Homeಕರ್ನಾಟಕರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

ವ್ಯಾಪಾರ ಪೈಪೋಟಿ, ಮುಂಬರುವ ಚುನಾವಣೆಗಳು ಮತ್ತು ರಾಜ್ಯದಲ್ಲಿ ಸ್ಥಿರ ಸರ್ಕಾರದ ದೃಷ್ಟಿಯಿಂದ ಬೆಂಗಳೂರಿಗೆ ಬರುತ್ತಿರುವ ಹೂಡಿಕೆದಾರರನ್ನು ಭಯಭೀತಗೊಳಿಸುವುದು ನಗರದ ಉಪಾಹಾರ ಗೃಹ ಸ್ಫೋಟಕ್ಕೆ ಸಂಬಂಧಿಸಿದ ಕೆಲವು ಕೋನಗಳನ್ನು ಭೇದಿಸಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

ಪೂರ್ವ ಬೆಂಗಳೂರಿನ ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ತಲೆಗೆ ಟೋಪಿ, ಮುಖವಾಡ ಮತ್ತು ಕನ್ನಡಕವನ್ನು ಧರಿಸಿರುವ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಆತ ಇನ್ನೂ ಪತ್ತೆಯಾಗಿಲ್ಲ.

ಗೃಹ ಸಚಿವರ ಪ್ರಕಾರ, ಎಂಟು ತಂಡಗಳು ಪ್ರಕರಣವನ್ನು ಭೇದಿಸಲು ಕೆಲಸ ಮಾಡುತ್ತಿವೆ ಮತ್ತು ಅವರ ಜೊತೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ, ರಾಷ್ಟ್ರೀಯ ಭದ್ರತಾ ಗುಂಪು (ಎನ್‌ಎಸ್‌ಜಿ) ಮತ್ತು ಗುಪ್ತಚರ ಬ್ಯೂರೋ (ಐಬಿ) ತಂಡಗಳಿಗೆ ಸಹಾಯ ಮಾಡುತ್ತಿವೆ ಎಂದರು.

ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರನ್ನು ಭಯಭೀತಗೊಳಿಸಬಹುದೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ಪರಮೇಶ್ವರ ಹೇಳಿದರು. ‘ಚುನಾವಣೆಗಳು ಸಮೀಪಿಸುತ್ತಿವೆ, ಯಾವುದೇ ಸಂಘಟನೆಯು ಅದರ ಹಿಂದೆ ಇದ್ದರೆ ಅಥವಾ ಬೆಂಗಳೂರನ್ನು ಅಸುರಕ್ಷಿತವಾಗಿ ಕಾಣುವಂತೆ ಜನರನ್ನು ಭಯಭೀತಗೊಳಿಸುವ ಇತರ ಉದ್ದೇಶಗಳು ಇದರ ಹಿಂದೆ ಇದೆಯೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ’ ಎಂದು ಹೇಳಿದರು.

‘ಸ್ಥಿರ ಸರ್ಕಾರದ ದೃಷ್ಟಿಯಿಂದ ಅನೇಕ ಹೂಡಿಕೆದಾರರು ಇಲ್ಲಿಗೆ ಬರುತ್ತಿದ್ದಾರೆ, ಹೂಡಿಕೆದಾರರು ಬೆಂಗಳೂರಿಗೆ ಬರುವುದನ್ನು ತಡೆಯಲು ಅಥವಾ ಇತರ ಕೆಲವು ಅಪರಿಚಿತ ಕಾರಣಗಳಿಂದ ಇದನ್ನು ಮಾಡಿರಬಹುದು’ ಎಂದು ಪರಮೇಶ್ವರ ಹೇಳಿದರು.

ವ್ಯಾಪಾರ ಪ್ರತಿಸ್ಪರ್ಧಿಗಳು ಅಸೂಯೆಯಿಂದ ಇದನ್ನು ಮಾಡಿರಬಹುದು ಎಂಬ ಬಗ್ಗೆಯೂ ಸಚಿವರು ಅನುಮಾನ ವ್ಯಕ್ತಪಡಿಸಿದರು. ಇದು ಒಂದು ಕಾರಣ ಇರಬಹುದು, ಈ ಕೋನದಲ್ಲಿಯೂ ಇದನ್ನು ಸಹ ಚರ್ಚಿಸಲಾಗುತ್ತಿದೆ ಎಂದರು.

ರಾಮೇಶ್ವರಂ ಕೆಫೆಯು 11 ಘಟಕಗಳನ್ನು ಹೊಂದಿದೆ ಮತ್ತು ಮಾಲೀಕರು ತಮ್ಮ 12 ನೇ ಘಟಕವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ. ಇದಕ್ಕಾಗಿ ಮುಂಗಡ ಠೇವಣಿ ಸಹ ಪಾವತಿಸಲಾಗಿದೆ ಎಂದು ಅವರು ಹೇಳಿದರು.

‘ನಾವು ಪ್ರಕರಣವನನ್ನು ಭೇದಿಸುತ್ತೇವೆ; ಇದನ್ನು ಬಿಡುವುದಿಲ್ಲ. ಈ ಪ್ರಕರಣ ಎಷ್ಟೇ ಕಷ್ಟಕರವಾಗಿದ್ದರೂ, ನಮ್ಮ ಇಲಾಖೆ ಅದನ್ನು ಭೇದಿಸುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪೊಲೀಸರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವ ಹೇಳಿಕೆಗಳ ಮೇಲೆ ಮಾತ್ರ ಜನ ಅವಲಂಬಿತರಾಗಬೇಕು; ಊಹಾಪೋಹಗಳ ಮೇಲೆ ಭರವಸೆ ಇಡಬಾರದು’ ಎಂದು ಸಚಿವರು ಮನವಿ ಮಾಡಿದರು.

ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ಪ್ರೆಶರ್ ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿದ ಪ್ರಶ್ನೆಗೆ, ಮಂಗಳೂರಿನಲ್ಲಿ ನಡೆದ ಘಟನೆಯಂತೆಯೇ ಸ್ಫೋಟಕಗಳು ಮತ್ತು ಇತರ ಸಲಕರಣೆಗಳ ಜೋಡಣೆ ರಾಮೇಶ್ವರಂ ಕೆಫೆ ಸ್ಫೋಟದಲ್ಲೂ ಇದೆ. ಆದರೆ, ಹೋಲಿಕೆ ಎಂದರೆ ಅದೇ ಗ್ಯಾಂಗ್ ಹಿಂದೆ ಇದೆ ಎಂದು ಅರ್ಥವಲ್ಲ ಎಂದರು.

‘ಬ್ಯಾಟರಿ ಮತ್ತು ಟೈಮರ್ ಅನ್ನು ಬಳಸಿದ ರೀತಿಯು ಹೋಲುತ್ತದೆ. ನಾವು ಅದನ್ನು (ತನಿಖೆ) ಮುಂದಕ್ಕೆ ಕೊಂಡೊಯ್ಯಬೇಕು. ಅದೇ ಸಂಸ್ಥೆ ಮಾಡಿದೆಯೋ ಅಥವಾ ಅದೇ ಜನರು ಮಾಡಿದೆಯೋ ನಮಗೆ ತಿಳಿದಿಲ್ಲ’ ಎಂದು ಸಚಿವರು ಹೇಳಿದರು.

ಬಳಸಲಾದ ಸ್ಫೋಟಕಗಳು ಕಡಿಮೆ ತೀವ್ರತೆಯನ್ನು ಹೊಂದಿರುವುದರಿಂದ ಮತ್ತು ಪಸ್ಪೋಟದ ಪ್ರಮಾಣವು ಕಡಿಮೆ ಇರಬಹುದು. ಸ್ಪೋಟ್ ಪ್ರಮಾಣ ಹೆಚ್ಚಿದ್ದರೆ ತೀವ್ರತೆ ಹೆಚ್ಚಾಗುತ್ತಿತ್ತು’ ಎಂದು ಅವರು ಹೇಳಿದರು.

‘ಬಾಂಬ್ ಲಂಬವಾಗಿ ಅಲ್ಲ, ಅಡ್ಡಲಾಗಿ ಸ್ಫೋಟಗೊಂಡಿದ್ದರೆ ಸಾವುನೋವುಗಳು ಸಂಭವಿಸಬಹುದು. ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡಿದ್ದೆ; ಅಲ್ಲಿ ಬೋಲ್ಟ್‌ಗಳು ಮತ್ತು ಮೊಳೆಗಳನ್ನು ನೋಡಿದೆ. ಅವೆಲ್ಲವೂ ಮೇಲಕ್ಕೆ ಹೋಗಿವೆ. ಅವೆಲ್ಲಾ ಅಡ್ಡಲಾಗಿ ಹೋಗಿದ್ದರೆ ಅನೇಕ ಜನರಿಗೆ ಗಾಯವಾಗುತ್ತಿತ್ತು. ಇದರಿಂದ ಸಾವು ಸಂಭವಿಸಬಹುದು. ಅದೃಷ್ಟವಶಾತ್ ಮೊಳೆ ಮತ್ತು ಬೋಲ್ಟ್‌ಗಳು ಮೇಲಕ್ಕೆ ಹೋದವು’ ಎಂದು ಪರಮೇಶ್ವರ ವಿವರಿಸಿದರು.

ಶಂಕಿತ ವ್ಯಕ್ತಿಯ ಬಗ್ಗೆ ಮಾತನಾಡಿದ ಸಚಿವರು, ಪೊಲೀಸರು ಸುಮಾರು 40 ರಿಂದ 50 ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. “ಅವನು ಬಸ್ಸಿನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ಇದೆ … ಆ ಸಮಯದಲ್ಲಿ ಸುಮಾರು 26 ಬಸ್ಸುಗಳು ಹಾದುಹೋದವು. ನಾವು ಎಲ್ಲಾ 26 ಬಸ್ಸುಗಳನ್ನು ಹಾದು ಪರಿಶಿಲಿಸಿದ್ದೇವೆ. ಆತ ಪ್ರಯಾಣಿಸಿದ ಬಸ್ ಅನ್ನು ನಾವು ಕಂಡುಕೊಂಡಿದ್ದೇವೆ, ಅವನು ಕ್ಯಾಪ್, ಮಾಸ್ಕ್ ಮತ್ತು ಕನ್ನಡಕ ಧರಿಸಿದ್ದಾನೆ; ಅಲ್ಲಿಯೂ ಸ್ಪಷ್ಟತೆ ಸಿಗುತ್ತಿಲ್ಲ’ ಎಂದರು.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಸಮಾಜ ದ್ರೋಹಿಗಳ ಬಗ್ಗೆ ಸಹಾನುಭೂತಿ ಇಲ್ಲದೆ ಕ್ರಮ ಜರುಗಿಸಿ ಎಂದು ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...