Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...