Homeಮುಖಪುಟಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

ಹಣ ಬಲದಿಂದ ಅಧಿಕಾರ ಖರೀದಿಸುತ್ತಿದ್ದಾರೆ: ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದಲ್ಲಿ ದೊಡ್ಡರಂಗೇಗೌಡರ ವಿಷಾದ

- Advertisement -
- Advertisement -

ಇತ್ತೀಚಿನ ವರ್ಷಗಳಲ್ಲಿ ಹಣಬಲದಿಂದ ಅಧಿಕಾರವನ್ನು ಪಡೆಯುವವರು ವಿಧಾನಸಭೆ, ವಿಧಾನಪರಿಷತ್ ಗಳನ್ನು ಪ್ರವೇಶಿಸುತ್ತಿದ್ದಾರೆ ಎಂದು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ದೊಡ್ಡರಂಗೇಗೌಡ ವಿಷಾದಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ‘ಸಮ್ಮೇಳನಾಧ್ಯಕ್ಷರ ಜೊತೆ ಮಾತು – ಮಂಥನ’ ಕಾರ್ಯಕ್ರಮದಲ್ಲಿ ಅವರು ಲೇಖಕರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

“ಸಂಸದೀಯ ವ್ಯವಸ್ಥೆಯಲ್ಲಿ ಚರ್ಚೆಗಳಾಗದೆ ಮಸೂದೆಗಳು ಜಾರಿಯಾಗುತ್ತಿವೆ. ಶಾಸನ ಸಭೆಯಲ್ಲಿ ಗುಣಮಟ್ಟದ ಚರ್ಚೆಗಳು ಕಂಡು ಬರುತ್ತಿಲ್ಲ’’ ಎಂಬುದನ್ನು ಪತ್ರಕರ್ತ ರುದ್ರಣ್ಣ ಹರ್ತಿಕೋಟೆ ಪ್ರಸ್ತಾಪಿಸಿದರು. ಮಾಜಿ ವಿಧಾನಪರಿಷತ್ ಸದಸ್ಯರೂ ಆಗಿರುವ ದೊಡ್ಡರಂಗೇಗೌಡರು ಮಾತನಾಡಿ, “ಶಾಸಕರು ಬಳಸುತ್ತಿರುವ ಭಾಷೆ ಯೋಚಿಸುವಂತಾಗಿದೆ. ಅದನ್ನು ನೋಡಿದರೆ ನೋವಾಗುತ್ತದೆ. ಹಣದ ಪ್ರಭಾವದಿಂದ ಅಧಿಕಾರವನ್ನು ಖರೀದಿಸಲಾಗುತ್ತಿದೆ. ಪಂಚೆಯನ್ನು ಎತ್ತಿಕಟ್ಟಿ, ಸದನದಲ್ಲಿಯೇ ತೊಡೆ ತಟ್ಟುತ್ತಿರುವುದಕ್ಕೆ ಏನನ್ನು ಹೇಳಬೇಕು?’’ ಎಂದು ಪ್ರಶ್ನಿಸಿದರು.

ಭ್ರಷ್ಟತೆ ಪರಮಾವಧಿಯಾಗಿರುವ ಈ ಕಾಲದಲ್ಲಿ ಪ್ರಾಮಾಣಿಕತೆಯನ್ನು ಹುಡುಕಬೇಕಿದೆ. ಪ್ರಜೆಗಳ ಹಿತಾಸಕ್ತಿ ಕಡಿಮೆಯಾಗಿ, ಸ್ವಹಿತಾಸಕ್ತಿಗಳು ಶಾಸನ ಸಭೆಗಳನ್ನು ಪ್ರವೇಶಿಸುತ್ತಿದ್ದಾರೆ. ಇಂದು ಎಸ್.ನಿಜಲಿಂಗಪ್ಪ, ಕಡಿದಾಳು ಮಂಜಪ್ಪ, ಕೆಂಗಲ್ ಹನುಮಂತಯ್ಯನವರಂತಹ ಸಂಸದೀಯ ಪಟುಗಳು ಕಾಣದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮೌಲ್ಯಗಳು ದಿನೇ ದಿನೇ ಅರ್ಥಕಳೆದುಕೊಳ್ಳುತ್ತಿವೆ. ದುಡ್ಡಿರುವವರು ಗೆದ್ದುಬರುತ್ತಾರೆ ಎಂದು ಟೀಕಿಸಿದರು.

ಸಂವಿಧಾನ ವಿರೋಧಿಯಾದ ಭಾಷೆಯನ್ನು ಶಾಸಕರು ಬಳಸುತ್ತಿದ್ದಾರೆ. ನಡೆದುಕೊಳ್ಳಬಾರದ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ವ್ಯವಸ್ಥೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದು ವ್ಯಕ್ತಿತ್ವಕ್ಕೆ ಕಳಂಕ. ಆದರೆ ಇಡೀ ವಿಶ್ವದಲ್ಲೇ ಭ್ರಷ್ಟತೆ ಆಕ್ರಮಿಸಿಕೊಂಡು ಕಾಡುತ್ತಿದೆ. ಇದನ್ನು ಬೇರು ಸಹಿತ ಕಿತ್ತುಹಾಕಬೇಕಾದರೆ ಕ್ರಾಂತಿಯಾಗಬೇಕು. ಕ್ರಾಂತಿ ಎಂದರೆ ವ್ಯಕ್ತಿಗಳಲ್ಲಿ ಅರಿವನ್ನು ಮೂಡಿಸುವುದಾಗಿದೆ ಎಂದು ಅಭಿಪ್ರಾಯಪಟ್ಟರು.

ಲೇಖಕ ಅಂಜನ್ ಶೆಟ್ಟಿಯವರು ಶಾಸನ ಸಭೆಗಳ ಕುರಿತು ಪ್ರಶ್ನೆಯನ್ನು ಮುಂದುವರಿಸಿದಾಗ, ‘ಕಲೆ ಸಾಹಿತ್ಯದಂತಹ ನಾಮನಿರ್ದೇಶಿತ ಸ್ಥಾನಗಳಿಗೆ ಆ ಕ್ಷೇತ್ರದಲ್ಲಿ ಸೇವೆ ಸಲ್ಲಿಸದವರು ಪ್ರವೇಶಿಸುತ್ತಿದ್ದಾರೆ. ಒಂದು ಕ್ಷೇತ್ರವನ್ನು ಇನ್ನೊಂದು ಕ್ಷೇತ್ರದವರು ಅತಿಕ್ರಮಣ ಮಾಡುವುದು ದುರಂತ. ಇಂಥವರ  ಆಯ್ಕೆಗಳು ರಾಜ್ಯಪಾಲರ ಅಂಕಿತ ದೊರಕುತ್ತಿದೆ’’ ಎಂದು ವಿಷಾದಿಸಿದರು.

ಲೇಖಕಿ ಸಂಕಮ್ಮ ಜಿ.ಸಂಕಣ್ಣನವರ ಮಾತನಾಡಿ, ಚಿತ್ರ ಸಾಹಿತ್ಯ ಹಾಗೂ ಸಾಹಿತ್ಯಕ್ಕೂ ಇರುವ ವ್ಯತ್ಯಾಸವನ್ನು ತಿಳಿಸಬೇಕೆಂದು ಕೋರಿದರು. ಅದಕ್ಕೆ ಪ್ರತಿಕ್ರಿಯಿಸಿದ ದೊಡ್ಡರಂಗೇಗೌಡರು, “ಒಂದು ಸಿನಿಮಾಕ್ಕೆ ಸಾಹಿತ್ಯ ರಚಿಸುವಾಗ ನಿರ್ದೇಶಕ, ನಿರ್ಮಾಪಕ ಹೇಳಿದ ಸನ್ನಿವೇಶಕ್ಕೆ ಸೂಕ್ತವಾಗಿ ಬರೆಯಬೇಕು. ಸಂಗೀತ, ಸ್ವರ ಪ್ರಸ್ತಾವವನ್ನು ತಿಳಿದು ಬರೆಯುತ್ತೇವೆ. ಒಮ್ಮೆ ಸುಲಭ ಸನ್ನಿವೇಶ ಸಿಗಬಹುದು, ಕೆಲವೊಮ್ಮೆ ಕ್ಲಿಷ್ಟ ಸನ್ನಿವೇಶ ಸಿಗಬಹುದು. ಆದರೆ ಸಾಹಿತ್ಯದಲ್ಲಿ ಕವಿಗೆ ನಿರ್ಬಂಧ ಇರುವುದಿಲ್ಲ. ತನ್ನ ಕಲ್ಪನಾ ಲೋಕದಲ್ಲಿ ಕವಿ ಬರೆಯಬಹುದು. ಸಮುದ್ರದ ಅಲೆಗಳಂತೆ ಭಾವನೆಗಳು ಬರುತ್ತವೆ. ಅಲ್ಲಿ ಸ್ವಂತಿಕೆಯನ್ನು ಪ್ರದರ್ಶಿಸಬಹುದು” ಎಂದು ತಮ್ಮ ಅನುಭವ ಹಂಚಿಕೊಂಡರು.

ಮಾಲತೇಶ ಅಂಗೂರ ಅವರು ಪ್ರಶ್ನಿಸಿ, “ಗೋಕಾಕ್ ಚಳವಳಿಯ ನಂತರದಲ್ಲಿ ಅಂತಹದೊಂದು ಕನ್ನಡದ ಚಳವಳಿ ಮತ್ತೆ ಹುಟ್ಟಲಿಲ್ಲ’’ ಎಂದು ಪ್ರಸ್ತಾಪಿಸಿದರು. ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸರ್ವಾಧ್ಯಕ್ಷರು, “ಗೋಕಾಕ್ ಚಳವಳಿಗಿಂತ ಮೀರಿದ ಚಳವಳಿ ಅಗತ್ಯವಿದೆ’’ ಎಂದರು.

ಡಾ.ಶಾರದಾ ಮುಳ್ಳೂರು ಅವರು ದೊಡ್ಡರಂಗೇಗೌಡರ ಸಾಹಿತ್ಯ ಬೇರೆ ಬೇರೆ ಭಾಷೆಗಳಿಗೆ ಅನುವಾದವಾಗಿದ್ದರ ಕುರಿತು ಮಾತನಾಡಿದರು. ಇತರ ಲೇಖಕರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: ಪ್ರಾತಿನಿಧ್ಯ ಸಮಸ್ಯೆಗಳಿಂದ ಕಾವೇರಿದ ಹಾವೇರಿ ಸಾಹಿತ್ಯ ಸಮ್ಮೇಳನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...