Homeಮುಖಪುಟಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR

ಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR

- Advertisement -
- Advertisement -

ಪ್ರದೀಪ್ ಎಂಬ ಉದ್ಯಮಿಯೊಬ್ಬರು ಹಣಕಾಸಿನ ವಂಚನೆಯಾಗಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸರು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR ದಾಖಲಿಸಿದ್ದಾರೆ.

ಮೃತ ಪ್ರದೀಪ್ ಪತ್ನಿ ನೀಡಿದ ದೂರಿನ ಅನ್ವಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಅರವಿಂದ ಲಿಂಬಾವಳಿ ಸೇರಿದಂತೆ ಡೆತ್‌ನೋಟ್‌ನಲ್ಲಿ ಹೆಸರಿದ್ದ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್​ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರೆಸಾರ್ಟ್ ನಿರ್ಮಾಣಕ್ಕೆ ಹೂಡಿಕೆ ಮಾಡಿದ್ದ ಹಣವನ್ನು ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ, ಇವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ 6 ಜನರ ಹೆಸರು ಬರೆದಿಟ್ಟು ಉದ್ಯಮಿಯೊಬ್ಬರು ಕಗ್ಗಲಿಪುರ ಬಳಿಯ ನೆಟ್ಟಿಗೆರೆ ಗ್ರಾಮದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೈಸೂರು ನಿವಾಸಿ ಪ್ರದೀಪ್ (47) ಎಂಬ ಉದ್ಯಮಿಯೊಬ್ಬರು ಜನವರಿ 1 ರ ಭಾನುವಾರದಂದು ಕಾರಿನಲ್ಲಿ ಕುಳಿತು ತಮ್ಮ ತಲೆಗೆ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾರೆ. ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್​ ಎಂಬವರ ಹೆಸರಿನ ಜೊತೆಗೆ ಅವರ ಮೊಬೈಲ್ ಸಂಖ್ಯೆಯನ್ನು ಸಹ ನಮೂದಿಸಲಾಗಿದೆ.

“ಈ ಕೆಳಕಂಡ ವ್ಯಕ್ತಿಗಳ ಕಾರಣದಿಂದಾಗಿ ನಾನು ಈ ಅತಿಯಾದ ನಿರ್ಧಾರಕ್ಕೆ ಬರುತ್ತಿದ್ದೇನೆ. ನನ್ನ ಸಾವಿನ ನಂತರ ಈ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ನನ್ನ ಸಾವಿಗೆ ನ್ಯಾಯ ದೊರಕಿಸಿಕೊಡಿ. ಕೊನೆಯದಾಗಿ ನನ್ನ ಕುಟುಂಬದ ವ್ಯಕ್ತಿಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಐವರು ಸ್ನೇಹಿತರ ಜೊತೆ ಸೇರಿ ರೆಸಾರ್ಟ್ ನಿರ್ಮಾಣಕ್ಕೆ ಪ್ರದೀಪ್ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ಹಣವನ್ನು ವಾಪಸ್ ಮಾಡದೆ ಆ ಸ್ನೇಹಿತರು ಮೋಸ ಮಾಡಿದ್ದರು ಎಂದು ಪ್ರದೀಪ್ ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಮಧ್ಯಸ್ಥಿಕೆ ವಹಿಸಿದ್ದ ಬೆಂಗಳೂರಿನ ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ಅವರು ಸಹ ನನಗೆ ಮೋಸ ಮಾಡಿದ್ದಾರೆ. ಅವರಿಗೆ ಅರವಿಂದ್ ಲಿಂಬಾವಳಿ ಸಹಕರಿಸಿದ್ದಾರೆ ಎಂದು ಪ್ರದೀಪ್ ದೂರಿದ್ದಾರೆ.

ಮಧ್ಯಸ್ಥಿಕೆ ವಹಿಸಿದ್ದ ಲಿಂಬಾವಳಿಯವರು ಕೆಲವು ತಿಂಗಳು ಕಾಲವಕಾಶ ಪಡೆದು ಪ್ರತಿ ತಿಂಗಳು 10 ಲಕ್ಷ ರೂ ನೀಡಲು ಸೂಚಿಸಿದ್ದರು. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಸಾಲ ತೀರಿಸಲು ಮನೆ ಮಾರಿದ್ದೆ. ಮತ್ತೆ ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ ಸ್ನೇಹಿತರು ಕೇವಲ ಒಂದು ತಿಂಗಳು ಮಾತ್ರ ಪಾವತಿಸಿ, ಬಳಿಕ ಹಣ ನೀಡದೇ ಮತ್ತೆ ಮೋಸ ಮಾಡಿದ್ದಾರೆ. ಅರವಿಂದ ನಿಂಬಾವಳಿಯವರು ಅವರ ಪರ ವಹಿಸಿದ್ದಾರೆ ಎಂದು ಡೆತ್​ನೋಟ್​ನಲ್ಲಿ ಆರೋಪಿಸಲಾಗಿದೆ.

ಉದ್ಯಮಿಯ ಆತ್ಮಹತ್ಯೆ ವಿಷಯ ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. “ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರ ರಕ್ಷಣೆ ಮಾಡಲಾಯಿತು. ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳ ರಕ್ಷಣೆ ಮಾಡಲಾಗಿದೆ. ಈಗ ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ರಕ್ಷಣೆ ಮಾಡಲು ಸಿಎಂ ಬೊಮ್ಮಾಯಿ ಮುಂದಾಗಿದ್ದಾರೆ. ಅವರು CCM (“ಕ್ರಿಮಿನಲ್ಸ್ ಕೇರ್‌ಟೇಕರ್ ಮಿನಿಸ್ಟರ್”) ಆಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

ಜೀವ ಅಮೂಲ್ಯವಾಗಿದೆ ಮತ್ತು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಖಿನ್ನತೆ ಎನಿಸಿದರೆ ದಯವಿಟ್ಟು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮತ್ತು ಭಾವನಾತ್ಮಕ ಬೆಂಬಲ ಪಡೆಯಿರಿ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...