Homeಕರ್ನಾಟಕಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

ಚಿಕ್ಕಬಳ್ಳಾಪುರ ಉಪಚುನಾವಣೆ: ಬಿಜೆಪಿಗೆ ನೆಲೆಯೇ ಇಲ್ಲದ ಕಡೆ ಸುಧಾಕರ್ ತಿಣುಕಾಟ

- Advertisement -
- Advertisement -

ಚಿಕ್ಕಬಳ್ಳಾಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಅಂತಹ ಹೆಚ್ಚಿನ ಕುತೂಹಲವಿರಲಿಲ್ಲ. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ನಡೆಯುವ ಲಕ್ಷಣಗಳು ಕಾಣುತ್ತಿವೆ. ಸುಧಾಕರ್ ಅನರ್ಹಗೊಂಡಿದ್ದರಿಂದ ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.. ಕ್ಷೇತ್ರದಲ್ಲಿ ಈಗಾಗಲೇ ಮೂರು ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದು ಅಭ್ಯರ್ಥಿಗಳ ಪರ ಮತಕ್ಕಾಗಿ ಬೇಡಿಕೊಳ್ಳುತ್ತಿದ್ದಾರೆ. ಮೂರು ಪಕ್ಷಗಳು ಕೂಡ ಒಕ್ಕಲಿಗ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಪಡೆಯುವ ಅಭ್ಯರ್ಥಿ ಗೆಲುವು ಖಚಿತ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಂದಿ ಆಂಜಿನಪ್ಪ, ಜೆಡಿಎಸ್ ಪಕ್ಷದಿಂದ ಯುವ ಮುಖಂಡ ರಾಧಾಕೃಷ್ಣ, ಬಿಜೆಪಿ ಪಕ್ಷದಿಂದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಸ್ಪರ್ಧೆಗಿಳಿದಿದ್ದಾರೆ. ಚಿಕ್ಕಬಳ್ಳಾಪುರ ಕೇಂದ್ರ ಮತ್ತು ಜಿಲ್ಲೆಯಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯ ಮೆರೆಯುತ್ತಾ ಬಂದಿವೆ. ಈ ಕಾರಣಕ್ಕಾಗಿಯೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಡಾ.ಸುಧಾಕರ್ ಗೆಲುವು ಸಾಧಿಸಿದ್ದು. 2013ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪ್ರಭಾವ ಬಳಸಿ ಸುಧಾಕರ್ ಟಿಕೆಟ್ ಗಿಟ್ಟಿಸಿಕೊಂಡಿದ್ದರಲ್ಲದೆ ಗೆದ್ದೂ ಬಂದಿದ್ದರು. 2018ರ ಹೊತ್ತಿಗೆ ಅವರು ಸಿದ್ದರಾಮಯ್ಯ ‘ಆಪ್ತ’ರಾಗಿ ಬದಲಾಗಿದ್ದರು. ಬದಲಾದ ಕಾಲಘಟ್ಟದಲ್ಲಿ ಸುಧಾಕರ್ ಬಿಜೆಪಿಯಿಂದ ಸ್ಪರ್ಧಿಸಿ ಮತ್ತೆ ಮತಭಿಕ್ಷೆಗೆ ಬಂದಿದ್ದಾರೆ. ಸುಧಾಕರ್‍ರ ಕ್ಷಣಕ್ಕೊಂದು ಬಣ್ಣ ಬದಲಿಸುವ ಊಸರವಳ್ಳಿ ನಡವಳಿಕೆಯು ಅವಕಾಶವಾದಿಯೆಂಬುದನ್ನು ಸಾಬೀತುಪಡಿಸಿದೆ. ಆದರೆ, ಕ್ಷೇತ್ರದಲ್ಲೂ ಅದೇ ಅಭಿಪ್ರಾಯ ಇದೆಯೆಂದು ಹೇಳಲಾಗದು. ಈ ಅವಧಿಯಲ್ಲಿ ತನ್ನ ಅಗ್ರೆಸಿವ್ ರಾಜಕಾರಣದಿಂದ ತನ್ನದೇ ಪಡೆಯನ್ನು ಕಟ್ಟಿಕೊಂಡಿದ್ದಾರೆ.

ಸುಧಾಕರ್‌ಗಿರುವ ಪ್ಲಸ್ ಪಾಯಿಂಟ್ಸ್

ಚಿಕ್ಕಬಳ್ಳಾಪುರದಲ್ಲಿ ನಾಲ್ಕು ಹೋಬಳಿಗಳಿವೆ. ಅವುಗಳೆಂದರೆ ನಂದಿ, ಮಂಚೇನಹಳ್ಳಿ, ಮಂಡಿಕಲ್ಲು ಮತ್ತು ಕಸಬಾ. ಈ ನಾಲ್ಕು ಹೋಬಳಿಗಳ ಪೈಕಿ ಸುಧಾಕರ್ ಅವರಿಗೆ ಕಸಬಾ, ಮಂಚೇನಹಳ್ಳಿ ಮತ್ತು ಚಿಕ್ಕಬಳ್ಳಾಪುರ ಟೌನ್‍ನಲ್ಲಿ ಲೀಡ್ ಸಿಗುವ ಸಾಧ್ಯತೆ ಇದೆ. ಯಡಿಯೂರಪ್ಪನವರು ಮಂಚೇನಹಳ್ಳಿ ಹೋಬಳಿಯನ್ನು ತಾಲೂಕನ್ನಾಗಿ ಮಾಡುವ ಆದೇಶ ನೀಡಿರುವುದು ಸುಧಾಕರ್‍ಗೆ ಮತ್ತಷ್ಟು ಪ್ಲಸ್ ಪಾಯಿಂಟ್ ಆಗುತ್ತದಾ ಎಂಬುದನ್ನು ನೋಡಬೇಕು. ಜೊತೆಗೆ ಬಿಜೆಪಿ ಮುಖಂಡ ಪಿ.ಸಿ.ಮೋಹನ್ ಸುಧಾಕರ್ ಪರ ಪ್ರಚಾರ ಮಾಡುತ್ತಿರುವುದರಿಂದ ಬಲಜಿಗರ ಮತಗಳು ಇತ್ತ ವಾಲಬಹುದು.

ಸುಧಾಕರ್ ಬೆಂಬಲಿಗ ಕಾಂಗ್ರೆಸ್‍ನ ಪ್ರಕಾಶ್ ಅವರನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ನೀಡಿ ಮಾಜಿ ಸಚಿವ ಶಿವಶಂಕರ್ ರೆಡ್ಡಿ ಸೆಳೆಯಲು ನೋಡಿದ್ದರು. ಆದರೆ, ಪ್ರಕಾಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಅವರ ಕೈಲಿ ಆಗಲಿಲ್ಲ. ಬದಲಿಗೆ ಬಂಡಾಯ ಅಭ್ಯರ್ಥಿ ಚಿನ್ನಿ ಜಿ.ಪಂ ಅಧ್ಯಕ್ಷರಾಗಿಬಿಟ್ಟರು. ಈ ಹಿನ್ನೆಲೆಯಲ್ಲಿ ಪ್ರಕಾಶ್‍ಗೆ ಸ್ಥಾನ ಸಿಕ್ಕರೆ ಸುಧಾಕರ್‍ರನ್ನು ಬಿಡುವ ಸಾಧ್ಯತೆಯಿದ್ದ, ಎಪಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಮಸ್ವಾಮಿ, ಮರಳುಕುಂಟೆ ಕೃಷ್ಣಮೂರ್ತಿ ಈಗ ಡಾ.ಸುಧಾಕರ್ ಬೆನ್ನಿಗೆ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಗೆದ್ದು ಬಂದಾಗ ಸುಧಾಕರ್ 82 ಸಾವಿರ ಮತ ಪಡೆದಿದ್ದರು. ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಕೆ.ಪಿ.ಬಚ್ಚೇಗೌಡ 50 ಸಾವಿರ ಮತ ಗಳಿಸಿದ್ದರು. ಅಂದರೆ ಸುಧಾಕರ್ 30 ಸಾವಿರ ಓಟುಗಳ ಅಂತರದಿಂದ ವಿಜಯ ಸಾಧಿಸಿದ್ದರು. 2014ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಕೇವಲ 5 ಸಾವಿರ ಮತ ಪಡೆಯಲು ಸಾಧ್ಯವಾಗಿತ್ತು. ಆಚೆಗಿನ ಚುನಾವಣೆಯಲ್ಲಿ ಕೇವಲ ಮೂರು ಸಾವಿರ ಮತ ಪಡೆದಿದ್ದರು. ಹೀಗಾಗಿ ಬಿಜೆಪಿಯ ಸಾಂಪ್ರದಾಯಿಕ ಮತಗಳು ಎಂಬುದು ಈ ಕ್ಷೇತ್ರದಲ್ಲಿಲ್ಲ. ಆದ್ದರಿಂದಲೇ ಸುಧಾಕರ್ ತಿಣುಕಾಡುತ್ತಿದ್ದಾರೆ. ಈಗ ಕ್ಷೇತ್ರದಲ್ಲಿ ಹರಿದಾಡುತ್ತಿರುವ ಸುದ್ದಿಯೆಂದರೆ ಸುಧಾಕರ್ ತನ್ನ ಸಾಯಿಕೃಷ್ಣ ಟ್ರಸ್ಟ್ ಮೂಲಕ ಮನೆಮನೆಗೂ ಟಿವಿ, ಕುಕ್ಕರ್, ಮಿಕ್ಸಿ, ಮಹಿಳೆಯರಿಗೆ ಸೀರೆ ಕೊಟ್ಟಿರುವುದಲ್ಲದೆ ಜನರಿಗೆ ಸಾಲವನ್ನೂ ಕೊಡಿಸಿದ್ದಾರೆ. ಇವೆಲ್ಲವನ್ನೂ ‘ಸರಿಯಾಗಿ’ ತಲುಪಿಸಲು ಅವರು ಸೂಚಿಸಿರುವ ಆಡಿಯೋ ಎಲ್ಲೆಡೆ ಓಡಾಡುತ್ತಿದೆ.

ಆದರೆ ಕ್ಷೇತ್ರದಲ್ಲಿ ಸುತ್ತಾಡಿ ಜನರನ್ನು ಮಾತನಾಡಿಸಿದರೆ ಸುಧಾಕರ್ ಬಗ್ಗೆ ಅಷ್ಟೊಂದು ಒಲವು ವ್ಯಕ್ತಪಡಿಸುತ್ತಿಲ್ಲ. ಸುಧಾಕರ್ ಅಭಿವೃದ್ಧಿ ಕೆಲಸಗಳು ಮಾಡಿರುವ ಕುರಿತು ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿವೆ. ಜೊತೆಗೆ ಸುಧಾಕರ್ ಸಮಯಸಾಧಕ. ವಿಶ್ವಾಸಕ್ಕೆ ಅರ್ಹನಲ್ಲದ ವ್ಯಕ್ತಿ. ಗಿಮಿಕ್ ಮಾಡುವುದರಲ್ಲಿ ಎತ್ತಿದ ಕೈ. ಸುಧಾಕರ್ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಪ್ರಯತ್ನಪಟ್ಟಿಲ್ಲ. ಎತ್ತಿನಹೊಳೆ ಯೋಜನೆ ಕೈಗೆತ್ತಿಕೊಂಡು 7 ವರ್ಷವಾಯಿತು. ಇದುವರೆಗೂ ಜಿಲ್ಲೆಗೆ ನೀರು ತರಲು ಸಾಧ್ಯವಾಗಿಲ್ಲ. ನೀರಾವರಿಗೆ ಸೌಲಭ್ಯ ಕಲ್ಪಿಸಿಲ್ಲ. ಒಂದೇ ಒಂದು ಇಂಡಸ್ಟ್ರಿ ತಂದಿಲ್ಲ. ಎಚ್.ಎನ್. ವ್ಯಾಲಿ ಮೂಲಕ ಕುಡಿಯುವ ನೀರು ತರುವ ಭರವಸೆ ನೀಡಿದ ಸುಧಾಕರ್ ಅದನ್ನು ಕೊಡಲು ಸಾಧ್ಯವಾಗಿಲ್ಲ ಎಂಬುದು ಜೆಡಿಎಸ್ ಸ್ಥಳೀಯ ಮುಖಂಡರ ಆರೋಪ.

ಸದ್ಯಕ್ಕೆ ಜೆಡಿಎಸ್ ನಿಂದ ಕೆ.ಪಿ.ಬಚ್ಚೇಗೌಡ ಮತ್ತು ಯುವ ಮುಖಂಡ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ರಾಧಾಕೃಷ್ಣ ಹಣವಿರುವ ಕುಳ. ಎಷ್ಟು ಬೇಕಾದರೂ ಖರ್ಚು ಮಾಡಬಲ್ಲ ಸಾಮಥ್ರ್ಯವಿರುವ ವ್ಯಕ್ತಿ. ಆದರೆ ಕಣದಲ್ಲಿ ಯಾರು ಉಳಿಯುತ್ತಾರೆಂಬುದರ ಮೇಲೆ ಮತಗಳು ಬೀಳಲಿವೆ. ಇನ್ನು ಕಾಂಗ್ರೆಸ್ ನಂದಿ ಅಂಜನಪ್ಪ ಅವರನ್ನು ಕಣಕ್ಕಿಳಿಸಿದೆ. ಮೂವರು ಅಭ್ಯರ್ಥಿಗಳು ಒಕ್ಕಲಿಗರಾಗಿರುವುದರಿಂದ ಒಕ್ಕಲಿಗ ಸಮುದಾಯದ ಮತಗಳು ಹಂಚಿಕೆಯಾಗಲಿವೆ. ಕಾಂಗ್ರೆಸ್ ತನ್ನ ಸಾಂಪ್ರದಾಯಕ ಮತಗಳನ್ನು ನೆಚ್ಚಿಕೊಂಡಿದೆ. ಕುರುಬರ ಮತಗಳು ಕಾಂಗ್ರೆಸ್‍ಗೆ ಬೀಳಲಿವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮುಸ್ಲಿಂ ಮತಗಳು ಯಾರಿಗೆ ಬೀಳಲಿವೆ ಎಂಬುದರ ಮೇಲೆ ಫಲಿತಾಂಶ ನಿಶ್ಚಯವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...