Homeಮುಖಪುಟಪಟಾಕಿ ಸಿಡಿಸುವುದು ಧಾರ್ಮಿಕ ಹಕ್ಕಿನಡಿ ರಕ್ಷಿಸಲ್ಪಟ್ಟಿಲ್ಲ : ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್‌. ಓಕಾ

ಪಟಾಕಿ ಸಿಡಿಸುವುದು ಧಾರ್ಮಿಕ ಹಕ್ಕಿನಡಿ ರಕ್ಷಿಸಲ್ಪಟ್ಟಿಲ್ಲ : ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್‌. ಓಕಾ

- Advertisement -
- Advertisement -

ಮಾಲಿನ್ಯ ಅಥವಾ ಪರಿಸರ ಹಾನಿ ಉಂಟುಮಾಡುವ ಧಾರ್ಮಿಕ ಆಚರಣೆಗಳು ಸಂವಿಧಾನದ 25ನೇ ವಿಧಿಯಡಿ (ಧಾರ್ಮಿಕ ಸ್ವಾತಂತ್ರ್ಯದ ಹಕ್ಕು) ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಭಯ್ ಎಸ್. ಓಕಾ ಹೇಳಿದ್ದಾರೆ. ನಾಗರಿಕರು, ಸರ್ಕಾರಗಳು ಮತ್ತು ನ್ಯಾಯಾಲಯಗಳು ಹಬ್ಬಗಳು ಮತ್ತು ನಂಬಿಕೆ ಆಧಾರಿತ ಪದ್ಧತಿಗಳು ಪರಿಸರ ಮೇಲೆ ಬೀರುವ ಪರಿಣಾಮದ ಕುರಿತು ಪುನ:ವಿಮರ್ಶಿಸುವಂತೆ ಒತ್ತಾಯಿಸಿದ್ದಾರೆ.

“ಪಟಾಕಿ ಸಿಡಿಸುವುದು ಅಥವಾ ನದಿಗಳನ್ನು ಮಾಲಿನ್ಯ ಮಾಡುವ ಈ ರೀತಿಯ ಚಟುವಟಿಕೆಗಳು ಸಂವಿಧಾನದ 25ನೇ ವಿಧಿಯಡಿ ರಕ್ಷಣೆ ರಕ್ಷಿಸಲ್ಪಟ್ಟಿವೆಯೇ? ಎಂಬುವುದು ಪ್ರಶ್ನೆ. ನನ್ನ ಸೀಮಿತ ಜ್ಞಾನದ ಪ್ರಕಾರ, ಉತ್ತರವು ದೃಢವಾಗಿ ನಕಾರಾತ್ಮಕವಾಗಿರಬೇಕು” ಎಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಆಯೋಜಿಸಿದ್ದ ‘ಕ್ಲೀನ್ ಏರ್, ಕ್ಲೈಮೆಟ್ ಜಸ್ಟಿಸ್ ಅಂಡ್ ವಿ – ಟುಗೆದರ್ ಫಾರ್ ಎ ಸಸ್ಟೇನೇಬಲ್ ಫ್ಯೂಚರ್’ ಎಂಬ ಉಪನ್ಯಾಸದಲ್ಲಿ ಓಕಾ ಹೇಳಿದ್ದಾರೆ.

ಧಾರ್ಮಿಕ ಸ್ವಾತಂತ್ರ್ಯವಾಗಲಿ ಅಥವಾ ಜನಪ್ರಿಯ ಭಾವನೆಯಾಗಲಿ ಸಾರ್ವಜನಿಕ ಆರೋಗ್ಯ ಅಥವಾ ಪರಿಸರ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಮಗಳನ್ನು ಸಮರ್ಥಿಸಲು ಸಾಧ್ಯವಿಲ್ಲ ಎಂದಿದ್ದಾರೆ.

“ಧಾರ್ಮಿಕ ಹಬ್ಬದಂದು ಮಾಲಿನ್ಯ ಸೃಷ್ಟಿಸುವ ಹಕ್ಕು ನನಗಿದೆ ಎಂದು ನಾನು ಹೇಳಲಾರೆ. ಸಂವಿಧಾನವನ್ನು ಪಾಲಿಸುವುದು ಮತ್ತು 21ನೇ ವಿಧಿಯ ಅಡಿಯಲ್ಲಿ ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಅನುಭವಿಸುವಂತೆ ನೋಡಿಕೊಳ್ಳುವುದು ನನ್ನ ಮೂಲಭೂತ ಕರ್ತವ್ಯ. ನ್ಯಾಯಾಲಯಗಳು ಪರಿಸರ ವಿಷಯಗಳನ್ನು ನಿರ್ವಹಿಸುವಾಗ, ಅವು ಜನಪ್ರಿಯ ಅಥವಾ ಧಾರ್ಮಿಕ ಭಾವನೆಗಳಿಂದ ಪ್ರಭಾವಿತವಾಗಬಾರದು” ಎಂದು ಅಭಯ್ ಎಸ್‌. ಓಕಾ ಹೇಳಿದ್ದಾರೆ.

ಪರಿಸರ (ರಕ್ಷಣೆ) ಕಾಯ್ದೆ, ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಮತ್ತು ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆಗಳಿಗೆ ಇತ್ತೀಚೆಗೆ ಮಾಡಲಾದ ತಿದ್ದುಪಡಿಗಳ ಬಗ್ಗೆ ನ್ಯಾಯಮೂರ್ತಿ ಓಕಾ ಕಳವಳ ವ್ಯಕ್ತಪಡಿಸಿದ್ದು, ಇವು ಉಲ್ಲಂಘನೆಗಳಿಗೆ ಕ್ರಿಮಿನಲ್ ಹೊಣೆಗಾರಿಕೆಯನ್ನು ತೆಗೆದುಹಾಕಿವೆ ಎಂದಿದ್ದಾರೆ.

“ಮೊದಲು ಪರಿಸರ ಕಾಯ್ದೆಗಳಲ್ಲಿ (ಇಪಿಎ, ಗಾಳಿ ಮತ್ತು ನೀರು ಕಾಯ್ದೆಗಳು) ಮಾಲಿನ್ಯಕಾರಕ ಕೃತ್ಯಗಳಿಗೆ ಜೈಲು ಶಿಕ್ಷೆ ಅಥವಾ ಅಪರಾಧ ಕೇಸ್ ಹಾಕುವ ನಿಯಮಗಳಿದ್ದವು. ಆದರೆ ಈಗ ಶಾಸಕಾಂಗವು ಆ ನಿಯಮಗಳನ್ನು ತೆಗೆದುಹಾಕಿ, ಕೇವಲ ಹಣದ ದಂಡ ಮಾತ್ರ ವಿಧಿಸುವಂತೆ ಬದಲಾಯಿಸಿದೆ. ಉದಾಹರಣೆಗೆ, ಕುಡಿಯುವ ನೀರನ್ನು ಕಲುಷಿತಗೊಳಿಸಿದರೂ ಆ ವ್ಯಕ್ತಿಗೆ ಜೈಲು ಶಿಕ್ಷೆಯಾಗದು, ಕೇವಲ ದಂಡ ಮಾತ್ರ. ಇದು ಪರಿಸರ ರಕ್ಷಣೆಯನ್ನು ದುರ್ಬಲಗೊಳಿಸುತ್ತದೆ ಎಂಬುದು ಓಕಾ ಕಳವಳ ವ್ಯಕ್ತಪಡಿಸಿದ್ದಾರೆ.

ಪರಿಸರ ಸಂರಕ್ಷಣೆ ಯಾವಾಗಲೂ ಭಾರತೀಯ ಸಂಸ್ಕೃತಿಯ ಭಾಗವಾಗಿದೆ ಎಂದು ನಿವೃತ್ತ ನ್ಯಾಯಾಧೀಶರು ಹೇಳಿದ್ದಾರೆ.

“ಶತಮಾನಗಳಿಂದ ನಮ್ಮ ಧಾರ್ಮಿಕ ಮತ್ತು ತತ್ವಜ್ಞಾನಿಗಳು ನಮ್ಮ ಪರಿಸರವನ್ನು ಸಂರಕ್ಷಿಸುವ ಮಹತ್ವವನ್ನು ನಮಗೆ ಕಲಿಸಿದ್ದಾರೆ. ನಾವು ಈ ಅಂತಾರಾಷ್ಟ್ರೀಯ ಸಮಾವೇಶಗಳಿಗೆ ಹೋಗಬೇಕಾಗಿಲ್ಲ; ಅದು ನಮ್ಮ ಸಂಸ್ಕೃತಿಯ ಒಂದು ಭಾಗವಾಗಿದೆ. ಬಹುಶಃ ಕಾಲಾನಂತರದಲ್ಲಿ, ನಮ್ಮ ಸಂಸ್ಕೃತಿಯಲ್ಲಿ ಯಾವುದು ಉತ್ತಮ ಎಂಬುದನ್ನು ನಾವು ಮರೆತಿರಬಹುದು” ಎಂದಿದ್ದಾರೆ.

“ಹಸಿರು ಬೆಂಚುಗಳ” ಪರಿಣಾಮಕಾರಿತ್ವವನ್ನು ಅವುಗಳ ಶೀರ್ಷಿಕೆಯಿಂದಲ್ಲ, ಬದಲಾಗಿ ಅವುಗಳ ಕೆಲಸದ ಮೂಲಕ ನಿರ್ಣಯಿಸಬೇಕು ಎಂದು ಓಕಾ ಹೇಳಿದ್ದಾರೆ.

“ಒಂದು ಪೀಠವು ಹಸಿರು ಬಣ್ಣದ್ದಾಗಿದೆಯೋ ಇಲ್ಲವೋ ಎಂಬುದು ಅದು ಹೊರಡಿಸಿದ ಆದೇಶಗಳ ಸ್ವರೂಪವನ್ನು ಅವಲಂಬಿಸಿರುತ್ತದೆ ಹೊರತು, ಅದರ ಹೆಸರಿನ ಆಧಾರದ ಮೇಲೆ ಅಲ್ಲ” ಎಂದು ಅವರು ಟೀಕಿಸಿದ್ದಾರೆ.

ನ್ಯಾಯಪೀಠದಲ್ಲಿ ತಮ್ಮ ಅವಧಿಯನ್ನು ನೆನಪಿಸಿಕೊಂಡ ನ್ಯಾಯಮೂರ್ತಿ ಓಕಾ, “ದುಃಖದ ಸಂಗತಿಯೆಂದರೆ ಪರಿಸರ ಸಮಸ್ಯೆಗಳಿಗೆ ನ್ಯಾಯಾಲಯದ ಮೆಟ್ಟಿಲೇರಲು ಧೈರ್ಯ ತೋರುವ ನಾಗರಿಕರು ಬಹಳ ಕಡಿಮೆ ಇದ್ದಾರೆ. ದುರದೃಷ್ಟವಶಾತ್, ಇಂತಹ ಪರಿಸರ ಪರ ಕೆಲಸ ಮಾಡುವರನ್ನು ರಾಜಕೀಯ ವರ್ಗ ಮತ್ತು ಧಾರ್ಮಿಕ ಗುಂಪುಗಳು ಅಪಹಾಸ್ಯ ಮಾಡುತ್ತವೆ. ಪರಿಸರ ವಿಷಯಗಳಲ್ಲಿ ಬಲವಾದ ಆದೇಶಗಳನ್ನು ನೀಡುವ ನ್ಯಾಯಾಧೀಶರನ್ನು ಕೂಡ ಗುರಿಯಾಗಿಸಲಾಗುತ್ತಿದೆ. ಇದು ಅತ್ಯಂತ ದುರದೃಷ್ಟಕರ ಪರಿಸ್ಥಿತಿ” ಎಂದಿದ್ದಾರೆ.

ನಿಜವಾದ ಅಭಿವೃದ್ಧಿಯು ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಬೇಕೇ ಹೊರತು, ಪರಿಸರವನ್ನು ಕೆಡಿಸಬಾರದು ಎಂದು ನ್ಯಾಯಮೂರ್ತಿ ಓಕಾ ತಿಳಿಸಿದ್ದಾರೆ.

“ಪರಿಸರ ಕಾಳಜಿಯನ್ನು ಅಭಿವೃದ್ಧಿಯ ಅಗತ್ಯದೊಂದಿಗೆ ಸಮತೋಲನಗೊಳಿಸಬೇಕು ಎಂಬ ಅಭಿಪ್ರಾಯ ಚಾಲ್ತಿಯಲ್ಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ನಿಜವಾದ ಅಭಿವೃದ್ಧಿ ಎಂದರೆ ಏನು ಎಂಬುದನ್ನು ನಾವು ನಿರ್ಲಕ್ಷಿಸಿರುವುದರಿಂದ ಬಹುಶಃ ಇದೆಲ್ಲವೂ ಸಂಭವಿಸಿದೆ” ಎಂದಿದ್ದಾರೆ.

“ನಮ್ಮ ನಗರಗಳಲ್ಲಿ ಬಡವರಿಗೆ ಕೈಗೆಟುಕುವ ವಸತಿ ಸೌಕರ್ಯ, ಸಾಮಾನ್ಯ ಜನರಿಗೆ ಕೈಗೆಟುಕುವ ಸಾರಿಗೆ, ಶಿಕ್ಷಣ ಮತ್ತು ಆರೋಗ್ಯವನ್ನು ಸೃಷ್ಟಿಸುವುದು ನಿಜವಾದ ಅಭಿವೃದ್ಧಿ ಎಂದು ನಾನು ಭಾವಿಸುತ್ತೇನೆ. ಇಂದು ಯಾವುದೇ ನಗರದಲ್ಲಿ, ಸಾಮಾನ್ಯ ವ್ಯಕ್ತಿಯು ವಸತಿ ಸೌಕರ್ಯವನ್ನು ಪಡೆಯಲು ಸಾಹಸ ಮಾಡಬಹುದೇ? ಅದು ಅಸಾಧ್ಯ,” ಎಂದು ಹೇಳಿದ್ದಾರೆ.

ನ್ಯಾಯಾಂಗ ಆದೇಶಗಳು ವಿಕಸಿತ ಭಾರತ ಅಭಿಯಾನಕ್ಕೆ ಅಡ್ಡಿಯಾಗುತ್ತಿವೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಇತ್ತೀಚೆಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಓಕಾ, “ಸರ್ಕಾರದಲ್ಲಿ ಉತ್ತಮ ಹುದ್ದೆಯನ್ನು ಹೊಂದಿರುವ ಒಬ್ಬ ಪ್ರಖ್ಯಾತ ವ್ಯಕ್ತಿ ಇತ್ತೀಚೆಗೆ ಟೀಕೆ ಮಾಡಿದ್ದಾರೆ. ನ್ಯಾಯಾಲಯದ ಆದೇಶಗಳು ವಿಕಸಿತ ಭಾರತಕ್ಕೆ ಅಡ್ಡಿಯಾಗುತ್ತಿವೆ ಎಂದು ಅವರು ಹೇಳಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನಿಗೂ ರಚನಾತ್ಮಕ ಟೀಕೆ ಮಾಡುವ ಹಕ್ಕಿದೆ ಎಂದು ನಾನು ಹೇಳಿದ್ದೇನೆ. ಆದರೆ, ಈ ವಿದ್ವಾಂಸರು ವಿಕಸಿತ ಭಾರತದ ಪ್ರಯತ್ನಕ್ಕೆ ಅಡ್ಡಿಯಾದ ನ್ಯಾಯಾಂಗ ಆದೇಶಗಳ ಉದಾಹರಣೆಗಳನ್ನು ನೀಡಬೇಕಾಗಿತ್ತು. ಅವರು ವಿವರಗಳನ್ನು ಕೊಡಬೇಕಿತ್ತು. ಆ ಆದೇಶಗಳು ಯಾವುವು? ಎಂದು ಅವರು ಹೇಳಿದ್ದರೆ, ಅದು ರಚನಾತ್ಮಕ ಟೀಕೆಯಾಗುತ್ತಿತ್ತು. ಅವರು ನಿದರ್ಶನಗಳನ್ನು ನೀಡಿದ್ದರೆ, ನಾವು ಆ ಆದೇಶಗಳನ್ನು ಅಧ್ಯಯನ ಮಾಡುತ್ತಿದ್ದೆವು” ಎಂದಿದ್ದಾರೆ.

Courtesy: barandbench.com

ಒಳಮೀಸಲಾತಿಯ ಒಳಸುಳಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...