Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...