Homeಮುಖಪುಟಇಂದು ಮುಂಬೈನ ಆರ್ಥರ್‌ ಜೈಲು ಪಾಲಾಗಲಿದ್ದಾರ ವಿಜಯ್‌ ಮಲ್ಯ?

ಇಂದು ಮುಂಬೈನ ಆರ್ಥರ್‌ ಜೈಲು ಪಾಲಾಗಲಿದ್ದಾರ ವಿಜಯ್‌ ಮಲ್ಯ?

- Advertisement -
- Advertisement -

ಬಹುಕೋಟಿ ಬ್ಯಾಂಕ್‌ ವಂಚನೆ ಆರೋಪದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ ಉದ್ಯಮಿ ವಿಜಯ್‌ ಮಲ್ಯ ರನ್ನು ಇಂದು ಭಾರತಕ್ಕೆ ಕರೆತರುವ ಸಾಧ್ಯತೆಯಿದ್ದು ಅವರನ್ನು ಮುಂಬೈನ ಆರ್ಥರ್‌ ಜೈಲಿನಲ್ಲಿಡಲಾಗುತ್ತದೆ ಎನ್ನಲಾಗಿದೆ.

ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಭಾರತದಿಂದ ಲಂಡನ್‌ಗೆ ಪಲಾಯನ ಮಾಡಿದ ತಲೆ ಮರೆಸಿಕೊಂಡಿರುವ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಆದರೆ ವಿಜಯ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅದು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.

ಭಾರತವನ್ನು ತೊರೆದು ಮಾರ್ಚ್ 2, 2016 ರಂದು ಬ್ರಿಟನ್‌ಗೆ ಪಲಾಯನ ಮಾಡಿದ ವಿಜಯ್‌ ಮಲ್ಯ ದೇಶದ 17 ಬ್ಯಾಂಕುಗಳಿಂದ ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಅವರನ್ನು ಲಂಡನ್ ಸರ್ಕಾರ ಭಾರತಕ್ಕೆ ಇಂದು ರಾತ್ರಿ ಹಸ್ತಾಂತರಿಸಲಿದೆ ಎಂದು ಐಎಎನ್ಎಸ್‌ ವರದಿ ಮಾಡಿದೆ.

ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವ ವಿಜಯ ಮಲ್ಯ ಅವರನ್ನು ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲೇ ವೈದ್ಯಕೀಯ ತಂಡವೊಂದು ಅವರ ಆರೋಗ್ಯ ತಪಾಸಣೆ ನಡೆಸಲಿದೆ ಎನ್ನಲಾಗಿದೆ.

ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸಿಬಿಐ ಅಧಿಕಾರಿಗಳು ಅವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2018 ರ ಆಗಸ್ಟ್‌ನಲ್ಲಿ ಮಲ್ಯ ಅವರ ಮನವಿಯನ್ನು ಆಲಿಸಿದ್ದ ಯುಕೆ ನ್ಯಾಯಾಲಯ ಜೈಲಿನ ವಿವರಗಳನ್ನು ಹಂಚಿಕೊಳ್ಳಲು ಭಾರತೀಯ ತನಿಖಾ ಸಂಸ್ಥೆಗಳಿಗೆ ಸೂಚಿಸಿತ್ತು. ಹೀಗಾಗಿ ಮಲ್ಯ ಅವರನ್ನು ಬಂಧಿಸುವ ಮುಂಬೈನ ಆರ್ಥರ್ ರೋಡ್ ಜೈಲಿನ ಕೋಣೆಯನ್ನು ಸಿಬಿಐ ಅಧಿಕಾರಿಗಳು ವಿಡಿಯೋ ಮಾಡಿ ಕಳುಹಿಸಿದ್ದರು. ಅಲ್ಲದೆ, ಮಲ್ಯ ಹಸ್ತಾಂತರದ ನಂತರ ಅವರನ್ನು ಇರಿಸಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದರು.
ಆರ್ಥರ್ ರೋಡ್‌ನ ಎರಡು ಎರಡು ಅಂತಸ್ತಿನ ಜೈಲು ಕಟ್ಟಡದಲ್ಲಿ ಮಲ್ಯ ಅವರನ್ನು ಉನ್ನತ ಭದ್ರತಾ ಬ್ಯಾರಕ್‌ಗಳಲ್ಲಿ ಇರಿಸಲಾಗುವುದು ಎಂದು ಯುಕೆ ನ್ಯಾಯಾಲಯಕ್ಕೆ ತಿಳಿಸಿದ್ದವು.

ಕೆಲದಿನಗಳ ಹಿಂದೆಯಷ್ಟೇ ವಿಜಯ್‌ ಮಲ್ಯ ಬ್ಯಾಂಕುಗಳ ಸಾಲ ತೀರಿಸಲು ಬದ್ಧನಿದ್ದೇನೆ. ದಯವಿಟ್ಟು ನನ್ನ ಸಾಲ ಮರುಪಾವತಿಯನ್ನು ಒಪ್ಪಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು.

ಭಾರತದಲ್ಲಿ ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ತಮ್ಮ ಸಾಲದ ಬಾಕಿ ಹಣವನ್ನು ಶೇ 100 ರಷ್ಟು ಮರುಪಾವತಿಸುತ್ತೇನೆ ಹಾಗೂ ತನ್ನ ವಿರುದ್ದದ ಪ್ರಕರಣವನ್ನು ಕೈಬಿಡಿ ಎಂದು ಸರ್ಕಾರವನ್ನು ಕೋರಿದ್ದಾರೆ.

20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ನೀಡಿದ್ದಕ್ಕಾಗಿ ಭಾರತ ಸರ್ಕಾರವನ್ನು ಅಭಿನಂದಿಸುತ್ತಾ, ತಾನು ಬಾಕಿ ಹಣವನ್ನು ಮರುಪಾವತಿ ಮಾಡುತ್ತೇನೆಂದು ಪದೇ ಪದೇ ಹೇಳಿದರೂ ನನ್ನ ಮಾತನ್ನು ನಿರ್ಲಕ್ಷಿಸಲಾಗಿದೆ ಎಂದು ವಿಷಾದಿಸಿದ್ದಾರೆ.

“ಕೊರೊನಾ ಪರಿಹಾರ ಪ್ಯಾಕೇಜ್‌ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಅವರು ಬಯಸಿದಷ್ಟು ಕರೆನ್ಸಿಯನ್ನು ಮುದ್ರಿಸಬಹುದು ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ 100% ಮರುಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೇ?” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...