Homeಕರ್ನಾಟಕಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ಉಪಚುನಾವಣೆ: 2 ವರ್ಷದಲ್ಲಿ BJP ಅಭ್ಯರ್ಥಿ ಮುನಿರತ್ನ ಆಸ್ತಿ ದುಪ್ಪಟ್ಟು!

ಆರ್‌ಆರ್‌ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಎರಡೂವರೆ ಕೋಟಿ ರೂ. ಆಸ್ತಿ ಹೊಂದಿದ್ದರೆ, ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ.ವಿ ತಮ್ಮ ಮತ್ತು ಪತ್ನಿಯ ಆಸ್ತಿ ಸೇರಿ 19 ಕೋಟಿ ರೂ ಎಂದು ಘೋಷಿಸಿಕೊಂಡಿದ್ದಾರೆ.

- Advertisement -
- Advertisement -

ನವೆಂಬರ್ 3 ರಂದು ನಡೆಯಲಿರುವ ಆರ್‌.ಆರ್‌.ನಗರ, ಶಿರಾ ಉಚಚುನಾವಣೆ ನಡೆಯಲಿದೆ. ಇಷ್ಟು ದಿನ ಅಭ್ಯರ್ಥಿಗಳು ಯಾರು ಎಂಬುದು ಒಂಥರಾ ಕುತೂಹಲವಾಗಿದ್ದರೇ, ನಾಮಪತ್ರ ಸಲ್ಲಿಕೆ ನಂತರ ಅಭ್ಯರ್ಥಿಗಳ ಆಸ್ತಿ ವಿವರಗಳು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ರಾಜರಾಜೇಶ್ವರಿನಗರ ಉಪಚುನಾವಣೆಯ ಬಿಜೆಪಿಯ ಅಭ್ಯರ್ಥಿ, ಅನರ್ಹ ಶಾಸಕ ಮುನಿರತ್ನ ಅವರು ತಮ್ಮ ಚುನಾವಣಾ ಅಫಿಡವಿಟ್ ಸಲ್ಲಿಸಿದ್ದು, ಅಫಿಡವಿಟ್ ಪ್ರಕಾರ ಎರಡು ವರ್ಷಗಳಲ್ಲಿ ಮುನಿರತ್ನ ಅವರ ಆಸ್ತಿ ದುಪ್ಪಟ್ಟಾಗಿದೆ. ಕೆಲವೇ ವರ್ಷಗಳಲ್ಲಿ ಮುನಿರತ್ನ ನೂರು ಕೋಟಿ ಆಸ್ತಿಯ ಒಡೆಯನಾಗಲಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಮುನಿರತ್ನ ಆ ಸಮಯದಲ್ಲಿ ಅವರ ಹಾಗೂ ಅವರ ಪತ್ನಿ ಒಟ್ಟು 43.71 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಚುನಾವಣಾಧಿಕಾರಿಗೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ಈಗ ಬಿಜೆಪಿ ಅಭ್ಯರ್ಥಿಯಾಗಿ ಉಪಚುನಾವಣೆಗೆ ಸ್ಪರ್ಧಿಸಿ ನಾಮಪತ್ರ ಸಲ್ಲಿಸುವಾಗ ನೀಡಿರುವ ಪ್ರಮಾಣಪತ್ರದಲ್ಲಿ 89.13 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಮುನಿರತ್ನ ಅನೇಕ ಕಡೆಗಳಲ್ಲಿ ಕೃಷಿ ಭೂಮಿಯನ್ನು ಹೊಂದಿದ್ದು, ಅವುಗಳಲ್ಲಿ ಕೆಲವು ಈ ವರ್ಷದ ಸೆಪ್ಟೆಂಬರ್, ಆಗಸ್ಟ್, ಜುಲೈ ಮತ್ತು ಫೆಬ್ರವರಿಗಳಲ್ಲಿ ಖರೀದಿಸಲ್ಪಟ್ಟಿವೆ.

ಮುನಿರತ್ನ ಒಟ್ಟು 29.11 ಕೋಟಿ ರೂ. ಅವರ ಪತ್ನಿ ಮಂಜುಳಾ ₹ 40.97 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ದಂಪತಿಯ ಆಸ್ತಿಯ ಮೌಲ್ಯ ಶೇಕಡ 103ರಷ್ಟು ಹೆಚ್ಚಳವಾಗಿದೆ.

ಚಲನಚಿತ್ರ ನಿರ್ಮಾಪಕರು ಆಗಿರುವ ಮುನಿರತ್ನ ಆದಾಯಕ್ಕಿಂತ ಸಾಲ ಹೆಚ್ಚಿದೆ ಎಂದು ಹೇಳಿಕೊಂಡಿದ್ದಾರೆ. ದಂಪತಿ ಒಟ್ಟು 46.41 ಕೋಟಿ ರೂ. ಮೊತ್ತದ ಸಾಲ ಹೊಂದಿದ್ದಾರೆ. ಜೊತೆಗೆ ವಿವಿಧ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ 21.37 ಕೋಟಿ ರೂಪಾಯಿ ಸಾಲ ನೀಡಿದ್ದಾರೆ.

ಮುನಿರತ್ನ ಬಳಿ 3,930 ಗ್ರಾಂ ಬಂಗಾರ, 111.27 ಕ್ಯಾರೆಟ್ ವಜ್ರ ಇದ್ದರೆ, ಬೆಳ್ಳಿ 40 ಕೆಜಿ ಇದೆ. ಅವರ ಪತ್ನಿ ಬಳಿ 4.40 ಲಕ್ಷ ಮೌಲ್ಯದ 360 ಗ್ರಾಂ ಬಂಗಾರವಿದೆ. ಮುನಿರತ್ನ ಬಳಿ 1.31 ಕೋಟಿ ಮೌಲ್ಯದ  30 ವಾಹನಗಳು ಅವರ ಬಳಿ ಇದ್ದು, ಹೆಂಡತಿಯ ಬಳಿ ಯಾವುದೇ ವಾಹನಗಳಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ: ಆರ್‌.ಆರ್‌ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ರವಿ ಪತ್ನಿ ಕುಸುಮಾ-ಸಿದ್ದರಾಮಯ್ಯ

ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದ ಒಂದು ಪ್ರಕರಣ, ನಂಬಿಕೆ ದ್ರೋಹ, ಫೋರ್ಜರಿ, ಒಳಸಂಚು ಸೇರಿದಂತೆ ಜನರ ಪ್ರಾತಿನಿಧ್ಯ ಕಾಯ್ದೆಯಡಿ ತನ್ನ ವಿರುದ್ಧ ಮೂರು ಎಫ್‌ಐಆರ್‌ ಮತ್ತು ಐದು ಕ್ರಿಮಿನಲ್‌ ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆ ಎಂದು ತಿಳಿಸಿದ್ದಾರೆ.

56 ವರ್ಷದ ಮುನಿರತ್ನ ಅವರು 2013 ಮತ್ತು 2018 ರ ಚುನಾವಣೆಯಲ್ಲಿ ರಾಜರಾಜೇಶ್ವರಿನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಗಳಿಸಿದರು. ನಂತರ ಬಿಜೆಪಿ ಸೇರಿದ್ದರು. ಕಳೆದ ವರ್ಷ ಅವರು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ 17 ಜನ ಶಾಸಕರಲ್ಲಿ ಒಬ್ಬರಾಗಿದ್ದರು.

ಇನ್ನು ಆರ್‌ಆರ್‌ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಎರಡೂವರೆ ಕೋಟಿ ರೂ. ಆಸ್ತಿ ಮತ್ತು 20 ಲಕ್ಷ ರೂಪಾಯಿ ಸಾಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ.ವಿ ತಮ್ಮ ಮತ್ತು ತಮ್ಮ ಪತ್ನಿಯ ಬಳಿಯ ಆಸ್ತಿ ಸೇರಿ 19 ಕೋಟಿ ರೂಪಾಯಿ ಎಂದು ಘೋಷಿಸಿಕೊಂಡಿದ್ದಾರೆ.


ಇದನ್ನೂ ಓದಿ: ಪಕ್ಷಾಂತರದಿಂದ ಆರ್‌ಆರ್ ನಗರ ಉಪಚುನಾವಣೆ: ರಾಜಕೀಯ ದಿಕ್ಕು ಬದಲಿಸುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...