Homeಅಂತರಾಷ್ಟ್ರೀಯಭೂಗತ ಜಗತ್ತಿನೊಂದಿಗೆ ವ್ಯವಹಾರ ನಂಟು: ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಇಡಿ ಉರುಳು

ಭೂಗತ ಜಗತ್ತಿನೊಂದಿಗೆ ವ್ಯವಹಾರ ನಂಟು: ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಇಡಿ ಉರುಳು

- Advertisement -
- Advertisement -

ಭೂಗತ ಜಗತ್ತಿನೊಂದಿಗೆ ಆರ್ಥಿಕ ವ್ಯವಹಾರ ನಡೆಸಿರುವ ಆರೋಪದ ಹಿನ್ನೆಲೆ ಜಾರಿ ನಿರ್ದೇಶನಾಲಯ (ಇಡಿ) ಉದ್ಯಮಿ ರಾಜ್ ಕುಂದ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ದಕ್ಷಿಣ ಮುಂಬೈನಲ್ಲಿರುವ ಬಲ್ಲಾರ್ಡ್ ಪಿಯರ್ ಕಚೇರಿ ತಲುಪಿದ ಶಿಲ್ಪಾಶೆಟ್ಟಿಯವರ ಪತಿಯಾಗಿರುವ ರಾಜ್ ಕುಂದ್ರಾರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಅವರ ಆರ್ಥಿಕ ಅವ್ಯವಹಾರ ಮತ್ತು ಉದ್ಯಮಿ ರಂಜೀತ್ ಬಿಂದ್ರಾ ಅವರೊಂದಿಗಿನ ವ್ಯವಹಾರ ಮತ್ತು ಇತರೆ ವಿಷಯವಾಗಿ ಪ್ರಶ್ನೆಗಳ ಸುರಿಮಳೆಗೈದರು ಎಂದು ವರದಿಯಾಗಿದೆ.

ಅಕ್ರಮ ಹಣ ವರ್ಗಾವಣೆ ಆರೋಪ ಮತ್ತು ಪಿಎಂಎಲ್ಎ ಅಡಿ ನವೆಂಬರ್ 4ರಂದು ಮುಂಬೈನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ರಾಜ್ ಕುಂದ್ರಾಗೆ ಈಗಾಗಲೇ ಇಡಿ ಸಮನ್ಸ್ ಜಾರಿ ಮಾಡಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಇಕ್ಬಾಲ್ ಮಿರ್ಚಿ ಜತೆ ಆರ್ಥಿಕ ವ್ಯವಹಾರ, ಅಕ್ರಮ ಹಣ ವರ್ಗಾವಣೆ ನಡೆಸಿದ ಆರೋಪ ಉದ್ಯಮಿ ರಾಜ್ ಕುಂದ್ರಾ ಮೇಲಿದೆ.

ತನಿಖಾ ಸಂಸ್ಥೆಯು ರಾಜ್ ಕುಂದ್ರಾ, ಇಕ್ಬಾಲ್ ಮಿರ್ಚಿ ಆಪ್ತ ಸಹಾಯಕ ರಂಜೀತ್ ಬಿಂದ್ರಾ ಮತ್ತು ಬಾಸ್ಟಿಯನ್ ಹಾಸ್ಪಿಟಾಲಿಟಿ ಎಂಬ ಸಂಸ್ಥೆಯೊಂದಿಗೆ ವ್ಯವಹಾರ ನಡೆಸಿದ್ದಾರೆ ಎಂದು ಹೇಳಿದೆ. ಆದರೆ ರಾಜ್ ಕುಂದ್ರಾ ಈ ಆರೋಪವನ್ನು ತಳ್ಳಿ ಹಾಕಿದ್ದು, ಇದು ನಿಜವಲ್ಲ ಎಂದಿದ್ದಾರೆ.

ದಾವೂದ್ ಇಬ್ರಾಹಿಂ ಗ್ಯಾಂಗ್ ನ ಇಕ್ಬಾಲ್ ಜತೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಉದ್ಯಮಿ ರಾಜ್ ಕುಂದ್ರಾ ಅವರ ಬ್ಯುಸಿನೆಸ್ ಪಾರ್ಟ್ನರ್ ಆಗಿದ್ದ. ಅಲ್ಲದೇ ಐಪಿಎಲ್ ಮ್ಯಾಚ್ ಫಿಕ್ಸಿಂಗ್, ಬಿಟ್ ಕಾಯಿನ್ ವ್ಯವಹಾರಗಳಲ್ಲಿಯೂ ರಾಜ್ ಕುಂದ್ರಾ ಹೆಸರಿದೆ. ಇನ್ನು ಇಕ್ಬಾಲ್ ಮಿರ್ಚಿ, 2013ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಇಡಿ ಅಧಿಕಾರಿಗಳು ಮಿರ್ಚಿ ವಿರುದ್ಧ ಅಪರಾಧ, ಅಕ್ರಮ ಹಣ ವರ್ಗಾವಣೆ, ರಿಯಲ್ ಎಸ್ಟೇಟ್ ನಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದೂ ಇಡಿ ಆರೋಪಿಸಿದೆ. ಇನ್ನು ಬಿಂದ್ರಾ ಅವರನ್ನು ಇಡಿ ಬಂಧಿಸಿದೆ.

ಇತ್ತೀಚೆಗಷ್ಟೇ ಇಕ್ಬಾಲ್ ಆಪ್ತ ಹುಮಾಯೂನ್ ಮರ್ಚೆಂಟ್ ಅವರನ್ನೂ ಸಹ ಇದೇ ವಿಚಾರದಲ್ಲಿ ಇಡಿ ಬಂಧಿಸಿದೆ. ಬೆಂಗಳೂರು ಮೂಲದ ರಿಂಕು ದೇಶಪಾಂಡೆ ಎಂಬ ಮಹಿಳೆಯನ್ನು ಸಹ ಹಣ ವರ್ಗಾವಣೆ ಪ್ರಕರಣದಡಿ ಬಂಧಿಸಿ ವಿಚಾರಣೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...