Homeಅಂತರಾಷ್ಟ್ರೀಯಭೂಗತ ಜಗತ್ತಿನೊಂದಿಗೆ ವ್ಯವಹಾರ ನಂಟು: ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಇಡಿ ಉರುಳು

ಭೂಗತ ಜಗತ್ತಿನೊಂದಿಗೆ ವ್ಯವಹಾರ ನಂಟು: ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಇಡಿ ಉರುಳು

- Advertisement -
- Advertisement -

ಭೂಗತ ಜಗತ್ತಿನೊಂದಿಗೆ ಆರ್ಥಿಕ ವ್ಯವಹಾರ ನಡೆಸಿರುವ ಆರೋಪದ ಹಿನ್ನೆಲೆ ಜಾರಿ ನಿರ್ದೇಶನಾಲಯ (ಇಡಿ) ಉದ್ಯಮಿ ರಾಜ್ ಕುಂದ್ರಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ದಕ್ಷಿಣ ಮುಂಬೈನಲ್ಲಿರುವ ಬಲ್ಲಾರ್ಡ್ ಪಿಯರ್ ಕಚೇರಿ ತಲುಪಿದ ಶಿಲ್ಪಾಶೆಟ್ಟಿಯವರ ಪತಿಯಾಗಿರುವ ರಾಜ್ ಕುಂದ್ರಾರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಅವರ ಆರ್ಥಿಕ ಅವ್ಯವಹಾರ ಮತ್ತು ಉದ್ಯಮಿ ರಂಜೀತ್ ಬಿಂದ್ರಾ ಅವರೊಂದಿಗಿನ ವ್ಯವಹಾರ ಮತ್ತು ಇತರೆ ವಿಷಯವಾಗಿ ಪ್ರಶ್ನೆಗಳ ಸುರಿಮಳೆಗೈದರು ಎಂದು ವರದಿಯಾಗಿದೆ.

ಅಕ್ರಮ ಹಣ ವರ್ಗಾವಣೆ ಆರೋಪ ಮತ್ತು ಪಿಎಂಎಲ್ಎ ಅಡಿ ನವೆಂಬರ್ 4ರಂದು ಮುಂಬೈನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ರಾಜ್ ಕುಂದ್ರಾಗೆ ಈಗಾಗಲೇ ಇಡಿ ಸಮನ್ಸ್ ಜಾರಿ ಮಾಡಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಇಕ್ಬಾಲ್ ಮಿರ್ಚಿ ಜತೆ ಆರ್ಥಿಕ ವ್ಯವಹಾರ, ಅಕ್ರಮ ಹಣ ವರ್ಗಾವಣೆ ನಡೆಸಿದ ಆರೋಪ ಉದ್ಯಮಿ ರಾಜ್ ಕುಂದ್ರಾ ಮೇಲಿದೆ.

ತನಿಖಾ ಸಂಸ್ಥೆಯು ರಾಜ್ ಕುಂದ್ರಾ, ಇಕ್ಬಾಲ್ ಮಿರ್ಚಿ ಆಪ್ತ ಸಹಾಯಕ ರಂಜೀತ್ ಬಿಂದ್ರಾ ಮತ್ತು ಬಾಸ್ಟಿಯನ್ ಹಾಸ್ಪಿಟಾಲಿಟಿ ಎಂಬ ಸಂಸ್ಥೆಯೊಂದಿಗೆ ವ್ಯವಹಾರ ನಡೆಸಿದ್ದಾರೆ ಎಂದು ಹೇಳಿದೆ. ಆದರೆ ರಾಜ್ ಕುಂದ್ರಾ ಈ ಆರೋಪವನ್ನು ತಳ್ಳಿ ಹಾಕಿದ್ದು, ಇದು ನಿಜವಲ್ಲ ಎಂದಿದ್ದಾರೆ.

ದಾವೂದ್ ಇಬ್ರಾಹಿಂ ಗ್ಯಾಂಗ್ ನ ಇಕ್ಬಾಲ್ ಜತೆ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಉದ್ಯಮಿ ರಾಜ್ ಕುಂದ್ರಾ ಅವರ ಬ್ಯುಸಿನೆಸ್ ಪಾರ್ಟ್ನರ್ ಆಗಿದ್ದ. ಅಲ್ಲದೇ ಐಪಿಎಲ್ ಮ್ಯಾಚ್ ಫಿಕ್ಸಿಂಗ್, ಬಿಟ್ ಕಾಯಿನ್ ವ್ಯವಹಾರಗಳಲ್ಲಿಯೂ ರಾಜ್ ಕುಂದ್ರಾ ಹೆಸರಿದೆ. ಇನ್ನು ಇಕ್ಬಾಲ್ ಮಿರ್ಚಿ, 2013ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಇಡಿ ಅಧಿಕಾರಿಗಳು ಮಿರ್ಚಿ ವಿರುದ್ಧ ಅಪರಾಧ, ಅಕ್ರಮ ಹಣ ವರ್ಗಾವಣೆ, ರಿಯಲ್ ಎಸ್ಟೇಟ್ ನಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದೂ ಇಡಿ ಆರೋಪಿಸಿದೆ. ಇನ್ನು ಬಿಂದ್ರಾ ಅವರನ್ನು ಇಡಿ ಬಂಧಿಸಿದೆ.

ಇತ್ತೀಚೆಗಷ್ಟೇ ಇಕ್ಬಾಲ್ ಆಪ್ತ ಹುಮಾಯೂನ್ ಮರ್ಚೆಂಟ್ ಅವರನ್ನೂ ಸಹ ಇದೇ ವಿಚಾರದಲ್ಲಿ ಇಡಿ ಬಂಧಿಸಿದೆ. ಬೆಂಗಳೂರು ಮೂಲದ ರಿಂಕು ದೇಶಪಾಂಡೆ ಎಂಬ ಮಹಿಳೆಯನ್ನು ಸಹ ಹಣ ವರ್ಗಾವಣೆ ಪ್ರಕರಣದಡಿ ಬಂಧಿಸಿ ವಿಚಾರಣೆ ನಡೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...