Homeಮುಖಪುಟಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

ಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಹಣಬಲದಿಂದ ಅಧಿಕಾರವನ್ನು ಪಡೆಯುವವರು ವಿಧಾನಸಭೆ, ವಿಧಾನಪರಿಷತ್ ಗಳನ್ನು ಪ್ರವೇಶಿಸುತ್ತಿದ್ದಾರೆ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ದೊಡ್ಡರಂಗೇಗೌಡ ವಿಷಾದಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ‘ಸಮ್ಮೇಳನಾಧ್ಯಕ್ಷರ ಜೊತೆ ಮಾತು – ಮಂಥನ’ ಕಾರ್ಯಕ್ರಮದಲ್ಲಿ ಅವರು ಲೇಖಕರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

“ಸಂಸದೀಯ ವ್ಯವಸ್ಥೆಯಲ್ಲಿ ಚರ್ಚೆಗಳಾಗದೆ ಮಸೂದೆಗಳು ಜಾರಿಯಾಗುತ್ತಿವೆ. ಶಾಸನ ಸಭೆಯಲ್ಲಿ ಗುಣಮಟ್ಟದ ಚರ್ಚೆಗಳು ಕಂಡು ಬರುತ್ತಿಲ್ಲ’’ ಎಂಬುದನ್ನು ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಪ್ರಸ್ತಾಪಿಸಿದರು. ಮಾಜಿ ವಿಧಾನಪರಿಷತ್ ಸದಸ್ಯರೂ ಆಗಿರುವ ದೊಡ್ಡರಂಗೇಗೌಡರು ಮಾತನಾಡಿ, “ಶಾಸಕರು ಬಳಸುತ್ತಿರುವ ಭಾಷೆ ಯೋಚಿಸುವಂತಾಗಿದೆ. ಅದನ್ನು ನೋಡಿದರೆ ನೋವಾಗುತ್ತದೆ. ಹಣದ ಪ್ರಭಾವದಿಂದ ಅಧಿಕಾರವನ್ನು ಖರೀದಿಸಲಾಗುತ್ತಿದೆ. ಪಂಚೆಯನ್ನು ಎತ್ತಿಕಟ್ಟಿ, ಸದನದಲ್ಲಿಯೇ ತೊಡೆ ತಟ್ಟುತ್ತಿರುವುದಕ್ಕೆ ಏನನ್ನು ಹೇಳಬೇಕು?’’ ಎಂದು ಪ್ರಶ್ನಿಸಿದರು.

ಭ್ರಷ್ಟತೆ ಪರಮಾವಧಿಯಾಗಿರುವ ಈ ಕಾಲದಲ್ಲಿ ಪ್ರಾಮಾಣಿಕತೆಯನ್ನು ಹುಡುಕಬೇಕಿದೆ. ಪ್ರಜೆಗಳ ಹಿತಾಸಕ್ತಿ ಕಡಿಮೆಯಾಗಿ, ಸ್ವಹಿತಾಸಕ್ತಿಗಳು ಶಾಸನ ಸಭೆಗಳನ್ನು ಪ್ರವೇಶಿಸುತ್ತಿದ್ದಾರೆ. ಇಂದು ಎಸ್.ನಿಜಲಿಂಗಪ್ಪ, ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯನವರಂತಹ ಸಂಸದೀಯ ಪಟುಗಳು ಕಾಣದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೌಲ್ಯಗಳು ದಿನೇ ದಿನೇ ಅರ್ಥಕಳೆದುಕೊಳ್ಳುತ್ತಿವೆ. ದುಡ್ಡಿರುವವರು ಗೆದ್ದುಬರುತ್ತಾರೆ ಎಂದು ಟೀಕಿಸಿದರು.

ಸಂವಿಧಾನ ವಿರೋಧಿಯಾದ ಭಾಷೆಯನ್ನು ಶಾಸಕರು ಬಳಸುತ್ತಿದ್ದಾರೆ. ನಡೆದುಕೊಳ್ಳಬಾರದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ವ್ಯವಸ್ಥೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ವ್ಯಕ್ತಿತ್ವಕ್ಕೆ ಕಳಂಕ. ಆದರೆ ಇಡೀ ವಿಶ್ವದಲ್ಲೇ ಭ್ರಷ್ಟತೆ ಆಕ್ರಮಿಸಿಕೊಂಡು ಕಾಡುತ್ತಿದೆ. ಇದನ್ನು ಬೇರು ಸಹಿತ ಕಿತ್ತುಹಾಕಬೇಕಾದರೆ ಕ್ರಾಂತಿಯಾಗಬೇಕು. ಕ್ರಾಂತಿ ಎಂದರೆ ವ್ಯಕ್ತಿಗಳಲ್ಲಿ ಅರಿವನ್ನು ಮೂಡಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಲೇಖಕ ಅಂಜನ್ ಶೆಟ್ಟಿಯವರು ಶಾಸನ ಸಭೆಗಳ ಕುರಿತು ಪ್ರಶ್ನೆಯನ್ನು ಮುಂದುವರಿಸಿದಾಗ, ‘ಕಲೆ ಸಾಹಿತ್ಯದಂತಹ ನಾಮನಿರ್ದೇಶಿತ ಸ್ಥಾನಗಳಿಗೆ ಆ ಕ್ಷೇತ್ರದಲ್ಲಿ ಸೇವೆ ಸಲ್ಲಿಸದವರು ಪ್ರವೇಶಿಸುತ್ತಿದ್ದಾರೆ. ಒಂದು ಕ್ಷೇತ್ರವನ್ನು ಇನ್ನೊಂದು ಕ್ಷೇತ್ರದವರು ಅತಿಕ್ರಮಣ ಮಾಡುವುದು ದುರಂತ. ಇಂಥವರ  ಆಯ್ಕೆಗಳು ರಾಜ್ಯಪಾಲರ ಅಂಕಿತ ದೊರಕುತ್ತಿದೆ’’ ಎಂದು ವಿಷಾದಿಸಿದರು.

ಲೇಖಕಿ ಸಂಕಮ್ಮ ಜಿ.ಸಂಕಣ್ಣನವರ ಮಾತನಾಡಿ, ಚಿತ್ರ ಸಾಹಿತ್ಯ ಹಾಗೂ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ತಿಳಿಸಬೇಕೆಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ದೊಡ್ಡರಂಗೇಗೌಡರು, “ಒಂದು ಸಿನಿಮಾಕ್ಕೆ ಸಾಹಿತ್ಯ ರಚಿಸುವಾಗ ನಿರ್ದೇಶಕ, ನಿರ್ಮಾಪಕ ಹೇಳಿದ ಸನ್ನಿವೇಶಕ್ಕೆ ಸೂಕ್ತವಾಗಿ ಬರೆಯಬೇಕು. ಸಂಗೀತ, ಸ್ವರ ಪ್ರಸ್ತಾವವನ್ನು ತಿಳಿದು ಬರೆಯುತ್ತೇವೆ. ಒಮ್ಮೆ ಸುಲಭ ಸನ್ನಿವೇಶ ಸಿಗಬಹುದು, ಕೆಲವೊಮ್ಮೆ ಕ್ಲಿಷ್ಟ ಸನ್ನಿವೇಶ ಸಿಗಬಹುದು. ಆದರೆ ಸಾಹಿತ್ಯದಲ್ಲಿ ಕವಿಗೆ ನಿರ್ಬಂಧ ಇರುವುದಿಲ್ಲ. ತನ್ನ ಕಲ್ಪನಾ ಲೋಕದಲ್ಲಿ ಕವಿ ಬರೆಯಬಹುದು. ಸಮುದ್ರದ ಅಲೆಗಳಂತೆ ಭಾವನೆಗಳು ಬರುತ್ತವೆ. ಅಲ್ಲಿ ಸ್ವಂತಿಕೆಯನ್ನು ಪ್ರದರ್ಶಿಸಬಹುದು” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಾಲತೇಶ ಅಂಗೂರ ಅವರು ಪ್ರಶ್ನಿಸಿ, “ಗೋಕಾಕ್ ಚಳವಳಿಯ ನಂತರದಲ್ಲಿ ಅಂತಹದೊಂದು ಕನ್ನಡದ ಚಳವಳಿ ಮತ್ತೆ ಹುಟ್ಟಲಿಲ್ಲ’’ ಎಂದು ಪ್ರಸ್ತಾಪಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸರ್ವಾಧ್ಯಕ್ಷರು, “ಗೋಕಾಕ್ ಚಳವಳಿಗಿಂತ ಮೀರಿದ ಚಳವಳಿ ಅಗತ್ಯವಿದೆ’’ ಎಂದರು.

ಡಾ.ಶಾರದಾ ಮುಳ್ಳೂರು ಅವರು ದೊಡ್ಡರಂಗೇಗೌಡರ ಸಾಹಿತ್ಯ ಬೇರೆ ಬೇರೆ ಭಾಷೆಗಳಿಗೆ ಅನುವಾದವಾಗಿದ್ದರ ಕುರಿತು ಮಾತನಾಡಿದರು. ಇತರ ಲೇಖಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...