Homeಮುಖಪುಟಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

ಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಹಣಬಲದಿಂದ ಅಧಿಕಾರವನ್ನು ಪಡೆಯುವವರು ವಿಧಾನಸಭೆ, ವಿಧಾನಪರಿಷತ್ ಗಳನ್ನು ಪ್ರವೇಶಿಸುತ್ತಿದ್ದಾರೆ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ದೊಡ್ಡರಂಗೇಗೌಡ ವಿಷಾದಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ‘ಸಮ್ಮೇಳನಾಧ್ಯಕ್ಷರ ಜೊತೆ ಮಾತು – ಮಂಥನ’ ಕಾರ್ಯಕ್ರಮದಲ್ಲಿ ಅವರು ಲೇಖಕರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

“ಸಂಸದೀಯ ವ್ಯವಸ್ಥೆಯಲ್ಲಿ ಚರ್ಚೆಗಳಾಗದೆ ಮಸೂದೆಗಳು ಜಾರಿಯಾಗುತ್ತಿವೆ. ಶಾಸನ ಸಭೆಯಲ್ಲಿ ಗುಣಮಟ್ಟದ ಚರ್ಚೆಗಳು ಕಂಡು ಬರುತ್ತಿಲ್ಲ’’ ಎಂಬುದನ್ನು ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಪ್ರಸ್ತಾಪಿಸಿದರು. ಮಾಜಿ ವಿಧಾನಪರಿಷತ್ ಸದಸ್ಯರೂ ಆಗಿರುವ ದೊಡ್ಡರಂಗೇಗೌಡರು ಮಾತನಾಡಿ, “ಶಾಸಕರು ಬಳಸುತ್ತಿರುವ ಭಾಷೆ ಯೋಚಿಸುವಂತಾಗಿದೆ. ಅದನ್ನು ನೋಡಿದರೆ ನೋವಾಗುತ್ತದೆ. ಹಣದ ಪ್ರಭಾವದಿಂದ ಅಧಿಕಾರವನ್ನು ಖರೀದಿಸಲಾಗುತ್ತಿದೆ. ಪಂಚೆಯನ್ನು ಎತ್ತಿಕಟ್ಟಿ, ಸದನದಲ್ಲಿಯೇ ತೊಡೆ ತಟ್ಟುತ್ತಿರುವುದಕ್ಕೆ ಏನನ್ನು ಹೇಳಬೇಕು?’’ ಎಂದು ಪ್ರಶ್ನಿಸಿದರು.

ಭ್ರಷ್ಟತೆ ಪರಮಾವಧಿಯಾಗಿರುವ ಈ ಕಾಲದಲ್ಲಿ ಪ್ರಾಮಾಣಿಕತೆಯನ್ನು ಹುಡುಕಬೇಕಿದೆ. ಪ್ರಜೆಗಳ ಹಿತಾಸಕ್ತಿ ಕಡಿಮೆಯಾಗಿ, ಸ್ವಹಿತಾಸಕ್ತಿಗಳು ಶಾಸನ ಸಭೆಗಳನ್ನು ಪ್ರವೇಶಿಸುತ್ತಿದ್ದಾರೆ. ಇಂದು ಎಸ್.ನಿಜಲಿಂಗಪ್ಪ, ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯನವರಂತಹ ಸಂಸದೀಯ ಪಟುಗಳು ಕಾಣದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೌಲ್ಯಗಳು ದಿನೇ ದಿನೇ ಅರ್ಥಕಳೆದುಕೊಳ್ಳುತ್ತಿವೆ. ದುಡ್ಡಿರುವವರು ಗೆದ್ದುಬರುತ್ತಾರೆ ಎಂದು ಟೀಕಿಸಿದರು.

ಸಂವಿಧಾನ ವಿರೋಧಿಯಾದ ಭಾಷೆಯನ್ನು ಶಾಸಕರು ಬಳಸುತ್ತಿದ್ದಾರೆ. ನಡೆದುಕೊಳ್ಳಬಾರದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ವ್ಯವಸ್ಥೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ವ್ಯಕ್ತಿತ್ವಕ್ಕೆ ಕಳಂಕ. ಆದರೆ ಇಡೀ ವಿಶ್ವದಲ್ಲೇ ಭ್ರಷ್ಟತೆ ಆಕ್ರಮಿಸಿಕೊಂಡು ಕಾಡುತ್ತಿದೆ. ಇದನ್ನು ಬೇರು ಸಹಿತ ಕಿತ್ತುಹಾಕಬೇಕಾದರೆ ಕ್ರಾಂತಿಯಾಗಬೇಕು. ಕ್ರಾಂತಿ ಎಂದರೆ ವ್ಯಕ್ತಿಗಳಲ್ಲಿ ಅರಿವನ್ನು ಮೂಡಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಲೇಖಕ ಅಂಜನ್ ಶೆಟ್ಟಿಯವರು ಶಾಸನ ಸಭೆಗಳ ಕುರಿತು ಪ್ರಶ್ನೆಯನ್ನು ಮುಂದುವರಿಸಿದಾಗ, ‘ಕಲೆ ಸಾಹಿತ್ಯದಂತಹ ನಾಮನಿರ್ದೇಶಿತ ಸ್ಥಾನಗಳಿಗೆ ಆ ಕ್ಷೇತ್ರದಲ್ಲಿ ಸೇವೆ ಸಲ್ಲಿಸದವರು ಪ್ರವೇಶಿಸುತ್ತಿದ್ದಾರೆ. ಒಂದು ಕ್ಷೇತ್ರವನ್ನು ಇನ್ನೊಂದು ಕ್ಷೇತ್ರದವರು ಅತಿಕ್ರಮಣ ಮಾಡುವುದು ದುರಂತ. ಇಂಥವರ  ಆಯ್ಕೆಗಳು ರಾಜ್ಯಪಾಲರ ಅಂಕಿತ ದೊರಕುತ್ತಿದೆ’’ ಎಂದು ವಿಷಾದಿಸಿದರು.

ಲೇಖಕಿ ಸಂಕಮ್ಮ ಜಿ.ಸಂಕಣ್ಣನವರ ಮಾತನಾಡಿ, ಚಿತ್ರ ಸಾಹಿತ್ಯ ಹಾಗೂ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ತಿಳಿಸಬೇಕೆಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ದೊಡ್ಡರಂಗೇಗೌಡರು, “ಒಂದು ಸಿನಿಮಾಕ್ಕೆ ಸಾಹಿತ್ಯ ರಚಿಸುವಾಗ ನಿರ್ದೇಶಕ, ನಿರ್ಮಾಪಕ ಹೇಳಿದ ಸನ್ನಿವೇಶಕ್ಕೆ ಸೂಕ್ತವಾಗಿ ಬರೆಯಬೇಕು. ಸಂಗೀತ, ಸ್ವರ ಪ್ರಸ್ತಾವವನ್ನು ತಿಳಿದು ಬರೆಯುತ್ತೇವೆ. ಒಮ್ಮೆ ಸುಲಭ ಸನ್ನಿವೇಶ ಸಿಗಬಹುದು, ಕೆಲವೊಮ್ಮೆ ಕ್ಲಿಷ್ಟ ಸನ್ನಿವೇಶ ಸಿಗಬಹುದು. ಆದರೆ ಸಾಹಿತ್ಯದಲ್ಲಿ ಕವಿಗೆ ನಿರ್ಬಂಧ ಇರುವುದಿಲ್ಲ. ತನ್ನ ಕಲ್ಪನಾ ಲೋಕದಲ್ಲಿ ಕವಿ ಬರೆಯಬಹುದು. ಸಮುದ್ರದ ಅಲೆಗಳಂತೆ ಭಾವನೆಗಳು ಬರುತ್ತವೆ. ಅಲ್ಲಿ ಸ್ವಂತಿಕೆಯನ್ನು ಪ್ರದರ್ಶಿಸಬಹುದು” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಾಲತೇಶ ಅಂಗೂರ ಅವರು ಪ್ರಶ್ನಿಸಿ, “ಗೋಕಾಕ್ ಚಳವಳಿಯ ನಂತರದಲ್ಲಿ ಅಂತಹದೊಂದು ಕನ್ನಡದ ಚಳವಳಿ ಮತ್ತೆ ಹುಟ್ಟಲಿಲ್ಲ’’ ಎಂದು ಪ್ರಸ್ತಾಪಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸರ್ವಾಧ್ಯಕ್ಷರು, “ಗೋಕಾಕ್ ಚಳವಳಿಗಿಂತ ಮೀರಿದ ಚಳವಳಿ ಅಗತ್ಯವಿದೆ’’ ಎಂದರು.

ಡಾ.ಶಾರದಾ ಮುಳ್ಳೂರು ಅವರು ದೊಡ್ಡರಂಗೇಗೌಡರ ಸಾಹಿತ್ಯ ಬೇರೆ ಬೇರೆ ಭಾಷೆಗಳಿಗೆ ಅನುವಾದವಾಗಿದ್ದರ ಕುರಿತು ಮಾತನಾಡಿದರು. ಇತರ ಲೇಖಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...