Homeಮುಖಪುಟಇಂದು ಮುಂಬೈನ ಆರ್ಥರ್‌ ಜೈಲು ಪಾಲಾಗಲಿದ್ದಾರ ವಿಜಯ್‌ ಮಲ್ಯ?

ಇಂದು ಮುಂಬೈನ ಆರ್ಥರ್‌ ಜೈಲು ಪಾಲಾಗಲಿದ್ದಾರ ವಿಜಯ್‌ ಮಲ್ಯ?

- Advertisement -
- Advertisement -

ಬಹುಕೋಟಿ ಬ್ಯಾಂಕ್‌ ವಂಚನೆ ಆರೋಪದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದ ಉದ್ಯಮಿ ವಿಜಯ್‌ ಮಲ್ಯ ರನ್ನು ಇಂದು ಭಾರತಕ್ಕೆ ಕರೆತರುವ ಸಾಧ್ಯತೆಯಿದ್ದು ಅವರನ್ನು ಮುಂಬೈನ ಆರ್ಥರ್‌ ಜೈಲಿನಲ್ಲಿಡಲಾಗುತ್ತದೆ ಎನ್ನಲಾಗಿದೆ.

ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪಕ್ಕೆ ಒಳಗಾಗಿ ಭಾರತದಿಂದ ಲಂಡನ್‌ಗೆ ಪಲಾಯನ ಮಾಡಿದ ತಲೆ ಮರೆಸಿಕೊಂಡಿರುವ ವಿಜಯ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಭಾರತ ಸರ್ಕಾರ ಅಲ್ಲಿನ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. ಆದರೆ ವಿಜಯ ಮಲ್ಯ ತನ್ನನ್ನು ಭಾರತಕ್ಕೆ ಹಸ್ತಾಂತರಿಸದಂತೆ ಲಂಡನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅದು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಈ ಹಸ್ತಾಂತರ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ.

ಭಾರತವನ್ನು ತೊರೆದು ಮಾರ್ಚ್ 2, 2016 ರಂದು ಬ್ರಿಟನ್‌ಗೆ ಪಲಾಯನ ಮಾಡಿದ ವಿಜಯ್‌ ಮಲ್ಯ ದೇಶದ 17 ಬ್ಯಾಂಕುಗಳಿಂದ ಒಂಬತ್ತು ಸಾವಿರ ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.

ಆರ್ಥಿಕ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ ಮಲ್ಯ ಅವರನ್ನು ಲಂಡನ್ ಸರ್ಕಾರ ಭಾರತಕ್ಕೆ ಇಂದು ರಾತ್ರಿ ಹಸ್ತಾಂತರಿಸಲಿದೆ ಎಂದು ಐಎಎನ್ಎಸ್‌ ವರದಿ ಮಾಡಿದೆ.

ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವ ವಿಜಯ ಮಲ್ಯ ಅವರನ್ನು ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲೇ ವೈದ್ಯಕೀಯ ತಂಡವೊಂದು ಅವರ ಆರೋಗ್ಯ ತಪಾಸಣೆ ನಡೆಸಲಿದೆ ಎನ್ನಲಾಗಿದೆ.

ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಸಿಬಿಐ ಅಧಿಕಾರಿಗಳು ಅವರನ್ನು ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

2018 ರ ಆಗಸ್ಟ್‌ನಲ್ಲಿ ಮಲ್ಯ ಅವರ ಮನವಿಯನ್ನು ಆಲಿಸಿದ್ದ ಯುಕೆ ನ್ಯಾಯಾಲಯ ಜೈಲಿನ ವಿವರಗಳನ್ನು ಹಂಚಿಕೊಳ್ಳಲು ಭಾರತೀಯ ತನಿಖಾ ಸಂಸ್ಥೆಗಳಿಗೆ ಸೂಚಿಸಿತ್ತು. ಹೀಗಾಗಿ ಮಲ್ಯ ಅವರನ್ನು ಬಂಧಿಸುವ ಮುಂಬೈನ ಆರ್ಥರ್ ರೋಡ್ ಜೈಲಿನ ಕೋಣೆಯನ್ನು ಸಿಬಿಐ ಅಧಿಕಾರಿಗಳು ವಿಡಿಯೋ ಮಾಡಿ ಕಳುಹಿಸಿದ್ದರು. ಅಲ್ಲದೆ, ಮಲ್ಯ ಹಸ್ತಾಂತರದ ನಂತರ ಅವರನ್ನು ಇರಿಸಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದರು.
ಆರ್ಥರ್ ರೋಡ್‌ನ ಎರಡು ಎರಡು ಅಂತಸ್ತಿನ ಜೈಲು ಕಟ್ಟಡದಲ್ಲಿ ಮಲ್ಯ ಅವರನ್ನು ಉನ್ನತ ಭದ್ರತಾ ಬ್ಯಾರಕ್‌ಗಳಲ್ಲಿ ಇರಿಸಲಾಗುವುದು ಎಂದು ಯುಕೆ ನ್ಯಾಯಾಲಯಕ್ಕೆ ತಿಳಿಸಿದ್ದವು.

ಕೆಲದಿನಗಳ ಹಿಂದೆಯಷ್ಟೇ ವಿಜಯ್‌ ಮಲ್ಯ ಬ್ಯಾಂಕುಗಳ ಸಾಲ ತೀರಿಸಲು ಬದ್ಧನಿದ್ದೇನೆ. ದಯವಿಟ್ಟು ನನ್ನ ಸಾಲ ಮರುಪಾವತಿಯನ್ನು ಒಪ್ಪಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು.

ಭಾರತದಲ್ಲಿ ಹಣ ವಂಚನೆ ಮತ್ತು ಮನಿ ಲಾಂಡರಿಂಗ್ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ ತಮ್ಮ ಸಾಲದ ಬಾಕಿ ಹಣವನ್ನು ಶೇ 100 ರಷ್ಟು ಮರುಪಾವತಿಸುತ್ತೇನೆ ಹಾಗೂ ತನ್ನ ವಿರುದ್ದದ ಪ್ರಕರಣವನ್ನು ಕೈಬಿಡಿ ಎಂದು ಸರ್ಕಾರವನ್ನು ಕೋರಿದ್ದಾರೆ.

20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ನೀಡಿದ್ದಕ್ಕಾಗಿ ಭಾರತ ಸರ್ಕಾರವನ್ನು ಅಭಿನಂದಿಸುತ್ತಾ, ತಾನು ಬಾಕಿ ಹಣವನ್ನು ಮರುಪಾವತಿ ಮಾಡುತ್ತೇನೆಂದು ಪದೇ ಪದೇ ಹೇಳಿದರೂ ನನ್ನ ಮಾತನ್ನು ನಿರ್ಲಕ್ಷಿಸಲಾಗಿದೆ ಎಂದು ವಿಷಾದಿಸಿದ್ದಾರೆ.

“ಕೊರೊನಾ ಪರಿಹಾರ ಪ್ಯಾಕೇಜ್‌ಗಾಗಿ ಸರ್ಕಾರಕ್ಕೆ ಅಭಿನಂದನೆಗಳು. ಅವರು ಬಯಸಿದಷ್ಟು ಕರೆನ್ಸಿಯನ್ನು ಮುದ್ರಿಸಬಹುದು ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸಾಲಗಳ 100% ಮರುಪಾವತಿಯನ್ನು ನೀಡುವ ನನ್ನಂತಹ ಸಣ್ಣ ಕೊಡುಗೆದಾರರನ್ನು ನಿರಂತರವಾಗಿ ನಿರ್ಲಕ್ಷಿಸಬೇಕೇ?” ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಸಾಲ ತೀರಿಸುತ್ತೇನೆ, ನನ್ನ ವಿರುದ್ಧದ ಪ್ರಕರಣ ಕೈಬಿಡಿ: ವಿಜಯ್ ಮಲ್ಯ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....