Homeಕರ್ನಾಟಕರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

ರಾಮೇಶ್ವರಂ ಕೆಫೆ ಸ್ಫೋಟದ ಹಿಂದೆ ವ್ಯಾಪಾರ ಮತ್ಸರ; ಗೃಹ ಸಚಿವರು ಹೇಳಿದ್ದೇನು?

- Advertisement -
- Advertisement -

ವ್ಯಾಪಾರ ಪೈಪೋಟಿ, ಮುಂಬರುವ ಚುನಾವಣೆಗಳು ಮತ್ತು ರಾಜ್ಯದಲ್ಲಿ ಸ್ಥಿರ ಸರ್ಕಾರದ ದೃಷ್ಟಿಯಿಂದ ಬೆಂಗಳೂರಿಗೆ ಬರುತ್ತಿರುವ ಹೂಡಿಕೆದಾರರನ್ನು ಭಯಭೀತಗೊಳಿಸುವುದು ನಗರದ ಉಪಾಹಾರ ಗೃಹ ಸ್ಫೋಟಕ್ಕೆ ಸಂಬಂಧಿಸಿದ ಕೆಲವು ಕೋನಗಳನ್ನು ಭೇದಿಸಲು ಪೊಲೀಸರು ಶ್ರಮಿಸುತ್ತಿದ್ದಾರೆ ಎಂದು ಕರ್ನಾಟಕ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭಾನುವಾರ ಹೇಳಿದ್ದಾರೆ.

ಪೂರ್ವ ಬೆಂಗಳೂರಿನ ಕುಂದಲಹಳ್ಳಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ. ತಲೆಗೆ ಟೋಪಿ, ಮುಖವಾಡ ಮತ್ತು ಕನ್ನಡಕವನ್ನು ಧರಿಸಿರುವ ವ್ಯಕ್ತಿ ಪ್ರಕರಣದ ಪ್ರಮುಖ ಶಂಕಿತನಾಗಿದ್ದು, ಆತ ಇನ್ನೂ ಪತ್ತೆಯಾಗಿಲ್ಲ.

ಗೃಹ ಸಚಿವರ ಪ್ರಕಾರ, ಎಂಟು ತಂಡಗಳು ಪ್ರಕರಣವನ್ನು ಭೇದಿಸಲು ಕೆಲಸ ಮಾಡುತ್ತಿವೆ ಮತ್ತು ಅವರ ಜೊತೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ, ರಾಷ್ಟ್ರೀಯ ಭದ್ರತಾ ಗುಂಪು (ಎನ್‌ಎಸ್‌ಜಿ) ಮತ್ತು ಗುಪ್ತಚರ ಬ್ಯೂರೋ (ಐಬಿ) ತಂಡಗಳಿಗೆ ಸಹಾಯ ಮಾಡುತ್ತಿವೆ ಎಂದರು.

ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರನ್ನು ಭಯಭೀತಗೊಳಿಸಬಹುದೇ ಎಂಬ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ ಎಂದು ಪರಮೇಶ್ವರ ಹೇಳಿದರು. ‘ಚುನಾವಣೆಗಳು ಸಮೀಪಿಸುತ್ತಿವೆ, ಯಾವುದೇ ಸಂಘಟನೆಯು ಅದರ ಹಿಂದೆ ಇದ್ದರೆ ಅಥವಾ ಬೆಂಗಳೂರನ್ನು ಅಸುರಕ್ಷಿತವಾಗಿ ಕಾಣುವಂತೆ ಜನರನ್ನು ಭಯಭೀತಗೊಳಿಸುವ ಇತರ ಉದ್ದೇಶಗಳು ಇದರ ಹಿಂದೆ ಇದೆಯೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ’ ಎಂದು ಹೇಳಿದರು.

‘ಸ್ಥಿರ ಸರ್ಕಾರದ ದೃಷ್ಟಿಯಿಂದ ಅನೇಕ ಹೂಡಿಕೆದಾರರು ಇಲ್ಲಿಗೆ ಬರುತ್ತಿದ್ದಾರೆ, ಹೂಡಿಕೆದಾರರು ಬೆಂಗಳೂರಿಗೆ ಬರುವುದನ್ನು ತಡೆಯಲು ಅಥವಾ ಇತರ ಕೆಲವು ಅಪರಿಚಿತ ಕಾರಣಗಳಿಂದ ಇದನ್ನು ಮಾಡಿರಬಹುದು’ ಎಂದು ಪರಮೇಶ್ವರ ಹೇಳಿದರು.

ವ್ಯಾಪಾರ ಪ್ರತಿಸ್ಪರ್ಧಿಗಳು ಅಸೂಯೆಯಿಂದ ಇದನ್ನು ಮಾಡಿರಬಹುದು ಎಂಬ ಬಗ್ಗೆಯೂ ಸಚಿವರು ಅನುಮಾನ ವ್ಯಕ್ತಪಡಿಸಿದರು. ಇದು ಒಂದು ಕಾರಣ ಇರಬಹುದು, ಈ ಕೋನದಲ್ಲಿಯೂ ಇದನ್ನು ಸಹ ಚರ್ಚಿಸಲಾಗುತ್ತಿದೆ ಎಂದರು.

ರಾಮೇಶ್ವರಂ ಕೆಫೆಯು 11 ಘಟಕಗಳನ್ನು ಹೊಂದಿದೆ ಮತ್ತು ಮಾಲೀಕರು ತಮ್ಮ 12 ನೇ ಘಟಕವನ್ನು ಸ್ಥಾಪಿಸಲು ಯೋಜಿಸುತ್ತಿದ್ದಾರೆ. ಇದಕ್ಕಾಗಿ ಮುಂಗಡ ಠೇವಣಿ ಸಹ ಪಾವತಿಸಲಾಗಿದೆ ಎಂದು ಅವರು ಹೇಳಿದರು.

‘ನಾವು ಪ್ರಕರಣವನನ್ನು ಭೇದಿಸುತ್ತೇವೆ; ಇದನ್ನು ಬಿಡುವುದಿಲ್ಲ. ಈ ಪ್ರಕರಣ ಎಷ್ಟೇ ಕಷ್ಟಕರವಾಗಿದ್ದರೂ, ನಮ್ಮ ಇಲಾಖೆ ಅದನ್ನು ಭೇದಿಸುತ್ತದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪೊಲೀಸರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುವ ಹೇಳಿಕೆಗಳ ಮೇಲೆ ಮಾತ್ರ ಜನ ಅವಲಂಬಿತರಾಗಬೇಕು; ಊಹಾಪೋಹಗಳ ಮೇಲೆ ಭರವಸೆ ಇಡಬಾರದು’ ಎಂದು ಸಚಿವರು ಮನವಿ ಮಾಡಿದರು.

ನವೆಂಬರ್ 19, 2022 ರಂದು ಮಂಗಳೂರಿನಲ್ಲಿ ಪ್ರೆಶರ್ ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿದ ಪ್ರಶ್ನೆಗೆ, ಮಂಗಳೂರಿನಲ್ಲಿ ನಡೆದ ಘಟನೆಯಂತೆಯೇ ಸ್ಫೋಟಕಗಳು ಮತ್ತು ಇತರ ಸಲಕರಣೆಗಳ ಜೋಡಣೆ ರಾಮೇಶ್ವರಂ ಕೆಫೆ ಸ್ಫೋಟದಲ್ಲೂ ಇದೆ. ಆದರೆ, ಹೋಲಿಕೆ ಎಂದರೆ ಅದೇ ಗ್ಯಾಂಗ್ ಹಿಂದೆ ಇದೆ ಎಂದು ಅರ್ಥವಲ್ಲ ಎಂದರು.

‘ಬ್ಯಾಟರಿ ಮತ್ತು ಟೈಮರ್ ಅನ್ನು ಬಳಸಿದ ರೀತಿಯು ಹೋಲುತ್ತದೆ. ನಾವು ಅದನ್ನು (ತನಿಖೆ) ಮುಂದಕ್ಕೆ ಕೊಂಡೊಯ್ಯಬೇಕು. ಅದೇ ಸಂಸ್ಥೆ ಮಾಡಿದೆಯೋ ಅಥವಾ ಅದೇ ಜನರು ಮಾಡಿದೆಯೋ ನಮಗೆ ತಿಳಿದಿಲ್ಲ’ ಎಂದು ಸಚಿವರು ಹೇಳಿದರು.

ಬಳಸಲಾದ ಸ್ಫೋಟಕಗಳು ಕಡಿಮೆ ತೀವ್ರತೆಯನ್ನು ಹೊಂದಿರುವುದರಿಂದ ಮತ್ತು ಪಸ್ಪೋಟದ ಪ್ರಮಾಣವು ಕಡಿಮೆ ಇರಬಹುದು. ಸ್ಪೋಟ್ ಪ್ರಮಾಣ ಹೆಚ್ಚಿದ್ದರೆ ತೀವ್ರತೆ ಹೆಚ್ಚಾಗುತ್ತಿತ್ತು’ ಎಂದು ಅವರು ಹೇಳಿದರು.

‘ಬಾಂಬ್ ಲಂಬವಾಗಿ ಅಲ್ಲ, ಅಡ್ಡಲಾಗಿ ಸ್ಫೋಟಗೊಂಡಿದ್ದರೆ ಸಾವುನೋವುಗಳು ಸಂಭವಿಸಬಹುದು. ಸ್ಥಳಕ್ಕೆ ನಾನೂ ಕೂಡ ಭೇಟಿ ನೀಡಿದ್ದೆ; ಅಲ್ಲಿ ಬೋಲ್ಟ್‌ಗಳು ಮತ್ತು ಮೊಳೆಗಳನ್ನು ನೋಡಿದೆ. ಅವೆಲ್ಲವೂ ಮೇಲಕ್ಕೆ ಹೋಗಿವೆ. ಅವೆಲ್ಲಾ ಅಡ್ಡಲಾಗಿ ಹೋಗಿದ್ದರೆ ಅನೇಕ ಜನರಿಗೆ ಗಾಯವಾಗುತ್ತಿತ್ತು. ಇದರಿಂದ ಸಾವು ಸಂಭವಿಸಬಹುದು. ಅದೃಷ್ಟವಶಾತ್ ಮೊಳೆ ಮತ್ತು ಬೋಲ್ಟ್‌ಗಳು ಮೇಲಕ್ಕೆ ಹೋದವು’ ಎಂದು ಪರಮೇಶ್ವರ ವಿವರಿಸಿದರು.

ಶಂಕಿತ ವ್ಯಕ್ತಿಯ ಬಗ್ಗೆ ಮಾತನಾಡಿದ ಸಚಿವರು, ಪೊಲೀಸರು ಸುಮಾರು 40 ರಿಂದ 50 ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. “ಅವನು ಬಸ್ಸಿನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ಇದೆ … ಆ ಸಮಯದಲ್ಲಿ ಸುಮಾರು 26 ಬಸ್ಸುಗಳು ಹಾದುಹೋದವು. ನಾವು ಎಲ್ಲಾ 26 ಬಸ್ಸುಗಳನ್ನು ಹಾದು ಪರಿಶಿಲಿಸಿದ್ದೇವೆ. ಆತ ಪ್ರಯಾಣಿಸಿದ ಬಸ್ ಅನ್ನು ನಾವು ಕಂಡುಕೊಂಡಿದ್ದೇವೆ, ಅವನು ಕ್ಯಾಪ್, ಮಾಸ್ಕ್ ಮತ್ತು ಕನ್ನಡಕ ಧರಿಸಿದ್ದಾನೆ; ಅಲ್ಲಿಯೂ ಸ್ಪಷ್ಟತೆ ಸಿಗುತ್ತಿಲ್ಲ’ ಎಂದರು.

ಇದನ್ನೂ ಓದಿ; ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಸಮಾಜ ದ್ರೋಹಿಗಳ ಬಗ್ಗೆ ಸಹಾನುಭೂತಿ ಇಲ್ಲದೆ ಕ್ರಮ ಜರುಗಿಸಿ ಎಂದು ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...