Homeಕರ್ನಾಟಕರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

ವ್ಯಾಪಾರ ಪೈಪೋಟಿ, ಮುಂಬರುವ ಚುನಾವಣೆಗಳು ಮತ್ತು ರಾಜ್ಯದಲ್ಲಿ ಸ್ಥಿರ ಸರ್ಕಾರದ ದೃಷ್ಟಿಯಿಂದ ಬೆಂಗಳೂರಿಗೆ ಬರುತ್ತಿರುವ ಹೂಡಿಕೆದಾರರನ್ನು ಭಯಭೀತಗೊಳಿಸುವುದು ನಗರದ ಉಪಾಹಾರ ಗೃಹ ಸ್ಫೋಟಕ್ಕೆ ಸಂಬಂಧಿಸಿದ ಕೆಲವು ಕೋನಗಳನ್ನು ಭೇದಿಸಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

ಪೂರ್ವ ಬೆಂಗಳೂರಿನ ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ತಲೆಗೆ ಟೋಪಿ, ಮುಖವಾಡ ಮತ್ತು ಕನ್ನಡಕವನ್ನು ಧರಿಸಿರುವ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಆತ ಇನ್ನೂ ಪತ್ತೆಯಾಗಿಲ್ಲ.

ಗೃಹ ಸಚಿವರ ಪ್ರಕಾರ, ಎಂಟು ತಂಡಗಳು ಪ್ರಕರಣವನ್ನು ಭೇದಿಸಲು ಕೆಲಸ ಮಾಡುತ್ತಿವೆ ಮತ್ತು ಅವರ ಜೊತೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ, ರಾಷ್ಟ್ರೀಯ ಭದ್ರತಾ ಗುಂಪು (ಎನ್‌ಎಸ್‌ಜಿ) ಮತ್ತು ಗುಪ್ತಚರ ಬ್ಯೂರೋ (ಐಬಿ) ತಂಡಗಳಿಗೆ ಸಹಾಯ ಮಾಡುತ್ತಿವೆ ಎಂದರು.

ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರನ್ನು ಭಯಭೀತಗೊಳಿಸಬಹುದೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ಪರಮೇಶ್ವರ ಹೇಳಿದರು. ‘ಚುನಾವಣೆಗಳು ಸಮೀಪಿಸುತ್ತಿವೆ, ಯಾವುದೇ ಸಂಘಟನೆಯು ಅದರ ಹಿಂದೆ ಇದ್ದರೆ ಅಥವಾ ಬೆಂಗಳೂರನ್ನು ಅಸುರಕ್ಷಿತವಾಗಿ ಕಾಣುವಂತೆ ಜನರನ್ನು ಭಯಭೀತಗೊಳಿಸುವ ಇತರ ಉದ್ದೇಶಗಳು ಇದರ ಹಿಂದೆ ಇದೆಯೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ’ ಎಂದು ಹೇಳಿದರು.

‘ಸ್ಥಿರ ಸರ್ಕಾರದ ದೃಷ್ಟಿಯಿಂದ ಅನೇಕ ಹೂಡಿಕೆದಾರರು ಇಲ್ಲಿಗೆ ಬರುತ್ತಿದ್ದಾರೆ, ಹೂಡಿಕೆದಾರರು ಬೆಂಗಳೂರಿಗೆ ಬರುವುದನ್ನು ತಡೆಯಲು ಅಥವಾ ಇತರ ಕೆಲವು ಅಪರಿಚಿತ ಕಾರಣಗಳಿಂದ ಇದನ್ನು ಮಾಡಿರಬಹುದು’ ಎಂದು ಪರಮೇಶ್ವರ ಹೇಳಿದರು.

ವ್ಯಾಪಾರ ಪ್ರತಿಸ್ಪರ್ಧಿಗಳು ಅಸೂಯೆಯಿಂದ ಇದನ್ನು ಮಾಡಿರಬಹುದು ಎಂಬ ಬಗ್ಗೆಯೂ ಸಚಿವರು ಅನುಮಾನ ವ್ಯಕ್ತಪಡಿಸಿದರು. ಇದು ಒಂದು ಕಾರಣ ಇರಬಹುದು, ಈ ಕೋನದಲ್ಲಿಯೂ ಇದನ್ನು ಸಹ ಚರ್ಚಿಸಲಾಗುತ್ತಿದೆ ಎಂದರು.

ರಾಮೇಶ್ವರಂ ಕೆಫೆಯು 11 ಘಟಕಗಳನ್ನು ಹೊಂದಿದೆ ಮತ್ತು ಮಾಲೀಕರು ತಮ್ಮ 12 ನೇ ಘಟಕವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ. ಇದಕ್ಕಾಗಿ ಮುಂಗಡ ಠೇವಣಿ ಸಹ ಪಾವತಿಸಲಾಗಿದೆ ಎಂದು ಅವರು ಹೇಳಿದರು.

‘ನಾವು ಪ್ರಕರಣವನನ್ನು ಭೇದಿಸುತ್ತೇವೆ; ಇದನ್ನು ಬಿಡುವುದಿಲ್ಲ. ಈ ಪ್ರಕರಣ ಎಷ್ಟೇ ಕಷ್ಟಕರವಾಗಿದ್ದರೂ, ನಮ್ಮ ಇಲಾಖೆ ಅದನ್ನು ಭೇದಿಸುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪೊಲೀಸರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವ ಹೇಳಿಕೆಗಳ ಮೇಲೆ ಮಾತ್ರ ಜನ ಅವಲಂಬಿತರಾಗಬೇಕು; ಊಹಾಪೋಹಗಳ ಮೇಲೆ ಭರವಸೆ ಇಡಬಾರದು’ ಎಂದು ಸಚಿವರು ಮನವಿ ಮಾಡಿದರು.

ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ಪ್ರೆಶರ್ ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿದ ಪ್ರಶ್ನೆಗೆ, ಮಂಗಳೂರಿನಲ್ಲಿ ನಡೆದ ಘಟನೆಯಂತೆಯೇ ಸ್ಫೋಟಕಗಳು ಮತ್ತು ಇತರ ಸಲಕರಣೆಗಳ ಜೋಡಣೆ ರಾಮೇಶ್ವರಂ ಕೆಫೆ ಸ್ಫೋಟದಲ್ಲೂ ಇದೆ. ಆದರೆ, ಹೋಲಿಕೆ ಎಂದರೆ ಅದೇ ಗ್ಯಾಂಗ್ ಹಿಂದೆ ಇದೆ ಎಂದು ಅರ್ಥವಲ್ಲ ಎಂದರು.

‘ಬ್ಯಾಟರಿ ಮತ್ತು ಟೈಮರ್ ಅನ್ನು ಬಳಸಿದ ರೀತಿಯು ಹೋಲುತ್ತದೆ. ನಾವು ಅದನ್ನು (ತನಿಖೆ) ಮುಂದಕ್ಕೆ ಕೊಂಡೊಯ್ಯಬೇಕು. ಅದೇ ಸಂಸ್ಥೆ ಮಾಡಿದೆಯೋ ಅಥವಾ ಅದೇ ಜನರು ಮಾಡಿದೆಯೋ ನಮಗೆ ತಿಳಿದಿಲ್ಲ’ ಎಂದು ಸಚಿವರು ಹೇಳಿದರು.

ಬಳಸಲಾದ ಸ್ಫೋಟಕಗಳು ಕಡಿಮೆ ತೀವ್ರತೆಯನ್ನು ಹೊಂದಿರುವುದರಿಂದ ಮತ್ತು ಪಸ್ಪೋಟದ ಪ್ರಮಾಣವು ಕಡಿಮೆ ಇರಬಹುದು. ಸ್ಪೋಟ್ ಪ್ರಮಾಣ ಹೆಚ್ಚಿದ್ದರೆ ತೀವ್ರತೆ ಹೆಚ್ಚಾಗುತ್ತಿತ್ತು’ ಎಂದು ಅವರು ಹೇಳಿದರು.

‘ಬಾಂಬ್ ಲಂಬವಾಗಿ ಅಲ್ಲ, ಅಡ್ಡಲಾಗಿ ಸ್ಫೋಟಗೊಂಡಿದ್ದರೆ ಸಾವುನೋವುಗಳು ಸಂಭವಿಸಬಹುದು. ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡಿದ್ದೆ; ಅಲ್ಲಿ ಬೋಲ್ಟ್‌ಗಳು ಮತ್ತು ಮೊಳೆಗಳನ್ನು ನೋಡಿದೆ. ಅವೆಲ್ಲವೂ ಮೇಲಕ್ಕೆ ಹೋಗಿವೆ. ಅವೆಲ್ಲಾ ಅಡ್ಡಲಾಗಿ ಹೋಗಿದ್ದರೆ ಅನೇಕ ಜನರಿಗೆ ಗಾಯವಾಗುತ್ತಿತ್ತು. ಇದರಿಂದ ಸಾವು ಸಂಭವಿಸಬಹುದು. ಅದೃಷ್ಟವಶಾತ್ ಮೊಳೆ ಮತ್ತು ಬೋಲ್ಟ್‌ಗಳು ಮೇಲಕ್ಕೆ ಹೋದವು’ ಎಂದು ಪರಮೇಶ್ವರ ವಿವರಿಸಿದರು.

ಶಂಕಿತ ವ್ಯಕ್ತಿಯ ಬಗ್ಗೆ ಮಾತನಾಡಿದ ಸಚಿವರು, ಪೊಲೀಸರು ಸುಮಾರು 40 ರಿಂದ 50 ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. “ಅವನು ಬಸ್ಸಿನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ಇದೆ … ಆ ಸಮಯದಲ್ಲಿ ಸುಮಾರು 26 ಬಸ್ಸುಗಳು ಹಾದುಹೋದವು. ನಾವು ಎಲ್ಲಾ 26 ಬಸ್ಸುಗಳನ್ನು ಹಾದು ಪರಿಶಿಲಿಸಿದ್ದೇವೆ. ಆತ ಪ್ರಯಾಣಿಸಿದ ಬಸ್ ಅನ್ನು ನಾವು ಕಂಡುಕೊಂಡಿದ್ದೇವೆ, ಅವನು ಕ್ಯಾಪ್, ಮಾಸ್ಕ್ ಮತ್ತು ಕನ್ನಡಕ ಧರಿಸಿದ್ದಾನೆ; ಅಲ್ಲಿಯೂ ಸ್ಪಷ್ಟತೆ ಸಿಗುತ್ತಿಲ್ಲ’ ಎಂದರು.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಸಮಾಜ ದ್ರೋಹಿಗಳ ಬಗ್ಗೆ ಸಹಾನುಭೂತಿ ಇಲ್ಲದೆ ಕ್ರಮ ಜರುಗಿಸಿ ಎಂದು ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...