Homeಮುಖಪುಟಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

ಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಹಣಬಲದಿಂದ ಅಧಿಕಾರವನ್ನು ಪಡೆಯುವವರು ವಿಧಾನಸಭೆ, ವಿಧಾನಪರಿಷತ್ ಗಳನ್ನು ಪ್ರವೇಶಿಸುತ್ತಿದ್ದಾರೆ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ದೊಡ್ಡರಂಗೇಗೌಡ ವಿಷಾದಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ‘ಸಮ್ಮೇಳನಾಧ್ಯಕ್ಷರ ಜೊತೆ ಮಾತು – ಮಂಥನ’ ಕಾರ್ಯಕ್ರಮದಲ್ಲಿ ಅವರು ಲೇಖಕರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

“ಸಂಸದೀಯ ವ್ಯವಸ್ಥೆಯಲ್ಲಿ ಚರ್ಚೆಗಳಾಗದೆ ಮಸೂದೆಗಳು ಜಾರಿಯಾಗುತ್ತಿವೆ. ಶಾಸನ ಸಭೆಯಲ್ಲಿ ಗುಣಮಟ್ಟದ ಚರ್ಚೆಗಳು ಕಂಡು ಬರುತ್ತಿಲ್ಲ’’ ಎಂಬುದನ್ನು ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಪ್ರಸ್ತಾಪಿಸಿದರು. ಮಾಜಿ ವಿಧಾನಪರಿಷತ್ ಸದಸ್ಯರೂ ಆಗಿರುವ ದೊಡ್ಡರಂಗೇಗೌಡರು ಮಾತನಾಡಿ, “ಶಾಸಕರು ಬಳಸುತ್ತಿರುವ ಭಾಷೆ ಯೋಚಿಸುವಂತಾಗಿದೆ. ಅದನ್ನು ನೋಡಿದರೆ ನೋವಾಗುತ್ತದೆ. ಹಣದ ಪ್ರಭಾವದಿಂದ ಅಧಿಕಾರವನ್ನು ಖರೀದಿಸಲಾಗುತ್ತಿದೆ. ಪಂಚೆಯನ್ನು ಎತ್ತಿಕಟ್ಟಿ, ಸದನದಲ್ಲಿಯೇ ತೊಡೆ ತಟ್ಟುತ್ತಿರುವುದಕ್ಕೆ ಏನನ್ನು ಹೇಳಬೇಕು?’’ ಎಂದು ಪ್ರಶ್ನಿಸಿದರು.

ಭ್ರಷ್ಟತೆ ಪರಮಾವಧಿಯಾಗಿರುವ ಈ ಕಾಲದಲ್ಲಿ ಪ್ರಾಮಾಣಿಕತೆಯನ್ನು ಹುಡುಕಬೇಕಿದೆ. ಪ್ರಜೆಗಳ ಹಿತಾಸಕ್ತಿ ಕಡಿಮೆಯಾಗಿ, ಸ್ವಹಿತಾಸಕ್ತಿಗಳು ಶಾಸನ ಸಭೆಗಳನ್ನು ಪ್ರವೇಶಿಸುತ್ತಿದ್ದಾರೆ. ಇಂದು ಎಸ್.ನಿಜಲಿಂಗಪ್ಪ, ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯನವರಂತಹ ಸಂಸದೀಯ ಪಟುಗಳು ಕಾಣದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೌಲ್ಯಗಳು ದಿನೇ ದಿನೇ ಅರ್ಥಕಳೆದುಕೊಳ್ಳುತ್ತಿವೆ. ದುಡ್ಡಿರುವವರು ಗೆದ್ದುಬರುತ್ತಾರೆ ಎಂದು ಟೀಕಿಸಿದರು.

ಸಂವಿಧಾನ ವಿರೋಧಿಯಾದ ಭಾಷೆಯನ್ನು ಶಾಸಕರು ಬಳಸುತ್ತಿದ್ದಾರೆ. ನಡೆದುಕೊಳ್ಳಬಾರದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ವ್ಯವಸ್ಥೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ವ್ಯಕ್ತಿತ್ವಕ್ಕೆ ಕಳಂಕ. ಆದರೆ ಇಡೀ ವಿಶ್ವದಲ್ಲೇ ಭ್ರಷ್ಟತೆ ಆಕ್ರಮಿಸಿಕೊಂಡು ಕಾಡುತ್ತಿದೆ. ಇದನ್ನು ಬೇರು ಸಹಿತ ಕಿತ್ತುಹಾಕಬೇಕಾದರೆ ಕ್ರಾಂತಿಯಾಗಬೇಕು. ಕ್ರಾಂತಿ ಎಂದರೆ ವ್ಯಕ್ತಿಗಳಲ್ಲಿ ಅರಿವನ್ನು ಮೂಡಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಲೇಖಕ ಅಂಜನ್ ಶೆಟ್ಟಿಯವರು ಶಾಸನ ಸಭೆಗಳ ಕುರಿತು ಪ್ರಶ್ನೆಯನ್ನು ಮುಂದುವರಿಸಿದಾಗ, ‘ಕಲೆ ಸಾಹಿತ್ಯದಂತಹ ನಾಮನಿರ್ದೇಶಿತ ಸ್ಥಾನಗಳಿಗೆ ಆ ಕ್ಷೇತ್ರದಲ್ಲಿ ಸೇವೆ ಸಲ್ಲಿಸದವರು ಪ್ರವೇಶಿಸುತ್ತಿದ್ದಾರೆ. ಒಂದು ಕ್ಷೇತ್ರವನ್ನು ಇನ್ನೊಂದು ಕ್ಷೇತ್ರದವರು ಅತಿಕ್ರಮಣ ಮಾಡುವುದು ದುರಂತ. ಇಂಥವರ  ಆಯ್ಕೆಗಳು ರಾಜ್ಯಪಾಲರ ಅಂಕಿತ ದೊರಕುತ್ತಿದೆ’’ ಎಂದು ವಿಷಾದಿಸಿದರು.

ಲೇಖಕಿ ಸಂಕಮ್ಮ ಜಿ.ಸಂಕಣ್ಣನವರ ಮಾತನಾಡಿ, ಚಿತ್ರ ಸಾಹಿತ್ಯ ಹಾಗೂ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ತಿಳಿಸಬೇಕೆಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ದೊಡ್ಡರಂಗೇಗೌಡರು, “ಒಂದು ಸಿನಿಮಾಕ್ಕೆ ಸಾಹಿತ್ಯ ರಚಿಸುವಾಗ ನಿರ್ದೇಶಕ, ನಿರ್ಮಾಪಕ ಹೇಳಿದ ಸನ್ನಿವೇಶಕ್ಕೆ ಸೂಕ್ತವಾಗಿ ಬರೆಯಬೇಕು. ಸಂಗೀತ, ಸ್ವರ ಪ್ರಸ್ತಾವವನ್ನು ತಿಳಿದು ಬರೆಯುತ್ತೇವೆ. ಒಮ್ಮೆ ಸುಲಭ ಸನ್ನಿವೇಶ ಸಿಗಬಹುದು, ಕೆಲವೊಮ್ಮೆ ಕ್ಲಿಷ್ಟ ಸನ್ನಿವೇಶ ಸಿಗಬಹುದು. ಆದರೆ ಸಾಹಿತ್ಯದಲ್ಲಿ ಕವಿಗೆ ನಿರ್ಬಂಧ ಇರುವುದಿಲ್ಲ. ತನ್ನ ಕಲ್ಪನಾ ಲೋಕದಲ್ಲಿ ಕವಿ ಬರೆಯಬಹುದು. ಸಮುದ್ರದ ಅಲೆಗಳಂತೆ ಭಾವನೆಗಳು ಬರುತ್ತವೆ. ಅಲ್ಲಿ ಸ್ವಂತಿಕೆಯನ್ನು ಪ್ರದರ್ಶಿಸಬಹುದು” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಾಲತೇಶ ಅಂಗೂರ ಅವರು ಪ್ರಶ್ನಿಸಿ, “ಗೋಕಾಕ್ ಚಳವಳಿಯ ನಂತರದಲ್ಲಿ ಅಂತಹದೊಂದು ಕನ್ನಡದ ಚಳವಳಿ ಮತ್ತೆ ಹುಟ್ಟಲಿಲ್ಲ’’ ಎಂದು ಪ್ರಸ್ತಾಪಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸರ್ವಾಧ್ಯಕ್ಷರು, “ಗೋಕಾಕ್ ಚಳವಳಿಗಿಂತ ಮೀರಿದ ಚಳವಳಿ ಅಗತ್ಯವಿದೆ’’ ಎಂದರು.

ಡಾ.ಶಾರದಾ ಮುಳ್ಳೂರು ಅವರು ದೊಡ್ಡರಂಗೇಗೌಡರ ಸಾಹಿತ್ಯ ಬೇರೆ ಬೇರೆ ಭಾಷೆಗಳಿಗೆ ಅನುವಾದವಾಗಿದ್ದರ ಕುರಿತು ಮಾತನಾಡಿದರು. ಇತರ ಲೇಖಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...