸ್ಕೃತಿಯ ಭಾಗವಾಗಿದೆ ಎಂದು ನಿವೃತ್ತ ನ್ಯಾಯಾಧೀಶರು ಹೇಳಿದ್ದಾರೆ.

“ಶತಮಾನಗಳಿಂದ ನಮ್ಮ ಧಾರ್ಮಿಕ ಮತ್ತು ತತ್ವಜ್ಞಾನಿಗಳು ನಮ್ಮ ಪರಿಸರವನ್ನು ಸಂರಕ್ಷಿಸುವ ಮಹತ್ವವನ್ನು ನಮಗೆ ಕಲಿಸಿದ್ದಾರೆ. ನಾವು ಈ ಅಂತಾರಾಷ್ಟ್ರೀಯ ಸಮಾವೇಶಗಳಿಗೆ ಹೋಗಬೇಕಾಗಿಲ್ಲ; ಅದು ನಮ್ಮ ಸಂಸ್ಕೃತಿಯ ಒಂದು ಭಾಗವಾಗಿದೆ. ಬಹುಶಃ ಕಾಲಾನಂತರದಲ್ಲಿ, ನಮ್ಮ ಸಂಸ್ಕೃತಿಯಲ್ಲಿ ಯಾವುದು ಉತ್ತಮ ಎಂಬುದನ್ನು ನಾವು ಮರೆತಿರಬಹುದು” ಎಂದಿದ್ದಾರೆ.

“ಹಸಿರು ಬೆಂಚುಗಳ” ಪರಿಣಾಮಕಾರಿತ್ವವನ್ನು ಅವುಗಳ ಶೀರ್ಷಿಕೆಯಿಂದಲ್ಲ, ಬದಲಾಗಿ ಅವುಗಳ ಕೆಲಸದ ಮೂಲಕ ನಿರ್ಣಯಿಸಬೇಕು ಎಂದು ಓಕಾ ಹೇಳಿದ್ದಾರೆ.

“ಒಂದು ಪೀಠವು ಹಸಿರು ಬಣ್ಣದ್ದಾಗಿದೆಯೋ ಇಲ್ಲವೋ ಎಂಬುದು ಅದು ಹೊರಡಿಸಿದ ಆದೇಶಗಳ ಸ್ವರೂಪವನ್ನು ಅವಲಂಬಿಸಿರುತ್ತದೆ ಹೊರತು, ಅದರ ಹೆಸರಿನ ಆಧಾರದ ಮೇಲೆ ಅಲ್ಲ” ಎಂದು ಅವರು ಟೀಕಿಸಿದ್ದಾರೆ.

ನ್ಯಾಯಪೀಠದಲ್ಲಿ ತಮ್ಮ ಅವಧಿಯನ್ನು ನೆನಪಿಸಿಕೊಂಡ ನ್ಯಾಯಮೂರ್ತಿ ಓಕಾ, “ದುಃಖದ ಸಂಗತಿಯೆಂದರೆ ಪರಿಸರ ಸಮಸ್ಯೆಗಳಿಗೆ ನ್ಯಾಯಾಲಯದ ಮೆಟ್ಟಿಲೇರಲು ಧೈರ್ಯ ತೋರುವ ನಾಗರಿಕರು ಬಹಳ ಕಡಿಮೆ ಇದ್ದಾರೆ. ದುರದೃಷ್ಟವಶಾತ್, ಇಂತಹ ಪರಿಸರ ಪರ ಕೆಲಸ ಮಾಡುವರನ್ನು ರಾಜಕೀಯ ವರ್ಗ ಮತ್ತು ಧಾರ್ಮಿಕ ಗುಂಪುಗಳು ಅಪಹಾಸ್ಯ ಮಾಡುತ್ತವೆ. ಪರಿಸರ ವಿಷಯಗಳಲ್ಲಿ ಬಲವಾದ ಆದೇಶಗಳನ್ನು ನೀಡುವ ನ್ಯಾಯಾಧೀಶರನ್ನು ಕೂಡ ಗುರಿಯಾಗಿಸಲಾಗುತ್ತಿದೆ. ಇದು ಅತ್ಯಂತ ದುರದೃಷ್ಟಕರ ಪರಿಸ್ಥಿತಿ” ಎಂದಿದ್ದಾರೆ.

ನಿಜವಾದ ಅಭಿವೃದ್ಧಿಯು ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕೇ ಹೊರತು, ಪರಿಸರವನ್ನು ಕೆಡಿಸಬಾರದು ಎಂದು ನ್ಯಾಯಮೂರ್ತಿ ಓಕಾ ತಿಳಿಸಿದ್ದಾರೆ.

“ಪರಿಸರ ಕಾಳಜಿಯನ್ನು ಅಭಿವೃದ್ಧಿಯ ಅಗತ್ಯದೊಂದಿಗೆ ಸಮತೋಲನಗೊಳಿಸಬೇಕು ಎಂಬ ಅಭಿಪ್ರಾಯ ಚಾಲ್ತಿಯಲ್ಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ನಿಜವಾದ ಅಭಿವೃದ್ಧಿ ಎಂದರೆ ಏನು ಎಂಬುದನ್ನು ನಾವು ನಿರ್ಲಕ್ಷಿಸಿರುವುದರಿಂದ ಬಹುಶಃ ಇದೆಲ್ಲವೂ ಸಂಭವಿಸಿದೆ” ಎಂದಿದ್ದಾರೆ.

“ನಮ್ಮ ನಗರಗಳಲ್ಲಿ ಬಡವರಿಗೆ ಕೈಗೆಟುಕುವ ವಸತಿ ಸೌಕರ್ಯ, ಸಾಮಾನ್ಯ ಜನರಿಗೆ ಕೈಗೆಟುಕುವ ಸಾರಿಗೆ, ಶಿಕ್ಷಣ ಮತ್ತು ಆರೋಗ್ಯವನ್ನು ಸೃಷ್ಟಿಸುವುದು ನಿಜವಾದ ಅಭಿವೃದ್ಧಿ ಎಂದು ನಾನು ಭಾವಿಸುತ್ತೇನೆ. ಇಂದು ಯಾವುದೇ ನಗರದಲ್ಲಿ, ಸಾಮಾನ್ಯ ವ್ಯಕ್ತಿಯು ವಸತಿ ಸೌಕರ್ಯವನ್ನು ಪಡೆಯಲು ಸಾಹಸ ಮಾಡಬಹುದೇ? ಅದು ಅಸಾಧ್ಯ,” ಎಂದು ಹೇಳಿದ್ದಾರೆ.

ನ್ಯಾಯಾಂಗ ಆದೇಶಗಳು ವಿಕಸಿತ ಭಾರತ ಅಭಿಯಾನಕ್ಕೆ ಅಡ್ಡಿಯಾಗುತ್ತಿವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಇತ್ತೀಚೆಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಓಕಾ, “ಸರ್ಕಾರದಲ್ಲಿ ಉತ್ತಮ ಹುದ್ದೆಯನ್ನು ಹೊಂದಿರುವ ಒಬ್ಬ ಪ್ರಖ್ಯಾತ ವ್ಯಕ್ತಿ ಇತ್ತೀಚೆಗೆ ಟೀಕೆ ಮಾಡಿದ್ದಾರೆ. ನ್ಯಾಯಾಲಯದ ಆದೇಶಗಳು ವಿಕಸಿತ ಭಾರತಕ್ಕೆ ಅಡ್ಡಿಯಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನಿಗೂ ರಚನಾತ್ಮಕ ಟೀಕೆ ಮಾಡುವ ಹಕ್ಕಿದೆ ಎಂದು ನಾನು ಹೇಳಿದ್ದೇನೆ. ಆದರೆ, ಈ ವಿದ್ವಾಂಸರು ವಿಕಸಿತ ಭಾರತದ ಪ್ರಯತ್ನಕ್ಕೆ ಅಡ್ಡಿಯಾದ ನ್ಯಾಯಾಂಗ ಆದೇಶಗಳ ಉದಾಹರಣೆಗಳನ್ನು ನೀಡಬೇಕಾಗಿತ್ತು. ಅವರು ವಿವರಗಳನ್ನು ಕೊಡಬೇಕಿತ್ತು. ಆ ಆದೇಶಗಳು ಯಾವುವು? ಎಂದು ಅವರು ಹೇಳಿದ್ದರೆ, ಅದು ರಚನಾತ್ಮಕ ಟೀಕೆಯಾಗುತ್ತಿತ್ತು. ಅವರು ನಿದರ್ಶನಗಳನ್ನು ನೀಡಿದ್ದರೆ, ನಾವು ಆ ಆದೇಶಗಳನ್ನು ಅಧ್ಯಯನ ಮಾಡುತ್ತಿದ್ದೆವು” ಎಂದಿದ್ದಾರೆ.

Courtesy: barandbench.com

ಒಳಮೀಸಲಾತಿಯ ಒಳಸುಳಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...