Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...