Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...