Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....