HomeUncategorizedಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ಉಪಚುನಾವಣೆ: ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ವಿಷಯವಾಗಿದೆ; ಯಾಕೆ?

ಭ್ರಷ್ಟಾಚಾರದ ಆರೋಪದಲ್ಲಿರುವ ಸಿಎಂ ಮಗ ವಿಜಯೇಂದ್ರ ಮೇಲೆ ಎಫ್ಐಆರ್ ದಾಖಲಾಗಿದ್ದು, ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಮನೆ, ಕಛೇರಿಗಳ ಮೇಲೆ ಸಿಬಿಐ ದಾಳಿಯಾಗಿತ್ತು. ಇನ್ನು ಕುಮಾರಸ್ವಾಮಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂದು ಇತ್ತೀಚೆಗೆ ಟೀಕೆಗೆ ಗುರಿಯಾಗಿದ್ದರು.

- Advertisement -
- Advertisement -

ವಿಧಾನಸಭೆಯಲ್ಲಿ 224ರಲ್ಲಿ 116 ಸ್ಥಾನಗಳನ್ನು ಹೊಂದಿರುವ ಬಿಜೆಪಿಗೆ ಕರ್ನಾಟಕದ ಎರಡು ವಿಧಾನಸಭಾ ಸ್ಥಾನಗಳಿಗೆ ಮುಂಬರುವ ಉಪಚುನಾವಣೆಗಳಲ್ಲಿನ ಸೋಲು ಗೆಲುವು ಒಟ್ಟು ಸ್ಥಾನಗಳ ಮೇಲೆ ದೊಡ್ಡ ಪ್ರಭಾವ ಬೀರುವುದಿಲ್ಲ. ಆದರೂ ಅವು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಮುಖ್ಯಮಂತ್ರಿ ಅವರ ಕುಟುಂಬದ ಸದಸ್ಯರಿಂದ ಭ್ರಷ್ಟಾಚಾರ ಮತ್ತು ಆಡಳಿತದಲ್ಲಿ ಹಸ್ತಕ್ಷೇಪದ ಆರೋಪ ಎದುರಿಸುತ್ತಿರುವ ಈ ಸಮಯದಲ್ಲಿ, ನವೆಂಬರ್ 3 ರಂದು ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಡೆಯುವ ಉಪಚುನಾವಣೆಗಳು ಅತ್ಯಂತ ಮಹತ್ವದ್ದೆನಿಸಿವೆ.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಈ ಉಪಚುನಾವಣೆಗಳು ಮಹತ್ವದ್ದಾಗಿವೆ. ಡಿ.ಕೆ.ಶಿವಕುಮಾರ್ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಸಿಬಿಐ ತನಿಖೆ ನಡೆಸುತ್ತಿದೆ. ಕಳೆದ ವರ್ಷ ಅವರು ಬಂಧನಕ್ಕೂ ಒಳಗಾಗಿದ್ದರು. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಗ್ಗೆ ಜನಾಭಿಪ್ರಾಯ ಸಂಗ್ರಹವೇ ಈ ಉಪಚುನಾವಣೆ ಎಂದು ಡಿ.ಕೆ.ಶಿವಕುಮಾರ್ ಬಣ್ಣಿಸಿದ್ದಾರೆ.

ಭ್ರಷ್ಟಾಚಾರದ ಆರೋಪದಲ್ಲಿರುವ ಸಿಎಂ ಮಗ ವಿಜಯೇಂದ್ರ ಮೇಲೆ ಎಫ್ಐಆರ್ ದಾಖಲಾಗಿದ್ದು, ಇತ್ತೀಚೆಗೆ ಡಿ.ಕೆ.ಶಿವಕುಮಾರ್ ಮನೆ, ಕಛೇರಿಗಳ ಮೇಲೆ ಸಿಬಿಐ ದಾಳಿಯಾಗಿತ್ತು. ಇನ್ನು ಕೆಪಿಎಸ್‌ಸಿ ಉದ್ಯೋಗಗಳಲ್ಲಿ ಅಕ್ರಮ ಎಸಗಿ ಕುಮಾರಸ್ವಾಮಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು ಎಂದು ಇತ್ತೀಚೆಗೆ ಟೀಕೆಗೆ ಗುರಿಯಾಗಿದ್ದರು.

ಇದನ್ನೂ ಓದಿ:ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ಜೆಡಿಎಸ್ ಶಾಸಕ ಬಿ ಸತ್ಯನಾರಾಯಣ ನಿಧನರಾದ ನಂತರ ಶಿರಾ ಸ್ಥಾನ ಖಾಲಿ ಬಿದ್ದಿದೆ. ಕಾಂಗ್ರೆಸ್ ಶಾಸಕ ಮುನಿರತ್ನ ನಾಯ್ಡು ಬಿಜೆಪಿಗೆ ಪಕ್ಷಾಂತರವಾದ ನಂತರ 2019 ರ ಜುಲೈನಲ್ಲಿ ಆರ್.ಆರ್.ನಗರ ಸ್ಥಾನ ಖಾಲಿ ಇತ್ತು.

ಕಾಂಗ್ರೆಸ್ ಮತ್ತು ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುತ್ತಿದ್ದರೆ, ಜೆಡಿಎಸ್ ಕೂಡ ಈ ಪ್ರದೇಶಗಳಲ್ಲಿ ಪ್ರಬಲ ಬೆಂಬಲವನ್ನು ಹೊಂದಿರುವ ಸ್ಪರ್ಧಿಯಾಗಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಭ್ರಷ್ಟಾಚಾರ ಆರೋಪದ ಕೇಂದ್ರಬಿಂದುವಾಗಿರುವ ಯಡಿಯೂರಪ್ಪ ಅವರ ಮಗ ಬಿ ವೈ ವಿಜಯೇಂದ್ರ ಅವರನ್ನು ಶಿರಾ ಉಪಚುನಾವಣೆಯ ಬಿಜೆಪಿಯ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಇಲ್ಲಿ ಡಾ.ರಾಜೇಶ್ ಗೌಡರನ್ನು ಬಿಜೆಪಿ ಕಣಕ್ಕಿಳಿಸಿದ್ದು, ಕಾಂಗ್ರೆಸ್ ಪಕ್ಷವು ತನ್ನ ಹಿರಿಯ ನಾಯಕ ಮತ್ತು ಮಾಜಿ ಸಚಿವ ಟಿ ಬಿ ಜಯಚಂದ್ರ ಅವರನ್ನು ಕಣಕ್ಕಿಳಿಸಿದೆ. ಸಹಾನುಭೂತಿಯ ಅಲೆಯನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನದಲ್ಲಿ ಜೆಡಿಎಸ್ ಮಾಜಿ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರನ್ನು ಕಣಕ್ಕಿಳಿಸಿದೆ.

ಆರ್‌.ಆರ್.ನಗರದಲ್ಲಿ ಜೆಡಿಎಸ್‌ನಿಂದ ವಿ.ಕೃಷ್ಣಮೂರ್ತಿ ಸ್ಪರ್ಧಿಸುತ್ತಿದ್ದು, ಬಿಜೆಪಿಗೆ ಪಕ್ಷಾಂತರವಾಗಿದ್ದ ಮುನಿರತ್ನ ಈ ಭಾರಿ ಬಿಜೆಪಿಯ ಅಭ್ಯರ್ಥಿಯಾಗಿದ್ದಾರೆ. ಇನ್ನು ಕಾಂಗ್ರೆಸ್‌ನಿಂದ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ.ರವಿ ಅವರ ಪತ್ನಿ ಕುಸುಮಾ ಕಣದಲ್ಲಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಭ್ರಷ್ಟ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಆಗಬೇಕು – ಸಿದ್ದರಾಮಯ್ಯ

ಈ ಉಪಚುನಾವಣೆಯ ಸೋಲು-ಗೆಲುವು ಯಾವುದೇ ಪಕ್ಷದ ಮೇಲೆ ಅಧಿಕಾರದ ದೃಷ್ಟಿಯಿಂದ ದೊಡ್ಡ ಪರಿಣಾಮ ಬೀರುವುದಿಲ್ಲ. ಅದಾಗ್ಯೂ, ಪ್ರತಿ ಪಕ್ಷಕ್ಕೂ ತಮ್ಮ ಪ್ರತಿಷ್ಠೆಯ ವಿಷಯದ ಸಾವಾಲಾಗಿ ಈ ಚುನಾವಣೆಗಳು ಪರಿಣಮಿಸಿವೆ. ಹಾಗಾಗಿಯೇ ಸ್ಪರ್ಧೆಯಲ್ಲಿರುವ ಪಕ್ಷಗಳು ಸಾಕಷ್ಟು ಅಬ್ಬರದ ಪ್ರಚಾರ ಮತ್ತು ಹಣದಹೊಳೆಯನ್ನು ಹರಿಸುತ್ತಿವೆ. ಇದರಲ್ಲಿ ಯಾರಿಗೆ ಗೆಲುವು ಎಂಬುದನ್ನು ಕಾದು ನೋಡಬೇಕಿದೆ.


ಇದನ್ನೂ ಓದಿ: ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...