Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...