Homeಮುಖಪುಟಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR

ಉದ್ಯಮಿ ಆತ್ಮಹತ್ಯೆ: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR

- Advertisement -
- Advertisement -

ಪ್ರದೀಪ್ ಎಂಬ ಉದ್ಯಮಿಯೊಬ್ಬರು ಹಣಕಾಸಿನ ವಂಚನೆಯಾಗಿದೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸರು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ವಿರುದ್ಧ FIR ದಾಖಲಿಸಿದ್ದಾರೆ.

ಮೃತ ಪ್ರದೀಪ್ ಪತ್ನಿ ನೀಡಿದ ದೂರಿನ ಅನ್ವಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಅರವಿಂದ ಲಿಂಬಾವಳಿ ಸೇರಿದಂತೆ ಡೆತ್‌ನೋಟ್‌ನಲ್ಲಿ ಹೆಸರಿದ್ದ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್​ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರೆಸಾರ್ಟ್ ನಿರ್ಮಾಣಕ್ಕೆ ಹೂಡಿಕೆ ಮಾಡಿದ್ದ ಹಣವನ್ನು ವಾಪಸ್ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ, ಇವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸಹಿತ 6 ಜನರ ಹೆಸರು ಬರೆದಿಟ್ಟು ಉದ್ಯಮಿಯೊಬ್ಬರು ಕಗ್ಗಲಿಪುರ ಬಳಿಯ ನೆಟ್ಟಿಗೆರೆ ಗ್ರಾಮದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೈಸೂರು ನಿವಾಸಿ ಪ್ರದೀಪ್ (47) ಎಂಬ ಉದ್ಯಮಿಯೊಬ್ಬರು ಜನವರಿ 1 ರ ಭಾನುವಾರದಂದು ಕಾರಿನಲ್ಲಿ ಕುಳಿತು ತಮ್ಮ ತಲೆಗೆ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟಿದ್ದಾರೆ. ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಶಾಸಕ ಅರವಿಂದ ಲಿಂಬಾವಳಿ ಸಹಿತ ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಡಾ.ಜಯರಾಮ್ ರೆಡ್ಡಿ, ರಾಘವ ಭಟ್​ ಎಂಬವರ ಹೆಸರಿನ ಜೊತೆಗೆ ಅವರ ಮೊಬೈಲ್ ಸಂಖ್ಯೆಯನ್ನು ಸಹ ನಮೂದಿಸಲಾಗಿದೆ.

“ಈ ಕೆಳಕಂಡ ವ್ಯಕ್ತಿಗಳ ಕಾರಣದಿಂದಾಗಿ ನಾನು ಈ ಅತಿಯಾದ ನಿರ್ಧಾರಕ್ಕೆ ಬರುತ್ತಿದ್ದೇನೆ. ನನ್ನ ಸಾವಿನ ನಂತರ ಈ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ನನ್ನ ಸಾವಿಗೆ ನ್ಯಾಯ ದೊರಕಿಸಿಕೊಡಿ. ಕೊನೆಯದಾಗಿ ನನ್ನ ಕುಟುಂಬದ ವ್ಯಕ್ತಿಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಐವರು ಸ್ನೇಹಿತರ ಜೊತೆ ಸೇರಿ ರೆಸಾರ್ಟ್ ನಿರ್ಮಾಣಕ್ಕೆ ಪ್ರದೀಪ್ ಹಣ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಆದರೆ ಹಣವನ್ನು ವಾಪಸ್ ಮಾಡದೆ ಆ ಸ್ನೇಹಿತರು ಮೋಸ ಮಾಡಿದ್ದರು ಎಂದು ಪ್ರದೀಪ್ ಆರೋಪಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಮಧ್ಯಸ್ಥಿಕೆ ವಹಿಸಿದ್ದ ಬೆಂಗಳೂರಿನ ಮಹದೇವಪುರದ ಶಾಸಕ ಅರವಿಂದ ಲಿಂಬಾವಳಿ ಅವರು ಸಹ ನನಗೆ ಮೋಸ ಮಾಡಿದ್ದಾರೆ. ಅವರಿಗೆ ಅರವಿಂದ್ ಲಿಂಬಾವಳಿ ಸಹಕರಿಸಿದ್ದಾರೆ ಎಂದು ಪ್ರದೀಪ್ ದೂರಿದ್ದಾರೆ.

ಮಧ್ಯಸ್ಥಿಕೆ ವಹಿಸಿದ್ದ ಲಿಂಬಾವಳಿಯವರು ಕೆಲವು ತಿಂಗಳು ಕಾಲವಕಾಶ ಪಡೆದು ಪ್ರತಿ ತಿಂಗಳು 10 ಲಕ್ಷ ರೂ ನೀಡಲು ಸೂಚಿಸಿದ್ದರು. ಒಟ್ಟು ಎರಡೂವರೆ ಕೋಟಿ ಹಣ ನನಗೆ ಬರಬೇಕು. ಸಾಲ ತೀರಿಸಲು ಮನೆ ಮಾರಿದ್ದೆ. ಮತ್ತೆ ಸಾಕಷ್ಟು ಸಾಲ ಮಾಡಿಕೊಂಡಿದ್ದೆ. ಆದರೆ ಸ್ನೇಹಿತರು ಕೇವಲ ಒಂದು ತಿಂಗಳು ಮಾತ್ರ ಪಾವತಿಸಿ, ಬಳಿಕ ಹಣ ನೀಡದೇ ಮತ್ತೆ ಮೋಸ ಮಾಡಿದ್ದಾರೆ. ಅರವಿಂದ ನಿಂಬಾವಳಿಯವರು ಅವರ ಪರ ವಹಿಸಿದ್ದಾರೆ ಎಂದು ಡೆತ್​ನೋಟ್​ನಲ್ಲಿ ಆರೋಪಿಸಲಾಗಿದೆ.

ಉದ್ಯಮಿಯ ಆತ್ಮಹತ್ಯೆ ವಿಷಯ ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದೆ. “ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರ ರಕ್ಷಣೆ ಮಾಡಲಾಯಿತು. ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳ ರಕ್ಷಣೆ ಮಾಡಲಾಗಿದೆ. ಈಗ ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ರಕ್ಷಣೆ ಮಾಡಲು ಸಿಎಂ ಬೊಮ್ಮಾಯಿ ಮುಂದಾಗಿದ್ದಾರೆ. ಅವರು CCM (“ಕ್ರಿಮಿನಲ್ಸ್ ಕೇರ್‌ಟೇಕರ್ ಮಿನಿಸ್ಟರ್”) ಆಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

ಜೀವ ಅಮೂಲ್ಯವಾಗಿದೆ ಮತ್ತು ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಖಿನ್ನತೆ ಎನಿಸಿದರೆ ದಯವಿಟ್ಟು ಈ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ಮತ್ತು ಭಾವನಾತ್ಮಕ ಬೆಂಬಲ ಪಡೆಯಿರಿ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...