Homeಮುಖಪುಟತಮ್ಮ ಜೀವನದಲ್ಲಿ ಎಂದೂ ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಮಾಡಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ

ತಮ್ಮ ಜೀವನದಲ್ಲಿ ಎಂದೂ ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಮಾಡಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ

- Advertisement -
- Advertisement -

’ತಮ್ಮ ಜೀವನದಲ್ಲಿ ಎಂದೂ ಕೂಡ ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ ಎಂದ ಉದ್ಯಮಿ ರಾಜ್ ಕುಂದ್ರಾ ಹೇಳಿದ್ದಾರೆ. ಈ ವರ್ಷದ ಜುಲೈನಲ್ಲಿ ಅಶ್ಲೀಲ ಚಿತ್ರಗಳನ್ನು ತಯಾರಿಸುವುದು ಮತ್ತು ಮೊಬೈಲ್ ಆ್ಯಪ್‌ಗಳ ಮೂಲಕ ಅದನ್ನು ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌‌‌‌ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾ ಬಂಧನಕ್ಕೆ ಒಳಗಾಗಿದ್ದರು.

ಪ್ರಕರಣದಲ್ಲಿ ಜಾಮೀನು ಪಡೆದಿರುವ ಉದ್ಯಮಿ ರಾಜ್ ಕುಂದ್ರಾ ಸೋಮವಾರ ಈ ಕುರಿತು ಮಾತನಾಡಿದ್ದಾರೆ. ತಮ್ಮ ಜೀವನದಲ್ಲಿ ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ. ಇದು ಒಂದು ಷಡ್ಯಂತ್ರ. ಮಾಧ್ಯಮಗಳು ಈಗಾಗಲೇ ನನ್ನನ್ನು ‘ತಪ್ಪಿತಸ್ಥ’ ಎಂದು ಘೋಷಿಸಿವೆ ಎಂದು ಹೇಳಿಕೊಂಡಿದ್ದಾರೆ.

“ನನ್ನ ಮೌನವನ್ನು ದೌರ್ಬಲ್ಯ ಎಂದುಕೊಂಡು ಹಲವು ಆಧಾರವಿಲ್ಲದ, ತಪ್ಪುದಾರಿಗೆಳೆಯುವ ಮತ್ತು ಬೇಜವಾಬ್ದಾರಿ ಹೇಳಿಕೆಗಳು ಮತ್ತು ಲೇಖನಗಳು ಬರುತ್ತಿವೆ. ಹೀಗಾಗಿ ನಾನು ಮಾತನಾಡುತ್ತಿದ್ದೇನೆ. ನಾನು ಎಂದಿಗೂ ಅಶ್ಲೀಲ ಚಿತ್ರ ತಯಾರಿಕೆ ಮತ್ತು ವಿತರಣೆಯಲ್ಲಿ ಭಾಗಿಯಾಗಿಲ್ಲ ಎಂದು ಹೇಳುವ ಮೂಲಕ ನನ್ನ ಮಾತು ಪ್ರಾರಂಭಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ಚೆನ್ನೈ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಸ್ವಯಂ ಘೋಷಿತ ದೇವಮಾನವನ ಬಂಧನ

“ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈಗ ಪ್ರಕರಣದ ವಿಚಾರಣೆ ನಡೆಯುತ್ತಿರುವುದರಿಂದ ಹೆಚ್ಚಿನ ವಿಷಯಗಳನ್ನು ಸ್ಪಷ್ಟಪಡಿಸಲಾರೆ. ಆದರೆ ನಾನು ವಿಚಾರಣೆಯನ್ನು ಎದುರಿಸಲು ಸಿದ್ಧನಿದ್ದೇನೆ. ನ್ಯಾಯಾಂಗದಲ್ಲಿ ನನಗೆ ಸಂಪೂರ್ಣ ನಂಬಿಕೆಯಿದೆ. ಅಲ್ಲಿ ಸತ್ಯ ಗೆಲ್ಲುತ್ತದೆ” ಎಂದಿದ್ದಾರೆ.

ಅಶ್ಲೀಲ ಚಿತ್ರಗಳ ತಯಾರಿಕೆ ಮತ್ತು ಅವುಗಳನ್ನು ಹಾಟ್‌ಶಾಟ್‌ ಸೇರಿದಂತೆ ಕೆಲವು ಅಪ್ಲಿಕೇಶನ್‌ಗಳ ಮೂಲಕ ಪ್ರಸಾರ ಮಾಡುವ ಬಗ್ಗೆ, ಫೆಬ್ರವರಿಯಲ್ಲಿ ಮುಂಬಯಿಯ ಅಪರಾಧ ವಿಭಾಗದಲ್ಲಿ ಕುಂದ್ರಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ ಕುಂದ್ರಾ ಅವರನ್ನು ಜುಲೈ 19 ರಂದು ಬಂಧಿಸಲಾಗಿತ್ತು.

ಎಫ್‌ಐಆರ್‌ನಲ್ಲಿ ನಟಿಯರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಅವರನ್ನು ಸಹ ಆರೋಪಿಗಳೆಂದು ಹೆಸರಿಸಲಾಗಿದೆ. ರಾಜ್ ಕುಂದ್ರಾಗೆ ಸೆಪ್ಟೆಂಬರ್‌ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕಳೆದ ವಾರ ಸುಪ್ರೀಂ ಕೋರ್ಟ್ ಬಂಧನದಿಂದ ರಕ್ಷಣೆ ನೀಡಿದೆ.


ಇದನ್ನೂ ಓದಿ: ಅಶ್ಲೀಲ ಚಿತ್ರ ತಯಾರಿಕೆ, ಪ್ರಸಾರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...