Homeಅಂತರಾಷ್ಟ್ರೀಯಭೂಗತ ಜಗತ್ತಿನೊಂದಿಗೆ ವ್ಯವಹಾರ ನಂಟು: ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಇಡಿ ಉರುಳು

ಭೂಗತ ಜಗತ್ತಿನೊಂದಿಗೆ ವ್ಯವಹಾರ ನಂಟು: ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಇಡಿ ಉರುಳು

- Advertisement -
- Advertisement -

ಭೂಗತ ಜಗತ್ತಿನೊಂದಿಗೆ ಆರ್ಥಿಕ ವ್ಯವಹಾರ ನಡೆಸಿರುವ ಆರೋಪದ ಹಿನ್ನೆಲೆ ಜಾರಿ ನಿರ್ದೇಶನಾಲಯ (ಇಡಿ) ಉದ್ಯಮಿ ರಾಜ್ ಕುಂದ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ದಕ್ಷಿಣ ಮುಂಬೈನಲ್ಲಿರುವ ಬಲ್ಲಾರ್ಡ್ ಪಿಯರ್ ಕಚೇರಿ ತಲುಪಿದ ಶಿಲ್ಪಾಶೆಟ್ಟಿಯವರ ಪತಿಯಾಗಿರುವ ರಾಜ್ ಕುಂದ್ರಾರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಅವರ ಆರ್ಥಿಕ ಅವ್ಯವಹಾರ ಮತ್ತು ಉದ್ಯಮಿ ರಂಜೀತ್ ಬಿಂದ್ರಾ ಅವರೊಂದಿಗಿನ ವ್ಯವಹಾರ ಮತ್ತು ಇತರೆ ವಿಷಯವಾಗಿ ಪ್ರಶ್ನೆಗಳ ಸುರಿಮಳೆಗೈದರು ಎಂದು ವರದಿಯಾಗಿದೆ.

ಅಕ್ರಮ ಹಣ ವರ್ಗಾವಣೆ ಆರೋಪ ಮತ್ತು ಪಿಎಂಎಲ್ಎ ಅಡಿ ನವೆಂಬರ್ 4ರಂದು ಮುಂಬೈನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ರಾಜ್ ಕುಂದ್ರಾಗೆ ಈಗಾಗಲೇ ಇಡಿ ಸಮನ್ಸ್ ಜಾರಿ ಮಾಡಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಇಕ್ಬಾಲ್ ಮಿರ್ಚಿ ಜತೆ ಆರ್ಥಿಕ ವ್ಯವಹಾರ, ಅಕ್ರಮ ಹಣ ವರ್ಗಾವಣೆ ನಡೆಸಿದ ಆರೋಪ ಉದ್ಯಮಿ ರಾಜ್ ಕುಂದ್ರಾ ಮೇಲಿದೆ.

ತನಿಖಾ ಸಂಸ್ಥೆಯು ರಾಜ್ ಕುಂದ್ರಾ, ಇಕ್ಬಾಲ್ ಮಿರ್ಚಿ ಆಪ್ತ ಸಹಾಯಕ ರಂಜೀತ್ ಬಿಂದ್ರಾ ಮತ್ತು ಬಾಸ್ಟಿಯನ್ ಹಾಸ್ಪಿಟಾಲಿಟಿ ಎಂಬ ಸಂಸ್ಥೆಯೊಂದಿಗೆ ವ್ಯವಹಾರ ನಡೆಸಿದ್ದಾರೆ ಎಂದು ಹೇಳಿದೆ. ಆದರೆ ರಾಜ್ ಕುಂದ್ರಾ ಈ ಆರೋಪವನ್ನು ತಳ್ಳಿ ಹಾಕಿದ್ದು, ಇದು ನಿಜವಲ್ಲ ಎಂದಿದ್ದಾರೆ.

ದಾವೂದ್ ಇಬ್ರಾಹಿಂ ಗ್ಯಾಂಗ್ ನ ಇಕ್ಬಾಲ್ ಜತೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಉದ್ಯಮಿ ರಾಜ್ ಕುಂದ್ರಾ ಅವರ ಬ್ಯುಸಿನೆಸ್ ಪಾರ್ಟ್ನರ್ ಆಗಿದ್ದ. ಅಲ್ಲದೇ ಐಪಿಎಲ್ ಮ್ಯಾಚ್ ಫಿಕ್ಸಿಂಗ್, ಬಿಟ್ ಕಾಯಿನ್ ವ್ಯವಹಾರಗಳಲ್ಲಿಯೂ ರಾಜ್ ಕುಂದ್ರಾ ಹೆಸರಿದೆ. ಇನ್ನು ಇಕ್ಬಾಲ್ ಮಿರ್ಚಿ, 2013ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಇಡಿ ಅಧಿಕಾರಿಗಳು ಮಿರ್ಚಿ ವಿರುದ್ಧ ಅಪರಾಧ, ಅಕ್ರಮ ಹಣ ವರ್ಗಾವಣೆ, ರಿಯಲ್ ಎಸ್ಟೇಟ್ ನಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದೂ ಇಡಿ ಆರೋಪಿಸಿದೆ. ಇನ್ನು ಬಿಂದ್ರಾ ಅವರನ್ನು ಇಡಿ ಬಂಧಿಸಿದೆ.

ಇತ್ತೀಚೆಗಷ್ಟೇ ಇಕ್ಬಾಲ್ ಆಪ್ತ ಹುಮಾಯೂನ್ ಮರ್ಚೆಂಟ್ ಅವರನ್ನೂ ಸಹ ಇದೇ ವಿಚಾರದಲ್ಲಿ ಇಡಿ ಬಂಧಿಸಿದೆ. ಬೆಂಗಳೂರು ಮೂಲದ ರಿಂಕು ದೇಶಪಾಂಡೆ ಎಂಬ ಮಹಿಳೆಯನ್ನು ಸಹ ಹಣ ವರ್ಗಾವಣೆ ಪ್ರಕರಣದಡಿ ಬಂಧಿಸಿ ವಿಚಾರಣೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...