Homeಮುಖಪುಟಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

ಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಹಣಬಲದಿಂದ ಅಧಿಕಾರವನ್ನು ಪಡೆಯುವವರು ವಿಧಾನಸಭೆ, ವಿಧಾನಪರಿಷತ್ ಗಳನ್ನು ಪ್ರವೇಶಿಸುತ್ತಿದ್ದಾರೆ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ದೊಡ್ಡರಂಗೇಗೌಡ ವಿಷಾದಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ‘ಸಮ್ಮೇಳನಾಧ್ಯಕ್ಷರ ಜೊತೆ ಮಾತು – ಮಂಥನ’ ಕಾರ್ಯಕ್ರಮದಲ್ಲಿ ಅವರು ಲೇಖಕರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

“ಸಂಸದೀಯ ವ್ಯವಸ್ಥೆಯಲ್ಲಿ ಚರ್ಚೆಗಳಾಗದೆ ಮಸೂದೆಗಳು ಜಾರಿಯಾಗುತ್ತಿವೆ. ಶಾಸನ ಸಭೆಯಲ್ಲಿ ಗುಣಮಟ್ಟದ ಚರ್ಚೆಗಳು ಕಂಡು ಬರುತ್ತಿಲ್ಲ’’ ಎಂಬುದನ್ನು ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಪ್ರಸ್ತಾಪಿಸಿದರು. ಮಾಜಿ ವಿಧಾನಪರಿಷತ್ ಸದಸ್ಯರೂ ಆಗಿರುವ ದೊಡ್ಡರಂಗೇಗೌಡರು ಮಾತನಾಡಿ, “ಶಾಸಕರು ಬಳಸುತ್ತಿರುವ ಭಾಷೆ ಯೋಚಿಸುವಂತಾಗಿದೆ. ಅದನ್ನು ನೋಡಿದರೆ ನೋವಾಗುತ್ತದೆ. ಹಣದ ಪ್ರಭಾವದಿಂದ ಅಧಿಕಾರವನ್ನು ಖರೀದಿಸಲಾಗುತ್ತಿದೆ. ಪಂಚೆಯನ್ನು ಎತ್ತಿಕಟ್ಟಿ, ಸದನದಲ್ಲಿಯೇ ತೊಡೆ ತಟ್ಟುತ್ತಿರುವುದಕ್ಕೆ ಏನನ್ನು ಹೇಳಬೇಕು?’’ ಎಂದು ಪ್ರಶ್ನಿಸಿದರು.

ಭ್ರಷ್ಟತೆ ಪರಮಾವಧಿಯಾಗಿರುವ ಈ ಕಾಲದಲ್ಲಿ ಪ್ರಾಮಾಣಿಕತೆಯನ್ನು ಹುಡುಕಬೇಕಿದೆ. ಪ್ರಜೆಗಳ ಹಿತಾಸಕ್ತಿ ಕಡಿಮೆಯಾಗಿ, ಸ್ವಹಿತಾಸಕ್ತಿಗಳು ಶಾಸನ ಸಭೆಗಳನ್ನು ಪ್ರವೇಶಿಸುತ್ತಿದ್ದಾರೆ. ಇಂದು ಎಸ್.ನಿಜಲಿಂಗಪ್ಪ, ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯನವರಂತಹ ಸಂಸದೀಯ ಪಟುಗಳು ಕಾಣದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೌಲ್ಯಗಳು ದಿನೇ ದಿನೇ ಅರ್ಥಕಳೆದುಕೊಳ್ಳುತ್ತಿವೆ. ದುಡ್ಡಿರುವವರು ಗೆದ್ದುಬರುತ್ತಾರೆ ಎಂದು ಟೀಕಿಸಿದರು.

ಸಂವಿಧಾನ ವಿರೋಧಿಯಾದ ಭಾಷೆಯನ್ನು ಶಾಸಕರು ಬಳಸುತ್ತಿದ್ದಾರೆ. ನಡೆದುಕೊಳ್ಳಬಾರದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ವ್ಯವಸ್ಥೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ವ್ಯಕ್ತಿತ್ವಕ್ಕೆ ಕಳಂಕ. ಆದರೆ ಇಡೀ ವಿಶ್ವದಲ್ಲೇ ಭ್ರಷ್ಟತೆ ಆಕ್ರಮಿಸಿಕೊಂಡು ಕಾಡುತ್ತಿದೆ. ಇದನ್ನು ಬೇರು ಸಹಿತ ಕಿತ್ತುಹಾಕಬೇಕಾದರೆ ಕ್ರಾಂತಿಯಾಗಬೇಕು. ಕ್ರಾಂತಿ ಎಂದರೆ ವ್ಯಕ್ತಿಗಳಲ್ಲಿ ಅರಿವನ್ನು ಮೂಡಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಲೇಖಕ ಅಂಜನ್ ಶೆಟ್ಟಿಯವರು ಶಾಸನ ಸಭೆಗಳ ಕುರಿತು ಪ್ರಶ್ನೆಯನ್ನು ಮುಂದುವರಿಸಿದಾಗ, ‘ಕಲೆ ಸಾಹಿತ್ಯದಂತಹ ನಾಮನಿರ್ದೇಶಿತ ಸ್ಥಾನಗಳಿಗೆ ಆ ಕ್ಷೇತ್ರದಲ್ಲಿ ಸೇವೆ ಸಲ್ಲಿಸದವರು ಪ್ರವೇಶಿಸುತ್ತಿದ್ದಾರೆ. ಒಂದು ಕ್ಷೇತ್ರವನ್ನು ಇನ್ನೊಂದು ಕ್ಷೇತ್ರದವರು ಅತಿಕ್ರಮಣ ಮಾಡುವುದು ದುರಂತ. ಇಂಥವರ  ಆಯ್ಕೆಗಳು ರಾಜ್ಯಪಾಲರ ಅಂಕಿತ ದೊರಕುತ್ತಿದೆ’’ ಎಂದು ವಿಷಾದಿಸಿದರು.

ಲೇಖಕಿ ಸಂಕಮ್ಮ ಜಿ.ಸಂಕಣ್ಣನವರ ಮಾತನಾಡಿ, ಚಿತ್ರ ಸಾಹಿತ್ಯ ಹಾಗೂ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ತಿಳಿಸಬೇಕೆಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ದೊಡ್ಡರಂಗೇಗೌಡರು, “ಒಂದು ಸಿನಿಮಾಕ್ಕೆ ಸಾಹಿತ್ಯ ರಚಿಸುವಾಗ ನಿರ್ದೇಶಕ, ನಿರ್ಮಾಪಕ ಹೇಳಿದ ಸನ್ನಿವೇಶಕ್ಕೆ ಸೂಕ್ತವಾಗಿ ಬರೆಯಬೇಕು. ಸಂಗೀತ, ಸ್ವರ ಪ್ರಸ್ತಾವವನ್ನು ತಿಳಿದು ಬರೆಯುತ್ತೇವೆ. ಒಮ್ಮೆ ಸುಲಭ ಸನ್ನಿವೇಶ ಸಿಗಬಹುದು, ಕೆಲವೊಮ್ಮೆ ಕ್ಲಿಷ್ಟ ಸನ್ನಿವೇಶ ಸಿಗಬಹುದು. ಆದರೆ ಸಾಹಿತ್ಯದಲ್ಲಿ ಕವಿಗೆ ನಿರ್ಬಂಧ ಇರುವುದಿಲ್ಲ. ತನ್ನ ಕಲ್ಪನಾ ಲೋಕದಲ್ಲಿ ಕವಿ ಬರೆಯಬಹುದು. ಸಮುದ್ರದ ಅಲೆಗಳಂತೆ ಭಾವನೆಗಳು ಬರುತ್ತವೆ. ಅಲ್ಲಿ ಸ್ವಂತಿಕೆಯನ್ನು ಪ್ರದರ್ಶಿಸಬಹುದು” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಾಲತೇಶ ಅಂಗೂರ ಅವರು ಪ್ರಶ್ನಿಸಿ, “ಗೋಕಾಕ್ ಚಳವಳಿಯ ನಂತರದಲ್ಲಿ ಅಂತಹದೊಂದು ಕನ್ನಡದ ಚಳವಳಿ ಮತ್ತೆ ಹುಟ್ಟಲಿಲ್ಲ’’ ಎಂದು ಪ್ರಸ್ತಾಪಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸರ್ವಾಧ್ಯಕ್ಷರು, “ಗೋಕಾಕ್ ಚಳವಳಿಗಿಂತ ಮೀರಿದ ಚಳವಳಿ ಅಗತ್ಯವಿದೆ’’ ಎಂದರು.

ಡಾ.ಶಾರದಾ ಮುಳ್ಳೂರು ಅವರು ದೊಡ್ಡರಂಗೇಗೌಡರ ಸಾಹಿತ್ಯ ಬೇರೆ ಬೇರೆ ಭಾಷೆಗಳಿಗೆ ಅನುವಾದವಾಗಿದ್ದರ ಕುರಿತು ಮಾತನಾಡಿದರು. ಇತರ ಲೇಖಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...