Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...