Homeಮುಖಪುಟಇಂದು ಮುಂಬೈನ ಆರ್ಥರ್‌ ಜೈಲು ಪಾಲಾಗಲಿದ್ದಾರ ವಿಜಯ್‌ ಮಲ್ಯ?

ಇಂದು ಮುಂಬೈನ ಆರ್ಥರ್‌ ಜೈಲು ಪಾಲಾಗಲಿದ್ದಾರ ವಿಜಯ್‌ ಮಲ್ಯ?

- Advertisement -
- Advertisement -

ಬಹುಕೋಟಿ ಬ್ಯಾಂಕ್‌ ವಂಚನೆ ಆರೋಪದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ ಉದ್ಯಮಿ ವಿಜಯ್‌ ಮಲ್ಯ ರನ್ನು ಇಂದು ಭಾರತಕ್ಕೆ ಕರೆತರುವ ಸಾಧ್ಯತೆಯಿದ್ದು ಅವರನ್ನು ಮುಂಬೈನ ಆರ್ಥರ್‌ ಜೈಲಿನಲ್ಲಿಡಲಾಗುತ್ತದೆ ಎನ್ನಲಾಗಿದೆ.

ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಭಾರತದಿಂದ ಲಂಡನ್‌ಗೆ ಪಲಾಯನ ಮಾಡಿದ ತಲೆ ಮರೆಸಿಕೊಂಡಿರುವ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಆದರೆ ವಿಜಯ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅದು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.

ಭಾರತವನ್ನು ತೊರೆದು ಮಾರ್ಚ್ 2, 2016 ರಂದು ಬ್ರಿಟನ್‌ಗೆ ಪಲಾಯನ ಮಾಡಿದ ವಿಜಯ್‌ ಮಲ್ಯ ದೇಶದ 17 ಬ್ಯಾಂಕುಗಳಿಂದ ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಅವರನ್ನು ಲಂಡನ್ ಸರ್ಕಾರ ಭಾರತಕ್ಕೆ ಇಂದು ರಾತ್ರಿ ಹಸ್ತಾಂತರಿಸಲಿದೆ ಎಂದು ಐಎಎನ್ಎಸ್‌ ವರದಿ ಮಾಡಿದೆ.

ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವ ವಿಜಯ ಮಲ್ಯ ಅವರನ್ನು ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲೇ ವೈದ್ಯಕೀಯ ತಂಡವೊಂದು ಅವರ ಆರೋಗ್ಯ ತಪಾಸಣೆ ನಡೆಸಲಿದೆ ಎನ್ನಲಾಗಿದೆ.

ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸಿಬಿಐ ಅಧಿಕಾರಿಗಳು ಅವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2018 ರ ಆಗಸ್ಟ್‌ನಲ್ಲಿ ಮಲ್ಯ ಅವರ ಮನವಿಯನ್ನು ಆಲಿಸಿದ್ದ ಯುಕೆ ನ್ಯಾಯಾಲಯ ಜೈಲಿನ ವಿವರಗಳನ್ನು ಹಂಚಿಕೊಳ್ಳಲು ಭಾರತೀಯ ತನಿಖಾ ಸಂಸ್ಥೆಗಳಿಗೆ ಸೂಚಿಸಿತ್ತು. ಹೀಗಾಗಿ ಮಲ್ಯ ಅವರನ್ನು ಬಂಧಿಸುವ ಮುಂಬೈನ ಆರ್ಥರ್ ರೋಡ್ ಜೈಲಿನ ಕೋಣೆಯನ್ನು ಸಿಬಿಐ ಅಧಿಕಾರಿಗಳು ವಿಡಿಯೋ ಮಾಡಿ ಕಳುಹಿಸಿದ್ದರು. ಅಲ್ಲದೆ, ಮಲ್ಯ ಹಸ್ತಾಂತರದ ನಂತರ ಅವರನ್ನು ಇರಿಸಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದರು.
ಆರ್ಥರ್ ರೋಡ್‌ನ ಎರಡು ಎರಡು ಅಂತಸ್ತಿನ ಜೈಲು ಕಟ್ಟಡದಲ್ಲಿ ಮಲ್ಯ ಅವರನ್ನು ಉನ್ನತ ಭದ್ರತಾ ಬ್ಯಾರಕ್‌ಗಳಲ್ಲಿ ಇರಿಸಲಾಗುವುದು ಎಂದು ಯುಕೆ ನ್ಯಾಯಾಲಯಕ್ಕೆ ತಿಳಿಸಿದ್ದವು.

ಕೆಲದಿನಗಳ ಹಿಂದೆಯಷ್ಟೇ ವಿಜಯ್‌ ಮಲ್ಯ ಬ್ಯಾಂಕುಗಳ ಸಾಲ ತೀರಿಸಲು ಬದ್ಧನಿದ್ದೇನೆ. ದಯವಿಟ್ಟು ನನ್ನ ಸಾಲ ಮರುಪಾವತಿಯನ್ನು ಒಪ್ಪಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು.

ಭಾರತದಲ್ಲಿ ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ತಮ್ಮ ಸಾಲದ ಬಾಕಿ ಹಣವನ್ನು ಶೇ 100 ರಷ್ಟು ಮರುಪಾವತಿಸುತ್ತೇನೆ ಹಾಗೂ ತನ್ನ ವಿರುದ್ದದ ಪ್ರಕರಣವನ್ನು ಕೈಬಿಡಿ ಎಂದು ಸರ್ಕಾರವನ್ನು ಕೋರಿದ್ದಾರೆ.

20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ನೀಡಿದ್ದಕ್ಕಾಗಿ ಭಾರತ ಸರ್ಕಾರವನ್ನು ಅಭಿನಂದಿಸುತ್ತಾ, ತಾನು ಬಾಕಿ ಹಣವನ್ನು ಮರುಪಾವತಿ ಮಾಡುತ್ತೇನೆಂದು ಪದೇ ಪದೇ ಹೇಳಿದರೂ ನನ್ನ ಮಾತನ್ನು ನಿರ್ಲಕ್ಷಿಸಲಾಗಿದೆ ಎಂದು ವಿಷಾದಿಸಿದ್ದಾರೆ.

“ಕೊರೊನಾ ಪರಿಹಾರ ಪ್ಯಾಕೇಜ್‌ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಅವರು ಬಯಸಿದಷ್ಟು ಕರೆನ್ಸಿಯನ್ನು ಮುದ್ರಿಸಬಹುದು ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ 100% ಮರುಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೇ?” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...